ನಳಿನಿ ಬಾಲಕುಮಾರ್ 
ರಾಜ್ಯ

ಫ್ರೀ ಕಾಶ್ಮೀರ  ಫಲಕ ಪ್ರದರ್ಶನ: ನಳಿನಿ ಬಾಲಯ್ಯಗೆ ಷರತ್ತುಬದ್ಧ ಜಾಮೀನು

‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶಿಸಿದ್ದ ಯುವತಿ ಬಿ. ನಳಿನಿ ಹಾಗೂ ಈ ಪ್ರತಿಭಟನೆಯನ್ನು ಆಯೋಜಿಸಿದ್ದ ಮೈಸೂರು ವಿವಿ ಸಂಶೋಧಕರ ಸಂಘದ ಅಧ್ಯಕ್ಷ ಎಸ್. ಮರಿದೇವಯ್ಯ ಅವರಿಗೆ ಇಲ್ಲಿನ ನ್ಯಾಯಾಲಯ ಷರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿ ಸೋಮವಾರ ಆದೇಶ ಹೊರಡಿಸಿದೆ.

ಮೈಸೂರು:  ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿ ಆವರಣದಲ್ಲಿ ಜ. 8 ರಂದು ನಡೆದಿದ್ದ ಪ್ರತಿಭಟನೆಯಲ್ಲಿ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶಿಸಿದ್ದ ಯುವತಿ ಬಿ. ನಳಿನಿ ಹಾಗೂ ಈ ಪ್ರತಿಭಟನೆಯನ್ನು ಆಯೋಜಿಸಿದ್ದ ಮೈಸೂರು ವಿವಿ ಸಂಶೋಧಕರ ಸಂಘದ ಅಧ್ಯಕ್ಷ ಎಸ್. ಮರಿದೇವಯ್ಯ ಅವರಿಗೆ ಇಲ್ಲಿನ ನ್ಯಾಯಾಲಯ ಷರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿ ಸೋಮವಾರ ಆದೇಶ ಹೊರಡಿಸಿದೆ.

ಇಲ್ಲಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಜೆ.ಆರ್. ಮೆಂಡೋನ್ಸ ಅವರು ಆರೋಪಿಗಳ ಪರ ವಕೀಲರು ಹಾಗೂ ಪಬ್ಲಿಕ್ ಪ್ರಾಸಿಕ್ಯೂಟರ್ ಅವರ ವಾದ-ಪ್ರತಿವಾದಗಳನ್ನು ಆಲಿಸಿದ ನಂತರ ಈ ಆದೇಶ ನೀಡಿದ್ದಾರೆ.

ಆರೋಪಿಗಳಾದ ನಳಿನಿ ಹಾಗೂ ಮರಿದೇವಯ್ಯ ಅವರಿಗೆ ತಲಾ 50 ಸಾವಿರ ರೂಪಾಯಿ ಬಾಂಡ್, ಒಬ್ಬರು ಶೂರಿಟಿ, ಪಾಸ್‌ಪೋರ್ಟ್ ಅನ್ನು ನ್ಯಾಯಾಲಯಕ್ಕೆ ಒಪ್ಪಿಸಬೇಕು. ತನಿಖಾಧಿಕಾರಿಗಳಿಗೆ ಸಹಕರಿಸಬೇಕು, 15 ದಿನಗಳಿಗೆ ಒಮ್ಮೆ ಪೊಲೀಸ್ ಠಾಣೆಗೆ ಹಾಜರಾಗಬೇಕು. ಸಾಕ್ಷ್ಯಗಳನ್ನು ನಾಶಪಡಿಸಬಾರದು, ಇದೇ ರೀತಿಯ ಅಪರಾಧಗಳನ್ನು ಮತ್ತೆ ಎಸಗಬಾರದು ಮತ್ತಿತರ ಷರತ್ತುಗಳನ್ನು ವಿಧಿಸಿ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಈಗಾಗಲೇ ಜಯಲಕ್ಷ್ಮೀಪುರಂ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿ ಆರೋಪಿಗಳ ವಿರುದ್ಧ ದೇಶದ್ರೋಹದ ಆರೋಪದಡಿ ಮೊಕದ್ದಮೆ ಹೂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT