ಎಚ್. ಡಿ. ದೇವೇಗೌಡ 
ರಾಜ್ಯ

ಸಿಎಎ ವಿರುದ್ಧ ಗಾಂಧಿ ಮಾರ್ಗದ ಹೋರಾಟ- ಎಚ್. ಡಿ. ದೇವೇಗೌಡ

ಪೌರತ್ವ ತಿದ್ದುಪಡಿ ಕಾಯ್ದೆ- ಸಿಎಎ  ವಿರುದ್ಧ ಮಹಾತ್ಮ  ಗಾಂಧಿಯವರ ಮಾರ್ಗದಲ್ಲಿ ಶಾಂತಿಯುತ ಹೋರಾಟ  ನಡೆಸಲಾಗುವುದು ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್. ಡಿ. ದೇವೇಗೌಡ ಹೇಳಿದ್ದಾರೆ

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ- ಸಿಎಎ  ವಿರುದ್ಧ ಮಹಾತ್ಮ  ಗಾಂಧಿಯವರ ಮಾರ್ಗದಲ್ಲಿ ಶಾಂತಿಯುತ ಹೋರಾಟ  ನಡೆಸಲಾಗುವುದು ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್. ಡಿ. ದೇವೇಗೌಡ ಹೇಳಿದ್ದಾರೆ

ಇಂದು 71ನೇ ಗಣರಾಜ್ಯೋತ್ಸವ ಪ್ರಯುಕ್ತ ನಗರದ ಜೆಡಿಎಸ್ ಪಕ್ಷದ ಪ್ರಧಾನ ಕಚೇರಿ ಜೆ.ಪಿ.ಭವನದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.


ಕೇಂದ್ರ ಸರ್ಕಾರ ತನ್ನ ನಿರ್ಧಾರವನ್ನು ಪುನರ್  ಪರಿಶೀಲಿಸಬೇಕು. ಪ್ರತಿಕ್ರಿಯೆಗೆ ಪ್ರತಿಕ್ರಿಯೆಯೂ ಇರುತ್ತದೆ. ಹೀಗಾಗಿ‌ ಕೇಂದ್ರ ತನ್ನ  ನಿರ್ಧಾರವನ್ನು ಮತ್ತೊಮ್ಮೆ ಪರಿಶೀಲಿಸಲಿ ಎಂದು ಸೂಚ್ಯವಾಗಿ ದೇವೇಗೌಡ  ನುಡಿದರು. 

ಸಿಎಎ ಜಾರಿಗೆ ಮುಂದಾಗಿರುವ ಕೇಂದ್ರ ಸರ್ಕಾರದದ ವಿರುದ್ಧ ಹರಿಹಾಯ್ದ ದೇವೇಗೌಡ,  ಕೇಂದ್ರದ  ಇತ್ತೀಚಿನ ನಿರ್ಧಾರಗಳು ರಾಷ್ಟ್ರದ ಹಿತಾಸಕ್ತಿಗೆ ಧಕ್ಕೆ ತಂದಿವೆ. ಸಿಎಎ ವಿರುದ್ಧ ದೇಶದ ಜನ ಹೋರಾಟ ನಡೆಸುತ್ತಿದ್ದಾರೆ. ಆದರೆ  ಕೆಲವು ರಾಜ್ಯಗಳು ಸಿಎಎ ಜಾರಿ ಮಾಡದಿರಲು ನಿರ್ಧರಿಸಿವೆ ಎಂದರು‌.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT