ಆರೋಪಿ ಆದಿತ್ಯಾ ರಾವ್ 
ರಾಜ್ಯ

ಆದಿತ್ಯಾ ರಾವ್ ಲಾಕರ್ ನಲ್ಲಿ‌ ದೊರಕಿದ್ದು ಸೈನೈಡ್ ಎಂಬುದು ದೃಢ!

ಮಂಗಳೂರು ಬಜ್ಪೆ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಆರೋಪಿ ಆದಿತ್ಯಾ ರಾವ್ ವಿಚಾರಣೆ ತೀವ್ರಗೊಂಡಿದ್ದು, ಆತನ ಬ್ಯಾಂಕ್ ಲಾಕರ್‌ನಲ್ಲಿ ಪತ್ತೆಯಾದ ವಸ್ತು ಸೈನೇಡ್  ಎಂಬುದು ಈಗ ದೃಢಪಟ್ಟಿದೆ.

ಮಂಗಳೂರು: ಮಂಗಳೂರು ಬಜ್ಪೆ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ಆರೋಪಿ ಆದಿತ್ಯಾ ರಾವ್ ವಿಚಾರಣೆ ತೀವ್ರಗೊಂಡಿದ್ದು, ಆತನ ಬ್ಯಾಂಕ್ ಲಾಕರ್‌ನಲ್ಲಿ ಪತ್ತೆಯಾದ ವಸ್ತು ಸೈನೇಡ್  ಎಂಬುದು ಈಗ ದೃಢಪಟ್ಟಿದೆ.

ವಿಧಿವಿಜ್ಞಾನ ಪ್ರಯೋಗಾಲಯ ನೀಡಿರುವ ಪ್ರಾಥಮಿಕ ವರದಿಯಲ್ಲಿ ಈ ವಿಷಯ ಬಹಿರಂಗಗೊಂಡಿದೆ. ಹೀಗಾಗಿ ಬಾಂಬರ್  ಆದಿತ್ಯ ನನ್ನು ಸೈನೇಡ್ ಕುರಿತು ಮಂಗಳೂರು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.  ಸೈನೇಡ್  ಆತನಿಗೆ ಎಲ್ಲಿಂದ ದೊರಕಿತ್ತು? ಆತನೇ ವಸ್ತುಗಳನ್ನು ಬಳಸಿ ಸೈನೇಡ್ ತಯಾರಿಸಿದ್ದಾನಾ?  ಯಾವ ಉದ್ದೇಶಕ್ಕಾಗಿ ಅದನ್ನು ಬ್ಯಾಂಕ್ ಲಾಕರ್‌ನಲ್ಲಿ ಏಕೆ ಇಡಲಾಗಿತ್ತು ಎಂಬಿತ್ಯಾಗಿ  ತನಿಖೆಯನ್ನು ಪೊಲೀಸರು ಕೈಗೊಂಡಿದ್ದಾರೆ. 

ಇಂದು  ಪೌರತ್ವ ತಿದ್ದುಪಡಿ ಕಾಯ್ದೆ ಪರ ಕೇಂದ್ರ ಸಚಿವ ರಾಜ್ ನಾಥ್ ಸಿಂಗ್ ಅವರು  ಮಂಗಳೂರಿನಲ್ಲಿರುವ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿಭದ್ರತೆಯನ್ನು ಮಂಗಳೂರು ಉತ್ತರ  ವಿಭಾಗದ ಎಸಿಪಿ ಬೆಳ್ಳಿಯಪ್ಪ ಅವರು ವಹಿಸಿರುವ ಹಿನ್ನೆಲೆಯಲ್ಲಿ, ಆದಿತ್ಯ ರಾವ್ ನನ್ನು ಇಂದು ಕಿರಿಯ ಪೊಲೀಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ. 

ಸಮಾವೇಶ ಮುಗಿದ ಬಳಿಕ ಮತ್ತೆ ಬೆಳ್ಳಿಯಪ್ಪ ಅವರು ಆದಿತ್ಯನನ್ನು ತೀವ್ರ ವಿಚಾರಣೆಗೆ ಒಳಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ. ಆರೋಪಿಯನ್ನು ಶನಿವಾರ ಉಡುಪಿಗೆ ಕರೆತಂದಿದ್ದ ಮಂಗಳೂರಿನ ಪೊಲೀಸರು ಹಲವೆಡೆ ಸ್ಥಳ ಮಹಜರು ನಡೆಸಿದರು. 

ಕರ್ನಾಟಕ  ಬ್ಯಾಂಕ್‌ ಕುಂಜಿಬೆಟ್ಟು ಶಾಖೆಗೆ ಆದಿತ್ಯ ರಾವ್‌ ಅನ್ನು ಕರೆತರಲಾಗಿತ್ತು. ಆತನ  ಲಾಕರ್‌ನ ಕೀಲಿ ಕಳೆದು ಹೋಗಿದ್ದರಿಂದ ಕೀ ರಿಪೇರಿ ಮಾಡುವ ವ್ಯಕ್ತಿಯನ್ನು  ಕರೆಸಿ ಲಾಕರ್  ಬಾಗಿಲು ತೆರೆಯಲಾಗಿತ್ತು. ಬಳಿಕ ಅದರೊಳಗಿದ್ದ ವಸ್ತು ವಶಕ್ಕೆ ತೆಗೆದುಕೊಳ್ಳಲಾಯಿತ್ತು‌.  ನಂತರ ಲಾಕರ್ ನಲ್ಲಿ‌ ದೊರಕಿದ್ದ ಪುಡಿಯನ್ನು ಪರೀಕ್ಷೆಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು.  ಮಂಗಳೂರು  ಬಜ್ಪೆ ವಿಮಾನದ ಟಿಕೇಟ್ ಕೌಂಟರ್ ಬಳಿ ಬ್ಯಾಗ್ ನಲ್ಲಿ ಸಜೀವ ಬಾಂಬ್ ಇಟ್ಟ ತಾನೇ ಪರಾರಿಯಾಗಿರುವುದಾಗಿ ಆರೋಪಿ ಆದಿತ್ಯ ರಾವ್, ಬೆಂಗಳೂರು ಪೊಲೀಸರಿಗೆ ಶರಣಾಗಿದ್ದನು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT