ರಾಜ್ಯ

'ಜೊತೆಯಾಗಿ' ಇದು ಬೆಂಗಳೂರಿನ ಸ್ವಚ್ಛತೆಗೆ ಬಿಬಿಎಂಪಿಯ ಧ್ಯೇಯಗೀತೆ 

ನಗರದ ಸ್ವಚ್ಛತೆ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸ್ವಚ್ಛತೆಯ ಧ್ಯೇಯ ಗೀತೆಯನ್ನು ಆರಂಭಿಸಿದ್ದು ಖ್ಯಾತ ಗಾಯಕ ಲಕ್ಕಿ ಅಲಿ ಕಂಠದಲ್ಲಿ ಮೂಡಿಬಂದಿದೆ.

ಬೆಂಗಳೂರು:ನಗರದ ಸ್ವಚ್ಛತೆ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸ್ವಚ್ಛತೆಯ ಧ್ಯೇಯ ಗೀತೆಯನ್ನು ಆರಂಭಿಸಿದ್ದು ಖ್ಯಾತ ಗಾಯಕ ಲಕ್ಕಿ ಅಲಿ ಕಂಠದಲ್ಲಿ ಮೂಡಿಬಂದಿದೆ.


3 ನಿಮಿಷ 17 ಸೆಕೆಂಡ್ ಗಳ ವಿಡಿಯೊವನ್ನು ನಗರದ ವಿವಿಧ ಕಡೆಗಳಲ್ಲಿ ಚಿತ್ರೀಕರಿಸಲಾಗಿದ್ದು ಪ್ರಮುಖ ಗಾಯಕರು, ನಟರು ಮತ್ತು ಸಾಮಾನ್ಯ ನಾಗರಿಕರು ಇದರಲ್ಲಿ ಕಾಣಿಸಿಕೊಂಡಿದ್ದಾರೆ. ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಮಿಶ್ರವಾಗಿ ಹಾಡು ಹಾಡಲಾಗಿದ್ದು ಹೈಕೋರ್ಟ್, ಕೆ ಆರ್ ಮಾರ್ಕೆಟ್, ಹೆಬ್ಬಾಳ ಫ್ಲೈಓವರ್, ಮೆಜೆಸ್ಟಿಕ್ ಬಸ್ ನಿಲ್ದಾಣ ಮತ್ತು ಟೌನ್ ಹಾಲ್ ಗಳಲ್ಲಿ ಚಿತ್ರೀಕರಿಸಲಾಗಿದೆ. ಬಿಬಿಎಂಪಿ ಕೇಂದ್ರ ಕಚೇರಿ ಮಾತ್ರ ವಿಡಿಯೊದಲ್ಲಿ ಇಲ್ಲ.


ನಾನು 50 ವರ್ಷಗಳಿಂದ ಬೆಂಗಳೂರಿನಲ್ಲಿದ್ದೇನೆ. ಇಷ್ಟು ವರ್ಷಗಳಲ್ಲಿ ನಗರದಲ್ಲಿ ಹಲವು ಬದಲಾವಣೆಗಳಾಗಿವೆ. ಬೆಳೆಯುತ್ತಿರುವ ಬೆಂಗಳೂರು ನಗರವನ್ನು ಸ್ವಚ್ಛವಾಗಿ, ಆರೋಗ್ಯವಾಗಿಡುವುದು ಇಲ್ಲಿನ ನಾಗರಿಕರಾಗಿ ನಮ್ಮ ಕರ್ತವ್ಯ. ಜೈವಿಕ ಗೊಬ್ಬರ ಮತ್ತು ತ್ಯಾಜ್ಯಗಳ ಸರಿಯಾದ ಬೇರ್ಪಡಿಸುವಿಕೆಯನ್ನು ಮಾಡಬೇಕು ಎನ್ನುತ್ತಾರೆ ಲಕ್ಕಿ ಅಲಿ.


ಬಿಬಿಎಂಪಿಯ ಧ್ಯೇಯ ಗೀತೆ ಬಗ್ಗೆ ಆಯುಕ್ತ ಬಿ ಎಚ್ ಅನಿಲ್ ಕುಮಾರ್ ಮಾತನಾಡಿ, ನಗರದ ಸ್ವಚ್ಛ ಸರ್ವೇಕ್ಷಣ ರ್ಯಾಂಕಿಂಗ್ ನಲ್ಲಿ ಸುಧಾರಣೆ ತರುವ ಅಗತ್ಯವಿದೆ. ಕಳೆದ ಎರಡು ತಿಂಗಳಲ್ಲಿ ನಾವು ಸುಮಾರು 250 ಕಪ್ಪು ಗುರುತುಗಳನ್ನು ಸ್ವಚ್ಛಗೊಳಿಸಿದ್ದೇವೆ. ವಿಶೇಷ ಹಾಕಿಂಗ್ಸ್ ಮತ್ತು ವೆಂಡಿಂಗ್ ವಲಯಗಳನ್ನು ಸೃಷ್ಟಿಸಿ ಅನಧಿಕೃತ ವ್ಯಾಪಾರಿಗಳನ್ನು ಪಾದಚಾರಿ ಮಾರ್ಗದಿಂದ ತೆರವುಗೊಳಿಸಿದ್ದೇವೆ. ಮಾರುಕಟ್ಟೆ ಮತ್ತು ಬಸ್ ನಿಲ್ದಾಣಗಳಲ್ಲಿ ವಲಯಗಳನ್ನು ಸೃಷ್ಟಿಸಲಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

SCROLL FOR NEXT