ಆರ್ ಅಶೋಕ್ 
ರಾಜ್ಯ

ಜಿಲ್ಲಾಧಿಕಾರಿಗಳನ್ನು 'ಕಲೆಕ್ಟರ್' ಎಂದು ಕರೆಯಲು ಚಿಂತನೆ: ಆರ್. ಅಶೋಕ್

ರಾಜ್ಯದಲ್ಲಿ ಇನ್ನು ಮುಂದೆ ಜಿಲ್ಲಾಧಿಕಾರಿಗಳ ಹೆಸರನ್ನು ಬದಲಾವಣೆ ಮಾಡಲು ತೀರ್ಮಾನಿಸಿದ್ದು, ಜಿಲ್ಲಾಧಿಕಾರಿ ಹೆಸರನ್ನು " ಕಲೆಕ್ಟರ್'' ಎಂದು ನಾಮಕರಣ ಮಾಡಲು ಚಿಂತನೆ ನಡಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. 

ಬೆಂಗಳೂರು: ರಾಜ್ಯದಲ್ಲಿ ಇನ್ನು ಮುಂದೆ ಜಿಲ್ಲಾಧಿಕಾರಿಗಳ ಹೆಸರನ್ನು ಬದಲಾವಣೆ ಮಾಡಲು ತೀರ್ಮಾನಿಸಿದ್ದು, ಜಿಲ್ಲಾಧಿಕಾರಿ ಹೆಸರನ್ನು " ಕಲೆಕ್ಟರ್ " ಎಂದು ನಾಮಕರಣ ಮಾಡಲು ಚಿಂತನೆ ನಡಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. 


ಸುದ್ದಿಗಾರರ ಜತೆ ಮಾತನಾಡಿದ ಅವರು, ದೇಶದ ಎಲ್ಲಾ ಕಡೆ ಜಿಲ್ಲಾಧಿಕಾರಿಗಳನ್ನು ಕಲೆಕ್ಟರ್ ಎಂದು ಕರೆಯುತ್ತಾರೆ. ಆಂಧ್ರಪ್ರದೇಶ, ತೆಲಂಗಾಣ,  ತಮಿಳುನಾಡಿನಲ್ಲೂ ಕಲೆಕ್ಟರ್ ಎಂದು ಸಂಬೋಧಿಸುತ್ತಾರೆ. ಕಂದಾಯ ಮತ್ತು ಮಾರಾಟ ತೆರಿಗೆ, ಅಬಕಾರಿ ಇಲಾಖೆಯಲ್ಲೂ ಡಿಸಿ ಎಂದು ಕರೆಯಲಾಗುತ್ತದೆ. ಹೀಗಾಗಿ ಜಿಲ್ಲಾಡಳಿತದ ಮುಖ್ಯಸ್ಥರಾದ ಜಿಲ್ಲಾಧಿಕಾರಿಗಳನ್ನು ಇದೇ ಹೆಸರಿನಿಂದ ಕರೆಯುವುದು ಸರಿಯಲ್ಲ. ಹಾಗಾಗಿ ಕಲೆಕ್ಟರ್ ಎಂದು ಕರೆಯುವುದು ಸೂಕ್ತ ಎಂಬ ಕಾರಣದಿಂದ ನಾಮಕರಣ ಮಾಡಲು ಉದ್ದೇಶಿಸಲಾಗಿದೆ. ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜತೆ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು. 


ಭೂ ಪರಿವರ್ತನೆ ಆಗದ ಹಾಗೂ ಅಕ್ರಮ ನಿವೇಶನಗಳ ನೊಂದಣಿ ದೂರುಗಳು ಬಂದ ಹಿನ್ನೆಲೆಯಲ್ಲಿ ಕಂದಾಯ ನಿವೇಶನಗಳ ನೋಂದಣಿ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿದೆ. ಕಂದಾಯ ಇಲಾಖೆಯ "ಕಾವೇರಿ ತಂತ್ರಾಂಶ"ದಲ್ಲೂ ಇಂತಹ ನಿವೇಶನಗಳನ್ನು ನೋಂದಣಿಗೆ ಸ್ವೀಕರಿಸುತ್ತಿಲ್ಲ. ಈ ಕುರಿತು ಪರ, ವಿರೋಧವಿದ್ದು ಸಮಗ್ರ ಮಾಹಿತಿ ಪಡೆದು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

SCROLL FOR NEXT