ರಾಜ್ಯ

ಸಿಲಿಕಾನ್ ಸಿಟಿಯಲ್ಲಿ ಪೊಲೀಸ್ ಮಾಹಿತಿದಾರನ ಭೀಕರ ಕೊಲೆ

Srinivasamurthy VN

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ದುಷ್ಕರ್ಮಿಗಳು ಆಯುಧ ಝಳಪಿಸಿದ್ದು, ಪೊಲೀಸ್ ಮಾಹಿತಿದಾರನನ್ನು ಬರ್ಬರವಾಗಿ ಹತ್ಯೆಗೈದಿದ್ದಾರೆ.

ನಗರದ ಬಸವೇಶ್ವರ ನಗರ ಬಳಿಯ ಕಮಲಾನಗರದಲ್ಲಿ ಶನಿವಾರ ರಾತ್ರಿ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪೊಲೀಸ್ ಮಾಹಿತಿದಾರನನ್ನು ಹತ್ಯೆಗೈದಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ ಸಿದ್ದೇಶ್ವರ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಪ್ರಭು ಅಲಿಯಾಸ್ ಅಪ್ಪು (27 ವರ್ಷ) ಎಂಬಾತನನ್ನು ಕೊಲೆಗೈಯ್ಯಲಾಗಿದೆ.

ಪ್ರಭು ಬ್ಯಾಂಕ್ ನಲ್ಲಿ ಚೆಕ್ ಸಂಗ್ರಹಿಸುವ ಕೆಲಸವನ್ನು ಮಾಡುತ್ತಿದ್ದರು. ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ವೇಳೆ ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ಪ್ರಭು ಅವರಿಗೆ ಹಲವು ಬಾರಿ ಇರಿದಿದ್ದಾರೆ. ರಕ್ತಸ್ರಾವದಿಂದ ಪ್ರಭು ಸ್ಥಳದಲ್ಲೇ ಮೃತಪಟ್ಟರು ಎಂದು ಪೊಲೀಸರು ಹೇಳಿದರು. ಪ್ರಕರಣ ದಾಖಲಿಸಿಕೊಂಡಿರುವ ಬಸವೇಶ್ವರ ನಗರ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲಿಸಿದರು.

ಎನ್ನಲಾಗಿದೆ. ಈ ಹಿಂದೆ ಇದೇ ಪ್ರಭು ಕಳ್ಳರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದರು. ಅಲ್ಲದೆ ಎರಡು ಬಾರಿ ಕಳ್ಳರನ್ನು ರೆಡ್ ಹ್ಯಾಂಡ್ ಆಗಿ ಹಿಡಿದುಕೊಟ್ಟಿದ್ದರು. ಇದೇ ಹಳೇ ದ್ವೇಷ ಹಿನ್ನಲೆಯಲ್ಲಿ ದುಷ್ಕರ್ಮಿಗಳು ಆತನನ್ನು ಕೊಲೆಗೈದಿರಬಹುದು ಎಂದು ಎನ್ನಲಾಗಿದೆ.

SCROLL FOR NEXT