ಸಂಗ್ರಹ ಚಿತ್ರ 
ರಾಜ್ಯ

ಕಾರಾಗೃಹದಲ್ಲಿ ಕೈದಿಗಳ ಅಸಹಜ ಸಾವು: ಜಿಲ್ಲಾಧಿಕಾರಿಗಳ ಸಕ್ಷಮ ಪ್ರಾಧಿಕಾರ ರಚನೆಗೆ 'ಹೈ' ಆದೇಶ

ರಾಜ್ಯದ ಕಾರಾಗೃಹಗಳಲ್ಲಿ ನಡೆದಿರುವ ಕೈದಿಗಳ ಅಸಹಜ ಸಾವು ಪ್ರಕರಣಗಳಲ್ಲಿ ಮೃತರ ಕುಟುಂಬದವರಿಗೆ ಮಧ್ಯಂತರ ಪರಿಹಾರ ನೀಡಲು ಜಿಲ್ಲಾಧಿಕಾರಿಗಳ ಸಕ್ಷಮ ಪ್ರಾಧಿಕಾರವನ್ನಾಗಿ ನೇಮಿಸಿ ಎರಡು ವಾರಗಳಲ್ಲಿ ಆದೇಶ ಹೊರಡಿಸಬೇಕೆಂದು ಸರ್ಕಾರ ನಿರ್ದೇಶಿಸಿದೆ. 

ಬೆಂಗಳೂರು: ರಾಜ್ಯದ ಕಾರಾಗೃಹಗಳಲ್ಲಿ ನಡೆದಿರುವ ಕೈದಿಗಳ ಅಸಹಜ ಸಾವು ಪ್ರಕರಣಗಳಲ್ಲಿ ಮೃತರ ಕುಟುಂಬದವರಿಗೆ ಮಧ್ಯಂತರ ಪರಿಹಾರ ನೀಡಲು ಜಿಲ್ಲಾಧಿಕಾರಿಗಳ ಸಕ್ಷಮ ಪ್ರಾಧಿಕಾರವನ್ನಾಗಿ ನೇಮಿಸಿ ಎರಡು ವಾರಗಳಲ್ಲಿ ಆದೇಶ ಹೊರಡಿಸಬೇಕೆಂದು ಸರ್ಕಾರ ನಿರ್ದೇಶಿಸಿದೆ. 

ಕೈದಿಗಳ ಅಸಹಜ ಸಾವು ಪ್ರಕರಣಗಳ ಸಂಬಂಧ ಸುಪ್ರೀಂಕೋರ್ಟ್'ನ ನಿರ್ದೇಶನದ ಮೇರೆಗೆ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ. 

ಪ್ರತಿಯೊಂದು ಕೈದಿಯ ಅಸಹಜ ಸಾವು ಪ್ರಕರಣದಲ್ಲಿ ಮೋಟಾರು ವಾಹನ ಕಾಯ್ದೆ 1988ರ ಸೆಕ್ಷನ್ 163ನ ನಿಯಮದಂತೆ ಪ್ರತ್ಯೇಕವಾಗಿ ಮಧ್ಯಂತರ ಪರಿಹಾರ ನಿಗದಿಪಡಿಸಿ ಮೃತರ ಕುಟುಂಬದವರಿಗೆ ನೀಡಬೇಕು. ಅದರ ವಿತರಣೆಯಲ್ಲಿನ ವಿಳಂಬ ತಪ್ಪಿಸಲು ಜಿಲ್ಲಾಧಿಕಾರಿಗಳನ್ನು ಸಕ್ಷಮ ಪ್ರಾಧಿಕಾರವನ್ನಾಗಿ ನೇಮಕ ಮಾಡಬೇಕು ಎಂದು ನ್ಯಾಯಪೀಠ ಆದೇಶಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ