ಸಾಂದರ್ಭಿಕ ಚಿತ್ರ 
ರಾಜ್ಯ

ತಾಂತ್ರಿಕ ದೋಷ: ಕೆಐಎಗೆ ಮರಳಿದ ಗೋ ಏರ್ ವಿಮಾನ, ನಿಲ್ದಾಣದಲ್ಲೇ ಪ್ರಯಾಣಿಕರ ಪ್ರತಿಭಟನೆ

ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಗುರುವಾರ ರಾತ್ರಿ ಥೈಲ್ಯಾಂಡ್ ನ ಪುಕೆಟ್ ತೆರಳುತ್ತಿದ್ದ ಗೋ  ಏರ್  ವಿಮಾನ ತಾಂತ್ರಿಕ  ದೋಷದಿಂದ  ಬೆಂಗಳೂರಿಗೆ ಮರಳಿತು.

ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಗುರುವಾರ ರಾತ್ರಿ ಥೈಲ್ಯಾಂಡ್ ನ ಪುಕೆಟ್ ತೆರಳುತ್ತಿದ್ದ ಗೋ  ಏರ್  ವಿಮಾನ ತಾಂತ್ರಿಕ  ದೋಷದಿಂದ  ಬೆಂಗಳೂರಿಗೆ ಮರಳಿತು.ಈ ಘಟನೆ ನಡೆದಾಗ  173 ಪ್ರಯಾಣಿಕರೊಂದಿಗೆ ವಿಮಾನ 10,000 ಅಡಿ ಎತ್ತರದಲ್ಲಿ ಹಾರಾಡುತ್ತಿತ್ತು ಎನ್ನಲಾಗಿದೆ. 

ಜಿ8 -241, ಸಂಖ್ಯೆಯ ನಿಯೋ ಎ320 ವಿಮಾನ ಶುಕ್ರವಾರ ಬೆಳಗ್ಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ  ಬೆಳಗ್ಗೆ 2-30 ರ ಸುಮಾರಿನಲ್ಲಿ ಟೇಕಾಪ್ ಆಗಿದೆ. ಆದರೆ, ಹಾರಾಟದ ಮಧ್ಯೆದಲ್ಲಿ ತಾಂತ್ರಿಕ ದೋಷ ಉಂಟಾಗಿ ಬೆಂಗಳೂರಿಗೆ ವಾಪಾಸ್ ಆಗಿದೆ. 

ತಾಂತ್ರಿಕ ಸಮಸ್ಯೆಯನ್ನು ಪರಿಹರಿಸಲು ಎಂಜಿನಿಯರ್ ಗಳ ತಂಡ ಮೂರ್ನಾಲ್ಕು ತಾಸು ತೆಗೆದುಕೊಂಡಿತ್ತು. ಅಷ್ಟರಲ್ಲೇ ವಿಮಾನದ ಪೈಲೆಟ್ ಸೇರಿದಂತೆ ಇನ್ನಿತರ ಸಿಬ್ಬಂದಿಯ ಪಾಳಿ ಮುಗಿದುಹೋಗಿತ್ತು. ಹೀಗಾಗಿ, ಪರ್ಯಾಯ ಸಿಬ್ಬಂದಿಯನ್ನು ಗೋಏರ್ ಕಲ್ಪಿಸಿದೆ.

ಆದರೆ, ಶುಕ್ರವಾರ ಬೆಳಗ್ಗೆ ಮಂಜು ಆವರಿಸಿದ ಕಾರಣ ವಿಮಾನ ಹಾರಾಟ ಮತ್ತಷ್ಟು ವಿಳಂಬವಾಯಿತು. ಇದರಿಂದಾಗಿ ವಿಮಾನದಲ್ಲಿದ್ದ ನೂರಕ್ಕೂ ಹೆಚ್ಚು ಪ್ರಯಾಣಿಕರು ಏರ್ಲೈನ್ಸ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಮಂಜು ಮುಸುಕಿದ ವಾತಾವರಣ ತುಂಬಾ ಹೊತ್ತಿನವರೆಗೂ ಮುಂದುವರೆದ ಕಾರಣ ವಿಮಾನದಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಲಾಯಿತು. 

 ತಾಂತ್ರಿಕ ಕಾರಣದಿಂದ ಸುಮಾರು 6 ತಾಸು ವಿಮಾನದೊಳಗೆ ಕುಳಿತಿದ್ದ ನೂರಕ್ಕೂ ಹೆಚ್ಚು ಪ್ರಯಾಣಿಕರು ಗೋ ಏರ್ ಏರ್ ಲೈನ್ಸ್ ವಿರುದ್ಧ ವಿಮಾನ ನಿಲ್ದಾಣದಲ್ಲಿ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ ಘಟನೆಯೂ ನಡೆದಿದೆ. ಪ್ರಯಾಣಿಕರಿಗೆ ತೊಂದರೆಯಾದ ಹಿನ್ನೆಲೆಯಲ್ಲಿ ಗೋ ಏರ್ ಕಂಪನಿ ವಿಷಾಧ ವ್ಯಕ್ತಪಡಿಸಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Operation Sindoor ಬಳಿಕ ಪಂಜಾಬ್ ಅಸ್ಥಿರಗೊಳಿಸಲು ಪಾಕ್ proxy war; 'ಸಂಘಟಿತ ಅಪರಾಧ ಬೇರುಸಹಿತ ಕಿತ್ತೊಗೆಯುತ್ತೇವೆ'!

New year 2026: ನಗರದಾದ್ಯಂತ ಸಂಭ್ರಮಾಚರಣೆ: ಸಂಭ್ರಮದ ಮಧ್ಯೆ ಯುವಕರ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ!

UP: 2025 ರಲ್ಲಿ 2,500 ಕ್ಕೂ ಹೆಚ್ಚು ಎನ್‌ಕೌಂಟರ್‌; 48 ಸಾವು, 8 ವರ್ಷಗಳಲ್ಲಿ ಅತಿ ಹೆಚ್ಚು

ಭಾರತ-ಬಾಂಗ್ಲಾದೇಶ ಸಂಬಂಧಗಳಿಗೆ ಖಲೀದಾ ಜಿಯಾ ಕೊಡುಗೆ ನೀಡಿದ್ದಾರೆ: ತಾರಿಕ್ ರೆಹಮಾನ್‌ಗೆ ಪ್ರಧಾನಿ ಮೋದಿ ಪತ್ರ

'CEC ತಾಳ್ಮೆ ಕಳೆದುಕೊಳ್ಳುತ್ತಿದ್ದಾರೆ'; SIR ಕುರಿತು ನಮ್ಮ ಕಳವಳ ಪರಿಹರಿಸಿಲ್ಲ: ಅಭಿಷೇಕ್ ಬ್ಯಾನರ್ಜಿ

SCROLL FOR NEXT