ಮೆಟ್ರೋಗೆ ದಾರಿ ಮಾಡಿಕೊಡಲು 120 ವರ್ಷದ ಹಳೆಯ ಹನುಮ ದೇಗುಲ ತೆರವು 
ರಾಜ್ಯ

ಬೆಂಗಳೂರು: ಮೆಟ್ರೋಗೆ ದಾರಿ ಮಾಡಿಕೊಡಲು 120 ವರ್ಷದ ಹಳೆಯ ಹನುಮ ದೇಗುಲ ತೆರವು

ಸ್ಥಳೀಯರ ಪರ ಹಾಗೂ ವಿರೋಧದ ನಡುವೆಯೂ ಮೆಟ್ರೋ ಕಾಮಗಾರಿಗಾಗಿ ಸುಮಾರು 120 ವರ್ಷಗಳಷ್ಟು ಹಳೆಯದಾದ ಆಂಜನೇಯಸ್ವಾಮಿ ದೇವಾಲಯವನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ. 

ಬೆಂಗಳೂರು: ಸ್ಥಳೀಯರ ಪರ ಹಾಗೂ ವಿರೋಧದ ನಡುವೆಯೂ ಮೆಟ್ರೋ ಕಾಮಗಾರಿಗಾಗಿ ಸುಮಾರು 120 ವರ್ಷಗಳಷ್ಟು ಹಳೆಯದಾದ ಆಂಜನೇಯಸ್ವಾಮಿ ದೇವಾಲಯವನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ. 

ಹೊಸೂರು-ಬೊಮ್ಮಸಂದ್ರಕ್ಕೆ ಸಂಪರ್ಕ ಕಲ್ಪಿಸುವ ಮೆಟ್ರೋ ರೈಲು ಕಾಮಗಾರಿಯನ್ನು ಬೆಂಗಳೂರು ಮೆಟ್ರೋ ರೈಲು ನಿಗಮ ಕೈಗೆತ್ತಿಕೊಂಡಿದೆ. 

ಗಾರ್ವೇಬಾವಿ ಪಾಳ್ಯದ ಆಂಜನೇಯ ಸ್ವಾಮಿ ದೇವಸ್ಥಾನ ಇರುವ ಮಾರ್ಗದಲ್ಲಿಯೇ ಮೆಟ್ರೋ ಮಾರ್ಗ ಹಾದು ಹೋಗಬೇಕಿದೆ. ಈ ಹಿನ್ನೆಲೆಯಲ್ಲಿ ಸುಮಾರು 120 ವರ್ಷಗಳಷ್ಟು ಹಳೆಯದಾದ ಆಂಜನೇಯಸ್ವಾಮಿ ದೇವಾಲಯ ತೆರವಿಗೆ ಸೋಮವಾರ ಮೆಟ್ರೋ ನಿಗಮ ಮುಂದಾಗಿದ್ದು, ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಈಗಾಗಲೇ ಆಂಜನೇಯ ಸ್ವಾಮಿ ದೇವಾಲಯ ಇರುವ ಭೂಸ್ವಾಧೀನಕ್ಕಾಗಿ ಮೆಟ್ರೋ ನಿಗಮ ದೇವಾಲಯದ ಆಡಳಿತ ಮಂಡಳಿಗೆ ಸುಮಾರು ಒಂದೂವರೆ ಕೋಟಿಯಷ್ಟು ಪರಿಹಾರ ನೀಡಿದೆ. ಈ ವಿಷಯ ತಿಳಿಯದ ಸ್ಥಳೀಯರು ದೇವಸ್ಥಾನ ತೆರವುಗೊಳಿಸದಂತೆ ಅಡ್ಡಿಪಡಿಸಿದ್ದರಿಂದ ಕೆಲ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡಿತ್ತು. 

ಆದರೂ ಮೆಟ್ರೋ ನಿಗಮದ ಅಧಿಕಾರಿಗಳು ಮತ್ತು ದೇವಾಲಯದ ಆಡಳಿತ ಮಂಡಳಿಯ ಸದಸ್ಯರು ಸ್ಥಳೀಯರಿಗೆ ವಾಸ್ತವ ಪರಿಸ್ಥಿತಿ ಕುರಿತು ಮನವರಿಕೆ ಮಾಡಿಕೊಟ್ಟರು. ಪಿಲ್ಲರ್ ಸಮೀಪದಲ್ಲಿಯೇ ದೇವಾಲಯ ಇರುವುದರಿಂದ ತೆರವು ಅನಿವಾರ್ಯ ಎನ್ನುವುದನ್ನು ಮನವರಿಕೆ ಮಾಡಿಕೊಟ್ಟ ಬಳಿಕ ತೆರವು ಕಾರ್ಯ ಮುಂದುವರೆಯಿತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 World Cup, IND vs Pak: ಇಶಾನ್ ಕಿಶಾನ್ ಬ್ಯಾಟಿಂಗ್ ಅಬ್ಬರ; ಸ್ಪಿನ್ ಮೋಡಿಗೆ ಪಾಕ್ ತತ್ತರ, ಭಾರತಕ್ಕೆ 61 ರನ್ ಗೆಲುವು!

T20 World Cup 2026: ಸೂಪರ್ 8 ಹಂತಕ್ಕೆ ಭಾರತ ಲಗ್ಗೆ; ದೇಶಾದ್ಯಂತ ಸಂಭ್ರಮಾಚರಣೆ, ಗಣ್ಯರ ಶುಭಾಶಯ!

ಆಜಾದ್ ನಗರ: ಕಚ್ಚಾ ಬಾಂಬ್ ತಯಾರಿಕೆ ವೇಳೆ ಸ್ಫೋಟ, 4 ಮಂದಿಗೆ ಗಾಯ, ರೌಡಿ ಶೀಟರ್ ಸಾವು.. Video

'2048 ಬಂದ್ರೂ ಡಿಕೆ ಶಿವಕುಮಾರ್ ಸಿಎಂ ಆಗಲ್ಲ: ಏಕಂದ್ರೆ ನಾವು ಬಿಡಲ್ಲ; ಇನ್ನು ಮುಂದೆ ದೇಶವೂ ನಮ್ಮದೇ, ರಾಜ್ಯವೂ ನಮ್ಮದೇ'

'ಈ ಛಲವಾದಿ ನಾರಾಯಣಸ್ವಾಮಿ ನಾಯಿ ಥರ...ಪಾಪ ಬೊಗಳಿದೆ, ಅದಕ್ಕೆ ನಾವೇನೂ ಕಲ್ಲು ಎಸೆಯಲು ಹೋಗೋದಿಲ್ಲ'

SCROLL FOR NEXT