ರಾಜ್ಯ

'ಜೊತೆಯಾಗಿ' ಇದು ಬೆಂಗಳೂರಿನ ಸ್ವಚ್ಛತೆಗೆ ಬಿಬಿಎಂಪಿಯ ಧ್ಯೇಯಗೀತೆ 

ನಗರದ ಸ್ವಚ್ಛತೆ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸ್ವಚ್ಛತೆಯ ಧ್ಯೇಯ ಗೀತೆಯನ್ನು ಆರಂಭಿಸಿದ್ದು ಖ್ಯಾತ ಗಾಯಕ ಲಕ್ಕಿ ಅಲಿ ಕಂಠದಲ್ಲಿ ಮೂಡಿಬಂದಿದೆ.

ಬೆಂಗಳೂರು:ನಗರದ ಸ್ವಚ್ಛತೆ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸ್ವಚ್ಛತೆಯ ಧ್ಯೇಯ ಗೀತೆಯನ್ನು ಆರಂಭಿಸಿದ್ದು ಖ್ಯಾತ ಗಾಯಕ ಲಕ್ಕಿ ಅಲಿ ಕಂಠದಲ್ಲಿ ಮೂಡಿಬಂದಿದೆ.


3 ನಿಮಿಷ 17 ಸೆಕೆಂಡ್ ಗಳ ವಿಡಿಯೊವನ್ನು ನಗರದ ವಿವಿಧ ಕಡೆಗಳಲ್ಲಿ ಚಿತ್ರೀಕರಿಸಲಾಗಿದ್ದು ಪ್ರಮುಖ ಗಾಯಕರು, ನಟರು ಮತ್ತು ಸಾಮಾನ್ಯ ನಾಗರಿಕರು ಇದರಲ್ಲಿ ಕಾಣಿಸಿಕೊಂಡಿದ್ದಾರೆ. ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಮಿಶ್ರವಾಗಿ ಹಾಡು ಹಾಡಲಾಗಿದ್ದು ಹೈಕೋರ್ಟ್, ಕೆ ಆರ್ ಮಾರ್ಕೆಟ್, ಹೆಬ್ಬಾಳ ಫ್ಲೈಓವರ್, ಮೆಜೆಸ್ಟಿಕ್ ಬಸ್ ನಿಲ್ದಾಣ ಮತ್ತು ಟೌನ್ ಹಾಲ್ ಗಳಲ್ಲಿ ಚಿತ್ರೀಕರಿಸಲಾಗಿದೆ. ಬಿಬಿಎಂಪಿ ಕೇಂದ್ರ ಕಚೇರಿ ಮಾತ್ರ ವಿಡಿಯೊದಲ್ಲಿ ಇಲ್ಲ.


ನಾನು 50 ವರ್ಷಗಳಿಂದ ಬೆಂಗಳೂರಿನಲ್ಲಿದ್ದೇನೆ. ಇಷ್ಟು ವರ್ಷಗಳಲ್ಲಿ ನಗರದಲ್ಲಿ ಹಲವು ಬದಲಾವಣೆಗಳಾಗಿವೆ. ಬೆಳೆಯುತ್ತಿರುವ ಬೆಂಗಳೂರು ನಗರವನ್ನು ಸ್ವಚ್ಛವಾಗಿ, ಆರೋಗ್ಯವಾಗಿಡುವುದು ಇಲ್ಲಿನ ನಾಗರಿಕರಾಗಿ ನಮ್ಮ ಕರ್ತವ್ಯ. ಜೈವಿಕ ಗೊಬ್ಬರ ಮತ್ತು ತ್ಯಾಜ್ಯಗಳ ಸರಿಯಾದ ಬೇರ್ಪಡಿಸುವಿಕೆಯನ್ನು ಮಾಡಬೇಕು ಎನ್ನುತ್ತಾರೆ ಲಕ್ಕಿ ಅಲಿ.


ಬಿಬಿಎಂಪಿಯ ಧ್ಯೇಯ ಗೀತೆ ಬಗ್ಗೆ ಆಯುಕ್ತ ಬಿ ಎಚ್ ಅನಿಲ್ ಕುಮಾರ್ ಮಾತನಾಡಿ, ನಗರದ ಸ್ವಚ್ಛ ಸರ್ವೇಕ್ಷಣ ರ್ಯಾಂಕಿಂಗ್ ನಲ್ಲಿ ಸುಧಾರಣೆ ತರುವ ಅಗತ್ಯವಿದೆ. ಕಳೆದ ಎರಡು ತಿಂಗಳಲ್ಲಿ ನಾವು ಸುಮಾರು 250 ಕಪ್ಪು ಗುರುತುಗಳನ್ನು ಸ್ವಚ್ಛಗೊಳಿಸಿದ್ದೇವೆ. ವಿಶೇಷ ಹಾಕಿಂಗ್ಸ್ ಮತ್ತು ವೆಂಡಿಂಗ್ ವಲಯಗಳನ್ನು ಸೃಷ್ಟಿಸಿ ಅನಧಿಕೃತ ವ್ಯಾಪಾರಿಗಳನ್ನು ಪಾದಚಾರಿ ಮಾರ್ಗದಿಂದ ತೆರವುಗೊಳಿಸಿದ್ದೇವೆ. ಮಾರುಕಟ್ಟೆ ಮತ್ತು ಬಸ್ ನಿಲ್ದಾಣಗಳಲ್ಲಿ ವಲಯಗಳನ್ನು ಸೃಷ್ಟಿಸಲಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

SCROLL FOR NEXT