ರಾಷ್ಟ್ರಪತಿ ರಾಮನಾಥ್ ಕೋವಿಂದ್ 
ರಾಜ್ಯ

ಇವಿಎಂ ಉತ್ತಮ ನಿರ್ವಹಣೆಗಾಗಿ ಚುನಾವಣಾಧಿಕಾರಿ ವಿ.ರಾಘವೇಂದ್ರಗೆ ರಾಷ್ಟ್ರಪತಿಗಳಿಂದ ವಿಶೇಷ ಪ್ರಶಸ್ತಿ ಪ್ರದಾನ

ಭಾರತ ಚುನಾವಣಾ ಆಯೋಗ ನವದೆಹಲಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ 10ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಚುನಾವಣೆಗಳಲ್ಲಿ ಇವಿಎಂ ನಿರ್ವಹಣೆಗಾಗಿ ವಿಶೇಷ ಪ್ರಶಸ್ತಿಗೆ ಭಾಜನರಾಗಿದ್ದ ರಾಜ್ಯದ ಜಂಟಿ....

ನವದೆಹಲಿ: ಭಾರತ ಚುನಾವಣಾ ಆಯೋಗ ನವದೆಹಲಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ 10ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಚುನಾವಣೆಗಳಲ್ಲಿ ಇವಿಎಂ ನಿರ್ವಹಣೆಗಾಗಿ ವಿಶೇಷ ಪ್ರಶಸ್ತಿಗೆ ಭಾಜನರಾಗಿದ್ದ ರಾಜ್ಯದ ಜಂಟಿ ಉಪಮುಖ್ಯ ಚುನಾವಣಾಧಿಕಾರಿ ವಿ. ರಾಘವೇಂದ್ರ ಅವರು ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿದರು.

ಪ್ರತಿ ವರ್ಷವು ನಡೆಯುವ ರಾಷ್ಟ್ರೀಯ ಮತದಾರರ ದಿನಾಚರಣೆಯಂದು ಭಾರತ ಚುನಾವಣಾ ಆಯೋಗವು ಚುನಾವಣಾ ಮತ್ತು ಮತದಾರರ ಪಟ್ಟಿ ನಿರ್ವಹಣೆ ಮತ್ತು ಇದಕ್ಕೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿಗಳು ಹಾಗೂ ಸಂಸ್ಥೆಗಳಿಗೆ ರಾಷ್ಟ್ರೀಯ ಅತ್ಯುತ್ತಮ ಚುನಾವಣಾ ಕಾರ್ಯಗಳ ಪ್ರಶಸ್ತಿ ನೀಡುತ್ತದೆ.

ಭಾರತ ಚುನಾವಣಾ ಆಯೋಗವು 2019ರ ರಾಷ್ಟ್ರೀಯ ಪ್ರಶಸ್ತಿಗಳನ್ನು ಘೋಷಿಸಿತ್ತು. ಚುನಾವಣೆಗಳಲ್ಲಿ ಇವಿಎಂ ನಿರ್ವಹಣೆಗಾಗಿ ವಿಶೇಷ ಪ್ರಶಸ್ತಿಗೆ ಕರ್ನಾಟಕದ ಜಂಟಿ ಮುಖ್ಯ ಚುನಾವಣಾಧಿಕಾರಿ ವಿ.ರಾಘವೇಂದ್ರ ಹಾಗೂ ಮತದಾನ ಜಾಗೃತಿಗಾಗಿ ಮಾಧ್ಯಮ ಪ್ರಶಸ್ತಿಗೆ ಬೆಂಗಳೂರಿನ ರೆಡ್ ಎಫ್‍ಎಮ್ ಸಂಸ್ಥೆ ಅತ್ಯುತ್ತಮ ಪ್ರಶಸ್ತಿಗೆ ಭಾಜನವಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT