ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಲೈಂಗಿಕ ಕ್ರಿಯೆ ವೇಳೆ ಕಾಂಡೋಮ್ ಬಳಸುವಂತೆ ಹೇಳಿದ ವೇಶ್ಯೆ ಹತ್ಯೆ

ಲೈಂಗಿಕ ಕ್ರಿಯೆಗೆ ಕಾಂಡೋಮ್ ಬಳಸುವಂತೆ ಹೇಳಿದ ಕಾರಣಕ್ಕೆ ವೇಶ್ಯೆಯೊಬ್ಬರನ್ನು ಹತ್ಯೆ ಮಾಡಿ, ಪರಾರಿಯಾಗಿದ್ದ ಸೆಕ್ಯುರಿಟಿ ಗಾರ್ಡ್ ವೊಬ್ಬ ಸುಬ್ರಹ್ಮಣ್ಯನಗರ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾನೆ. 

ಬೆಂಗಳೂರು: ಲೈಂಗಿಕ ಕ್ರಿಯೆಗೆ ಕಾಂಡೋಮ್ ಬಳಸುವಂತೆ ಹೇಳಿದ ಕಾರಣಕ್ಕೆ ವೇಶ್ಯೆಯೊಬ್ಬರನ್ನು ಹತ್ಯೆ ಮಾಡಿ, ಪರಾರಿಯಾಗಿದ್ದ ಸೆಕ್ಯುರಿಟಿ ಗಾರ್ಡ್ ವೊಬ್ಬ ಸುಬ್ರಹ್ಮಣ್ಯನಗರ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾನೆ. 

ಕೆ.ಆರ್.ಪೇಟೆ ತಾಲೂಕಿನ ಸಂತೇಬಾಚಹಳ್ಳಿಯ ನಿವಾಸಿ ಮುಕುಂದ ಬಂಧಿತ ವ್ಯಕ್ತಿ. ಜ.11 ರಂದು ಮಧ್ಯಾಹ್ನ 1 ಗಂಟೆ ವೇಳೆ ಗಾಯತ್ರಿ ನಗರದ 4ನೇ ಕ್ರಾಸ್ ನಲ್ಲಿ ಮನೆಯಲ್ಲಿ ಮಂಜುಳಾ ಹತ್ಯೆಯಾಗಿತ್ತು. ಈ ಬಗ್ಗೆ ತನಿಖೆ ಕೈಗೆತ್ತಿಕೊಂಡಿದ್ದ ಪೊಲೀಸರು, ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಯನ್ನು ಬಂಧಿಸಿದ್ದಾರೆಂದು ಅಧಿಕಾರಿಗಳು ಹೇಳಿದ್ದಾರೆ. 

ಎಲೆಕ್ಟ್ರಾನಿಕ್ ಸಿಟಿ ಸಮೀಪ ಖಾಸಗಿ ಕಂಪನಿಯಲ್ಲಿ ಮುಕುಂದ ಸೆಕ್ಯುರಿಟಿ ಗಾರ್ಡ್ ಆಗಿದ್ದು, ಕಂಪನಿ ಹತ್ತಿರದಲ್ಲಿ ವಾಸವಾಗಿದ್ದ. ಪ್ರತಿ ಹದಿನೈದು ದಿನಕ್ಕೊಮ್ಮೆ ಸ್ವಂತ ಊರಿಗೆ ಆತ ಹೋಗುತ್ತಿದ್ದ. ಅದೇ ರೀತಿ ಜ.11 ರಂದು ಊರಿಗೆ ಹೋಗಲು ಬಂದಾಗ ಮೆಜೆಸ್ಟಿಕ್ ನಲ್ಲಿ ಆತನಿಗೆ ಮಂಜುಳಾ ಪರಿಚಯವಾಗಿದೆ. ಲೈಂಗಿಕ ಕ್ರಿಯೆಗೆ ಆಕೆ ಕರೆದಿದ್ದಾಳೆ. ಇದಕ್ಕೆ ರೂ.2000 ನೀಡುವಂತೆ ಬೇಡಿಕೆ ಇಟ್ಟಿದ್ದಳು. ಕೊನೆಗೆ ಪರಸ್ಪರ ಮಾತುಕತೆ ನಡೆದು ರೂ.1,500 ಒಪ್ಪಿಗೆಯಾಗಿದೆ. ಬಳಿಕ ಮುಂಗಡವಾಗಿ ಆರೋಪಿಯಿಂದ ರೂ.500 ಸಂದಾಯವಾಗಿದೆ. 

ನಂತರ ಮೆಜೆಸ್ಟಿಕ್ ನಿಂದ ಸೆಂಟ್ರಲ್ ಬಸ್ಸಿನಲ್ಲಿ ಬಂದ ಅವರು, ಅಲ್ಲಿಂದ ಆಟೋದಲ್ಲಿ ಮುಕುಂದನನ್ನು ಗಾಯತ್ರಿ ನಗರತ ತನ್ನ ಮನೆಗೆ ಕರೆತಂದಿದ್ದಳು. ಆಗ ಸುರಕ್ಷಿತ ಲೈಂಗಿಕ ಕ್ರಿಯೆಗೆ ಕಾಂಡೋಮ್ ಹಾಕಿಕೊಳ್ಳುವಂತೆ ಆಕೆ ಹೇಳಿದ್ದಾಳೆ. ಇದಕ್ಕೆ ಮುಕುಂದ ನಿರಾಕರಿಸಿದ್ದಾನೆ. ಆಗ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಈ ಹಂತದಲ್ಲಿ ಚಾಕುವಿನಿಂದ ಮಂಜುಳಾ ಕತ್ತುಕುಯ್ದು ಪರಾರಿಯಾಗಿದ್ದಾನೆ. ಈ ಬಗ್ಗೆ ತನಿಖೆ ಆರಂಭಿಸಿದ್ದ ಪೊಲೀಸರು, ಕೊನೆಗೆ ಸಿಸಿಟಿವಿ ದೃಶ್ಯಾವಳಿ ಬೆನ್ನು ಹತ್ತಿದಾಗ ಹಂತಕ ಸಿಕ್ಕಿಬಿದ್ದಿದ್ದಾನೆಂದು ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

ಚಾಮುಂಡೇಶ್ವರಿ ದೇವಿ ಸುತ್ತ ನಡೆಯುತ್ತಿರುವ ರಾಜಕೀಯ ತೀವ್ರ ಬೇಸರ ತರಿಸಿದೆ: ಪ್ರಮೋದಾದೇವಿ ಒಡೆಯರ್

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

Minneapolis Shooter: 'Trump ಸಾವು.. ಭಾರತ ಸರ್ವನಾಶ': ಅಮೆರಿಕ ದಾಳಿಕೋರನ ಬಂದೂಕಿನ ಮೇಲೆ ಶಾಕಿಂಗ್ ಬರಹ!

SCROLL FOR NEXT