ಆರ್ ಅಶೋಕ್ 
ರಾಜ್ಯ

ಜಿಲ್ಲಾಧಿಕಾರಿಗಳನ್ನು 'ಕಲೆಕ್ಟರ್' ಎಂದು ಕರೆಯಲು ಚಿಂತನೆ: ಆರ್. ಅಶೋಕ್

ರಾಜ್ಯದಲ್ಲಿ ಇನ್ನು ಮುಂದೆ ಜಿಲ್ಲಾಧಿಕಾರಿಗಳ ಹೆಸರನ್ನು ಬದಲಾವಣೆ ಮಾಡಲು ತೀರ್ಮಾನಿಸಿದ್ದು, ಜಿಲ್ಲಾಧಿಕಾರಿ ಹೆಸರನ್ನು " ಕಲೆಕ್ಟರ್'' ಎಂದು ನಾಮಕರಣ ಮಾಡಲು ಚಿಂತನೆ ನಡಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. 

ಬೆಂಗಳೂರು: ರಾಜ್ಯದಲ್ಲಿ ಇನ್ನು ಮುಂದೆ ಜಿಲ್ಲಾಧಿಕಾರಿಗಳ ಹೆಸರನ್ನು ಬದಲಾವಣೆ ಮಾಡಲು ತೀರ್ಮಾನಿಸಿದ್ದು, ಜಿಲ್ಲಾಧಿಕಾರಿ ಹೆಸರನ್ನು " ಕಲೆಕ್ಟರ್ " ಎಂದು ನಾಮಕರಣ ಮಾಡಲು ಚಿಂತನೆ ನಡಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. 


ಸುದ್ದಿಗಾರರ ಜತೆ ಮಾತನಾಡಿದ ಅವರು, ದೇಶದ ಎಲ್ಲಾ ಕಡೆ ಜಿಲ್ಲಾಧಿಕಾರಿಗಳನ್ನು ಕಲೆಕ್ಟರ್ ಎಂದು ಕರೆಯುತ್ತಾರೆ. ಆಂಧ್ರಪ್ರದೇಶ, ತೆಲಂಗಾಣ,  ತಮಿಳುನಾಡಿನಲ್ಲೂ ಕಲೆಕ್ಟರ್ ಎಂದು ಸಂಬೋಧಿಸುತ್ತಾರೆ. ಕಂದಾಯ ಮತ್ತು ಮಾರಾಟ ತೆರಿಗೆ, ಅಬಕಾರಿ ಇಲಾಖೆಯಲ್ಲೂ ಡಿಸಿ ಎಂದು ಕರೆಯಲಾಗುತ್ತದೆ. ಹೀಗಾಗಿ ಜಿಲ್ಲಾಡಳಿತದ ಮುಖ್ಯಸ್ಥರಾದ ಜಿಲ್ಲಾಧಿಕಾರಿಗಳನ್ನು ಇದೇ ಹೆಸರಿನಿಂದ ಕರೆಯುವುದು ಸರಿಯಲ್ಲ. ಹಾಗಾಗಿ ಕಲೆಕ್ಟರ್ ಎಂದು ಕರೆಯುವುದು ಸೂಕ್ತ ಎಂಬ ಕಾರಣದಿಂದ ನಾಮಕರಣ ಮಾಡಲು ಉದ್ದೇಶಿಸಲಾಗಿದೆ. ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜತೆ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು. 


ಭೂ ಪರಿವರ್ತನೆ ಆಗದ ಹಾಗೂ ಅಕ್ರಮ ನಿವೇಶನಗಳ ನೊಂದಣಿ ದೂರುಗಳು ಬಂದ ಹಿನ್ನೆಲೆಯಲ್ಲಿ ಕಂದಾಯ ನಿವೇಶನಗಳ ನೋಂದಣಿ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿದೆ. ಕಂದಾಯ ಇಲಾಖೆಯ "ಕಾವೇರಿ ತಂತ್ರಾಂಶ"ದಲ್ಲೂ ಇಂತಹ ನಿವೇಶನಗಳನ್ನು ನೋಂದಣಿಗೆ ಸ್ವೀಕರಿಸುತ್ತಿಲ್ಲ. ಈ ಕುರಿತು ಪರ, ವಿರೋಧವಿದ್ದು ಸಮಗ್ರ ಮಾಹಿತಿ ಪಡೆದು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಚಿವ ಸಂಪುಟ ವಿಸ್ತರಣೆ: CM ಡಿ.ಕೆ. ಶಿವಕುಮಾರ್-ಕಾಂಗ್ರೆಸ್ ನಾಯಕರು ನಾಳೆ ಸಂಜೆ ದೆಹಲಿಗೆ; ಹೈಕಮಾಂಡ್ ಮಹತ್ವದ ಮಾತುಕತೆ

ಯಾರ ಒತ್ತಡಕ್ಕೂ ಮಣಿದು ಬರ ಘೋಷಿಸಲ್ಲ, ಮಾತುಕತೆಯಲ್ಲೇ ಮೇಕದಾಟು ವಿವಾದಕ್ಕೆ ಪರಿಹಾರ: ಸಿಎಂ ಡಿಕೆ.ಶಿವಕುಮಾರ್

ಅಸಮರ್ಥ-ಭ್ರಷ್ಟ ಸರ್ಕಾರ ಕಿತ್ತೊಗೆಯುವವರೆಗೆ ವಿರಮಿಸದಿರಿ, ಹೋರಾಟ ಮುಂದುವರೆಸಿ: ವಿದ್ಯಾರ್ಥಿ-ಯುವಜನರಿಗೆ ಸಿದ್ದರಾಮಯ್ಯ ಕರೆ

ಕಾಂಗ್ರೆಸ್ ರಾಜಕೀಯ ಆಟಕ್ಕೆ ಬ್ರೇಕ್ ಹಾಕಲು ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿಜಯೇಂದ್ರ

ಅಗ್ನಿಶಾಮಕ, ತುರ್ತು ಸೇವೆಗಳ ಆಧುನೀಕರಣಕ್ಕೆ ಸಮಗ್ರ ಯೋಜನೆ ರೂಪಿಸಿ: ಅಧಿಕಾರಿಗಳಿಗೆ ಪ್ರಿಯಾಂಕ್ ಖರ್ಗೆ ಸೂಚನೆ