ಸಂಗ್ರಹ ಚಿತ್ರ 
ರಾಜ್ಯ

ಯುವತಿಯ ಅಶ್ಲೀಲ ಫೋಟೋ ಕಳುಹಿಸಿದ ಮಾಜಿ ಪ್ರೇಮಿ, ಆರೋಪಿಗಾಗಿ ಪೋಲೀಸರ ತಲಾಶ್

ಮಾಜಿ  ಪ್ರಿಯಕರ ನನ್ನ ಖಾಸಗಿ ಫೋಟೋಗಳನ್ನು ವಾಟ್ಸಾಪ್‌ನಲ್ಲಿ ಕಳುಹಿಸಿ ಬ್ಲಾಕ್‌ಮೇಲ್  ಮಾಡುತ್ತಿದ್ದಾನೆ ಎಂದು ಆರೋಪಿಸಿ ಕೊಲ್ಕತ್ತಾ ಮೂಲದ ಯುವತಿಯೊಬ್ಬಳು ಬೊಮ್ಮನಹಳ್ಳಿ ಪೊಲೀಸರಿಗೆ ದೂರು ನೀಡಿದ್ದಾಳೆ. 

ಬೆಂಗಳೂರು: ಮಾಜಿ  ಪ್ರಿಯಕರ ನನ್ನ ಖಾಸಗಿ ಫೋಟೋಗಳನ್ನು ವಾಟ್ಸಾಪ್‌ನಲ್ಲಿ ಕಳುಹಿಸಿ ಬ್ಲಾಕ್‌ಮೇಲ್  ಮಾಡುತ್ತಿದ್ದಾನೆ ಎಂದು ಆರೋಪಿಸಿ ಕೊಲ್ಕತ್ತಾ ಮೂಲದ ಯುವತಿಯೊಬ್ಬಳು ಬೊಮ್ಮನಹಳ್ಳಿ ಪೊಲೀಸರಿಗೆ ದೂರು ನೀಡಿದ್ದಾಳೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಸಂತ್ರಸ್ತೆ ಯುವತಿ ಹಾಗೂ ಆರೋಪಿ ಮಾಜಿ ಪ್ರಿಯಕರ ಸ್ಟಾಲೋನ್  ವುಡ್ ಇಬ್ಬರೂ ಪ್ರೀತಿಸುತ್ತಿದ್ದರು. ಕಳೆದ ಎರಡು  ವರ್ಷಗಳಿಂದ ಕೊಲ್ಕತ್ತಾದ ರೆಸ್ಟೊರೆಂಟ್ ಒಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯುವತಿಗೆ  ಫೇಸ್‌ಬುಕ್ ಮೂಲಕ ಸ್ಟಾಲೋನ್ ವುಡ್ ಪರಿಯಚವಾಗಿತ್ತು. ಪರಿಚಯ ಸ್ನೇಹವಾಗಿ ಇಬ್ಬರು  ಪ್ರೀತಿಸುತ್ತಿದ್ದನು. ಇಬ್ಬರೂ ಸಹ ಚಾಟಿಂಗ್-ಡೇಟಿಂಗ್ ಎಂದು ಕಾಲ ಕಳೆದಿದ್ದರು.

ಸ್ಟಾಲೋನ್  ವುಡ್ ನಗ್ನ ಫೋಟೋಗಳನ್ನು ಕಳಿಸುವಂತೆ ಯುವತಿಯಲ್ಲಿ ಕೇಳಿಕೊಂಡಿದ್ದ.  ಯುವತಿ ಹಿಂದೆ ಮುಂದೆ ನೋಡದೆ ತನ್ನ ಖಾಸಗಿ ಫೋಟೋಗಳನ್ನು  ಕಳುಹಿಸಿದ್ದಾಳೆ.ಇದಲ್ಲದೇ ಕೊಲ್ಕತ್ತಾದಲ್ಲಿ ಜೊತೆಯಲ್ಲಿ ಇರುವ ವೇಳೆ ಯುವತಿಯ ಅಶ್ಲೀಲ  ಫೋಟೋಗಳನ್ನು ಆರೋಪಿ ಕ್ಲಿಕ್ಕಿಸಿಕೊಂಡಿದ್ದನು. 

ಇತ್ತೀಚೆಗೆ ಯುವತಿ ಕೆಲಸ ಅರಸಿ  ಕೊಲ್ಕತ್ತಾದಿಂದ ಬೆಂಗಳೂರಿಗೆ ಬಂದಿದ್ದಾಳೆ. ಈ ವೇಳೆ ಆರೋಪಿಯ ಜೊತೆ ಜಗಳವಾಗಿ ಪ್ರೀತಿ ಮುರಿದು ಬಿದ್ದಿದೆ. ಇದರಿಂದ ಹತಾಶಗೊಂಡ ಸ್ಟಲೋನ್, ಯುವತಿಯ ಖಾಸಗಿ ಫೋಟೋಗಳನ್ನು ಶೇರ್ ಮಾಡುವುದಾಗಿ  ಬ್ಲಾಕ್ ಮಾಡಿದ್ದಾನೆ. ಕೊನೆಗೆ ಯುವತಿಯ ಖಾಸಗಿ ಫೋಟೋಗಳನ್ನು ತನ್ನ ಮೇಲಾಧಿಕಾರಿ ಇಕ್ಬಾಲ್  ಹಾಗೂ ವ್ಯವಸ್ಥಾಪಕ ನಿರ್ದೇಶಕ ಅರಿಂದಮ್ ಸರ್ಕಾರ್ ಎಂಬವರಿಗೆ ವಾಟ್ಸಾಪ್‌ನಲ್ಲಿ ಕಳುಹಿಸಿದ್ದಾನೆ.

ಇತ್ತ ಯುವತಿಗೆ ಬೇರೆ ಹುಡುಗನ ಜೊತೆ ಮದುವೆ ನಿಶ್ಚಯವಾಗಿತ್ತು.  ಆರೋಪಿಯ ಬಾಸ್ ಇಕ್ಬಾಲ್ ಯುವತಿಯ ಫೋಟೋವನ್ನು ನಿಶ್ಚಯವಾಗಿದ್ದ ಹುಡುಗನಿಗೆ ಶೇರ್  ಮಾಡಿದ್ದಾನೆ. ಹುಡುಗ ತನಗೆ ಬಂದ ಫೋಟೋ ನೋಡಿ ಮದುವೆ ರದ್ದು ಮಾಡಿದ್ದಾನೆ. 

ಇದರಿಂದ ಯುವತಿ ತನ್ನ ಹಳೆಯ ಪ್ರಿಯಕರನ ವಿರುದ್ಧ ದೂರು ನೀಡಿ, ಆತನಿಗೆ ಶಿಕ್ಷೆ ನೀಡುವಂತೆ ದೂರಿನಲ್ಲಿ ಒತ್ತಾಯಿಸಿದ್ದಾಳೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT