ರಾಜ್ಯ

ಜೂನ್ ಅಂತ್ಯದೊಳಗೆ ರಸ್ತೆ ಕಾಮಗಾರಿಗಳು ಪೂರ್ಣ: ಗೋವಿಂದ ಕಾರಜೋಳ

ರಾಜಧಾನಿ ಬೆಂಗಳೂರಿನ ರಿಂಗ್ ರಸ್ತೆ ಮಾದರಿಯಲ್ಲಿ ನಿರ್ಮಿಸಲು 10 ರಸ್ತೆಗಳನ್ನು ಗುರುತಿಸಿ, ಕಾಮಗಾರಿಯು ಪ್ರಗತಿಯ ಹಂತದಲ್ಲಿದೆ. ಜೂನ್ ಅಂತ್ಯದೊಳಗೆ ಹಲವು ರಸ್ತೆ ಕಾಮಗಾರಿಗಳು ಪೂರ್ಣಗೊಂಡು ಸುಗಮ ಸಂಚಾರಕ್ಕೆ ನೆರವಾಗಲಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನ ರಿಂಗ್ ರಸ್ತೆ ಮಾದರಿಯಲ್ಲಿ ನಿರ್ಮಿಸಲು 10 ರಸ್ತೆಗಳನ್ನು ಗುರುತಿಸಿ, ಕಾಮಗಾರಿಯು ಪ್ರಗತಿಯ ಹಂತದಲ್ಲಿದೆ. ಜೂನ್ ಅಂತ್ಯದೊಳಗೆ ಹಲವು ರಸ್ತೆ ಕಾಮಗಾರಿಗಳು ಪೂರ್ಣಗೊಂಡು ಸುಗಮ ಸಂಚಾರಕ್ಕೆ ನೆರವಾಗಲಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ.


ಬೆಂಗಳೂರಿನಲ್ಲಿ ವಿವಿಧ ರಸ್ತೆ ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ, ಕಾಮಗಾರಿಯ ಪ್ರಗತಿ ಹಾಗೂ ಗುಣಮಟ್ಟವನ್ನು ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 21 ಕಿಲೋ ಮೀಟರ್ ಉದ್ದದ 137 ಕೋಟಿ ರೂಪಾಯಿ ಮೊತ್ತದ ಮೈನಹಳ್ಳಿ- ಬೂದಗೆರೆ ಕ್ರಾಸ್ ರಾಜ್ಯ ಹೆದ್ದಾರಿ ಕಾಮಗಾರಿ, 39 ಕಿಲೋ ಮೀಟರ್ ಉದ್ದದ 182 ಕೋಟಿ ರೂಪಾಯಿ ಮೊತ್ತದ ಹೊಸಕೋಟೆ ರಸ್ತೆ- ಅನೆಕಲ್ ವಯಾ ಅತ್ತಿಬೆಲೆ, ಸರ್ಜಾಪುರ ರಾಜ್ಯ ಹೆದ್ದಾರಿ ಕಾಮಗಾರಿ , 1.3 ಕಿಲೋ ಮೀಟರ್ ಉದ್ದದ 163 ಕೋಟಿ ರೂಪಾಯಿ ವೆಚ್ಚದ ಎಲಿವೇಟೆಡ್ ಕಾರಿಡಾರ್ ಕಾಮಗಾರಿಯು ಈಗಾಗಲೇ ಪ್ರಗತಿ ಹಂತದಲ್ಲಿವೆ.

ಈ ಕಾಮಗಾರಿಗಳನ್ನು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮವು ಕೈಗೊಳ್ಳುತ್ತಿದೆ. ಈ ಕಾಮಗಾರಿಗಳನ್ನು ಶೀಘ್ರವಾಗಿ ಅನುಷ್ಠಾನಗೊಳಿಸಲು ಇರುವ ಅಡೆತಡೆ, ಭೂಸ್ವಾಧೀನ, ಸಮಸ್ಯೆಗಳನ್ನು ಚರ್ಚಿಸಲಾಗಿದೆ. ಸಮಸ್ಯೆಗಳ ಇತ್ಯರ್ಥಕ್ಕೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಔಟರ್ ರಿಂಗ್ ರಸ್ತೆ ನಿರ್ಮಾಣಕ್ಕೆ ಭೂ ಸ್ವಾಧೀನ ಸಮಸ್ಯೆಯಾಗಿರುವುದರಿಂದ ಅಲ್ಲಲ್ಲಿ 4- 5 ಕಿ.ಮೀ. ಉದ್ದದ ರಸ್ತೆಗಳನ್ನು ನಿರ್ಮಿಸಿ, ಜೋಡಿಸಲಾಗುತ್ತಿದೆ. ಪ್ರಸ್ತಾಪಿತ ರಸ್ತೆ ಕಾಮಗಾರಿಗಳಲ್ಲಿ ಮಧ್ಯದಲ್ಲಿ ಮರಗಳಿದ್ದು, ಈ ಮರಗಳನ್ನು ತೆರವುಗೊಳಿಸಿಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಮುಖ್ಯ ಅರಣ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿ ಕ್ರಮಕೈಗೊಂಡಿದ್ದಾರೆ ಎಂದು ಅವರು ತಿಳಿಸಿದರು.


ಮಂಗಳೂರು ಪ್ರಕರಣವನ್ನು ಯಾರೂ ಸಹಿಸಿಕೊಳ್ಳಲಾಗುವುದಿಲ್ಲ. ದೇಶದ ಭದ್ರತೆ ಹಾಗೂ ಜನರ ರಕ್ಷಣೆಗೆ ಹಿತದೃಷ್ಟಿಯ ಹಿನ್ನೆಲೆಯಲ್ಲಿ ಯೋಚಿಸಬೇಕು. ಹೇಳಿಕೆಗಳಿಂದ ಪೊಲೀಸರ ತನಿಖೆಗೆ ತೊಂದರೆಯಾಗಬಾರದು ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT