ಆರ್ ಅಶೋಕ್ 
ರಾಜ್ಯ

ಜಿಲ್ಲಾಧಿಕಾರಿಗಳನ್ನು 'ಕಲೆಕ್ಟರ್' ಎಂದು ಕರೆಯಲು ಚಿಂತನೆ: ಆರ್. ಅಶೋಕ್

ರಾಜ್ಯದಲ್ಲಿ ಇನ್ನು ಮುಂದೆ ಜಿಲ್ಲಾಧಿಕಾರಿಗಳ ಹೆಸರನ್ನು ಬದಲಾವಣೆ ಮಾಡಲು ತೀರ್ಮಾನಿಸಿದ್ದು, ಜಿಲ್ಲಾಧಿಕಾರಿ ಹೆಸರನ್ನು " ಕಲೆಕ್ಟರ್'' ಎಂದು ನಾಮಕರಣ ಮಾಡಲು ಚಿಂತನೆ ನಡಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. 

ಬೆಂಗಳೂರು: ರಾಜ್ಯದಲ್ಲಿ ಇನ್ನು ಮುಂದೆ ಜಿಲ್ಲಾಧಿಕಾರಿಗಳ ಹೆಸರನ್ನು ಬದಲಾವಣೆ ಮಾಡಲು ತೀರ್ಮಾನಿಸಿದ್ದು, ಜಿಲ್ಲಾಧಿಕಾರಿ ಹೆಸರನ್ನು " ಕಲೆಕ್ಟರ್ " ಎಂದು ನಾಮಕರಣ ಮಾಡಲು ಚಿಂತನೆ ನಡಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. 


ಸುದ್ದಿಗಾರರ ಜತೆ ಮಾತನಾಡಿದ ಅವರು, ದೇಶದ ಎಲ್ಲಾ ಕಡೆ ಜಿಲ್ಲಾಧಿಕಾರಿಗಳನ್ನು ಕಲೆಕ್ಟರ್ ಎಂದು ಕರೆಯುತ್ತಾರೆ. ಆಂಧ್ರಪ್ರದೇಶ, ತೆಲಂಗಾಣ,  ತಮಿಳುನಾಡಿನಲ್ಲೂ ಕಲೆಕ್ಟರ್ ಎಂದು ಸಂಬೋಧಿಸುತ್ತಾರೆ. ಕಂದಾಯ ಮತ್ತು ಮಾರಾಟ ತೆರಿಗೆ, ಅಬಕಾರಿ ಇಲಾಖೆಯಲ್ಲೂ ಡಿಸಿ ಎಂದು ಕರೆಯಲಾಗುತ್ತದೆ. ಹೀಗಾಗಿ ಜಿಲ್ಲಾಡಳಿತದ ಮುಖ್ಯಸ್ಥರಾದ ಜಿಲ್ಲಾಧಿಕಾರಿಗಳನ್ನು ಇದೇ ಹೆಸರಿನಿಂದ ಕರೆಯುವುದು ಸರಿಯಲ್ಲ. ಹಾಗಾಗಿ ಕಲೆಕ್ಟರ್ ಎಂದು ಕರೆಯುವುದು ಸೂಕ್ತ ಎಂಬ ಕಾರಣದಿಂದ ನಾಮಕರಣ ಮಾಡಲು ಉದ್ದೇಶಿಸಲಾಗಿದೆ. ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜತೆ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು. 


ಭೂ ಪರಿವರ್ತನೆ ಆಗದ ಹಾಗೂ ಅಕ್ರಮ ನಿವೇಶನಗಳ ನೊಂದಣಿ ದೂರುಗಳು ಬಂದ ಹಿನ್ನೆಲೆಯಲ್ಲಿ ಕಂದಾಯ ನಿವೇಶನಗಳ ನೋಂದಣಿ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿದೆ. ಕಂದಾಯ ಇಲಾಖೆಯ "ಕಾವೇರಿ ತಂತ್ರಾಂಶ"ದಲ್ಲೂ ಇಂತಹ ನಿವೇಶನಗಳನ್ನು ನೋಂದಣಿಗೆ ಸ್ವೀಕರಿಸುತ್ತಿಲ್ಲ. ಈ ಕುರಿತು ಪರ, ವಿರೋಧವಿದ್ದು ಸಮಗ್ರ ಮಾಹಿತಿ ಪಡೆದು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

Encounter: ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಹತ್ಯೆ!

SCROLL FOR NEXT