ಸಾಂದರ್ಭಿಕ ಚಿತ್ರ 
ರಾಜ್ಯ

ತಾಂತ್ರಿಕ ದೋಷ: ಕೆಐಎಗೆ ಮರಳಿದ ಗೋ ಏರ್ ವಿಮಾನ, ನಿಲ್ದಾಣದಲ್ಲೇ ಪ್ರಯಾಣಿಕರ ಪ್ರತಿಭಟನೆ

ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಗುರುವಾರ ರಾತ್ರಿ ಥೈಲ್ಯಾಂಡ್ ನ ಪುಕೆಟ್ ತೆರಳುತ್ತಿದ್ದ ಗೋ  ಏರ್  ವಿಮಾನ ತಾಂತ್ರಿಕ  ದೋಷದಿಂದ  ಬೆಂಗಳೂರಿಗೆ ಮರಳಿತು.

ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಗುರುವಾರ ರಾತ್ರಿ ಥೈಲ್ಯಾಂಡ್ ನ ಪುಕೆಟ್ ತೆರಳುತ್ತಿದ್ದ ಗೋ  ಏರ್  ವಿಮಾನ ತಾಂತ್ರಿಕ  ದೋಷದಿಂದ  ಬೆಂಗಳೂರಿಗೆ ಮರಳಿತು.ಈ ಘಟನೆ ನಡೆದಾಗ  173 ಪ್ರಯಾಣಿಕರೊಂದಿಗೆ ವಿಮಾನ 10,000 ಅಡಿ ಎತ್ತರದಲ್ಲಿ ಹಾರಾಡುತ್ತಿತ್ತು ಎನ್ನಲಾಗಿದೆ. 

ಜಿ8 -241, ಸಂಖ್ಯೆಯ ನಿಯೋ ಎ320 ವಿಮಾನ ಶುಕ್ರವಾರ ಬೆಳಗ್ಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ  ಬೆಳಗ್ಗೆ 2-30 ರ ಸುಮಾರಿನಲ್ಲಿ ಟೇಕಾಪ್ ಆಗಿದೆ. ಆದರೆ, ಹಾರಾಟದ ಮಧ್ಯೆದಲ್ಲಿ ತಾಂತ್ರಿಕ ದೋಷ ಉಂಟಾಗಿ ಬೆಂಗಳೂರಿಗೆ ವಾಪಾಸ್ ಆಗಿದೆ. 

ತಾಂತ್ರಿಕ ಸಮಸ್ಯೆಯನ್ನು ಪರಿಹರಿಸಲು ಎಂಜಿನಿಯರ್ ಗಳ ತಂಡ ಮೂರ್ನಾಲ್ಕು ತಾಸು ತೆಗೆದುಕೊಂಡಿತ್ತು. ಅಷ್ಟರಲ್ಲೇ ವಿಮಾನದ ಪೈಲೆಟ್ ಸೇರಿದಂತೆ ಇನ್ನಿತರ ಸಿಬ್ಬಂದಿಯ ಪಾಳಿ ಮುಗಿದುಹೋಗಿತ್ತು. ಹೀಗಾಗಿ, ಪರ್ಯಾಯ ಸಿಬ್ಬಂದಿಯನ್ನು ಗೋಏರ್ ಕಲ್ಪಿಸಿದೆ.

ಆದರೆ, ಶುಕ್ರವಾರ ಬೆಳಗ್ಗೆ ಮಂಜು ಆವರಿಸಿದ ಕಾರಣ ವಿಮಾನ ಹಾರಾಟ ಮತ್ತಷ್ಟು ವಿಳಂಬವಾಯಿತು. ಇದರಿಂದಾಗಿ ವಿಮಾನದಲ್ಲಿದ್ದ ನೂರಕ್ಕೂ ಹೆಚ್ಚು ಪ್ರಯಾಣಿಕರು ಏರ್ಲೈನ್ಸ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಮಂಜು ಮುಸುಕಿದ ವಾತಾವರಣ ತುಂಬಾ ಹೊತ್ತಿನವರೆಗೂ ಮುಂದುವರೆದ ಕಾರಣ ವಿಮಾನದಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಲಾಯಿತು. 

 ತಾಂತ್ರಿಕ ಕಾರಣದಿಂದ ಸುಮಾರು 6 ತಾಸು ವಿಮಾನದೊಳಗೆ ಕುಳಿತಿದ್ದ ನೂರಕ್ಕೂ ಹೆಚ್ಚು ಪ್ರಯಾಣಿಕರು ಗೋ ಏರ್ ಏರ್ ಲೈನ್ಸ್ ವಿರುದ್ಧ ವಿಮಾನ ನಿಲ್ದಾಣದಲ್ಲಿ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ ಘಟನೆಯೂ ನಡೆದಿದೆ. ಪ್ರಯಾಣಿಕರಿಗೆ ತೊಂದರೆಯಾದ ಹಿನ್ನೆಲೆಯಲ್ಲಿ ಗೋ ಏರ್ ಕಂಪನಿ ವಿಷಾಧ ವ್ಯಕ್ತಪಡಿಸಿದೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಪ್ರವಾಹದಿಂದ ಬೆಳೆಹಾನಿ: ಪ್ರತಿ ಹೆಕ್ಟೇರ್ ಗೆ ಹೆಚ್ಚುವರಿ ರೂ. 8,500 ಪರಿಹಾರ- ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಮಳೆ ಹಾನಿಯಿಂದ 52 ಮಂದಿ ಸಾವು: ವಾರಸುದಾರರಿಗೆ ಪರಿಹಾರ ವಿತರಣೆ- ಸಿಎಂ ಸಿದ್ದರಾಮಯ್ಯ

Gaza deal: ಹಮಾಸ್‌ಗೆ ಮೂರ್ನಾಲ್ಕು ದಿನಗಳ ಗಡುವು, ನಕಾರ ಮಾಡಿದ್ರೆ 'ನರಕ'ಕ್ಕೆ ದಾರಿ ತೋರಿಸ್ತಿವಿ! ಟ್ರಂಪ್ ಗುಡುಗು

Rahul Security: ರಾಹುಲ್, ಸೋನಿಯಾ, ಪ್ರಿಯಾಂಕಾ ಜೀವಕ್ಕೆ ಅಪಾಯ: ಭದ್ರತೆ ಹೆಚ್ಚಳಕ್ಕೆ ಕಾಂಗ್ರೆಸ್ ಒತ್ತಾಯ

ನಾನು ಜೋಕರ್ ರೀತಿ ನಿಂತಿದ್ದೆ: ಏಷ್ಯಾಕಪ್ ಟ್ರೋಫಿ ಖಾಸಗಿ ವ್ಯಕ್ತಿಯ ಆಸ್ತಿಯಲ್ಲ, BCCI ಉಪಾಧ್ಯಕ್ಷರ ಪ್ರಶ್ನೆಗೆ ನಖ್ವಿ ತತ್ತರ!

SCROLL FOR NEXT