ಬೆಂಗಳೂರು: ರಾಜ್ಯದ ಕಾರಾಗೃಹಗಳಲ್ಲಿ ನಡೆದಿರುವ ಕೈದಿಗಳ ಅಸಹಜ ಸಾವು ಪ್ರಕರಣಗಳಲ್ಲಿ ಮೃತರ ಕುಟುಂಬದವರಿಗೆ ಮಧ್ಯಂತರ ಪರಿಹಾರ ನೀಡಲು ಜಿಲ್ಲಾಧಿಕಾರಿಗಳ ಸಕ್ಷಮ ಪ್ರಾಧಿಕಾರವನ್ನಾಗಿ ನೇಮಿಸಿ ಎರಡು ವಾರಗಳಲ್ಲಿ ಆದೇಶ ಹೊರಡಿಸಬೇಕೆಂದು ಸರ್ಕಾರ ನಿರ್ದೇಶಿಸಿದೆ.
ಕೈದಿಗಳ ಅಸಹಜ ಸಾವು ಪ್ರಕರಣಗಳ ಸಂಬಂಧ ಸುಪ್ರೀಂಕೋರ್ಟ್'ನ ನಿರ್ದೇಶನದ ಮೇರೆಗೆ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ.
ಪ್ರತಿಯೊಂದು ಕೈದಿಯ ಅಸಹಜ ಸಾವು ಪ್ರಕರಣದಲ್ಲಿ ಮೋಟಾರು ವಾಹನ ಕಾಯ್ದೆ 1988ರ ಸೆಕ್ಷನ್ 163ನ ನಿಯಮದಂತೆ ಪ್ರತ್ಯೇಕವಾಗಿ ಮಧ್ಯಂತರ ಪರಿಹಾರ ನಿಗದಿಪಡಿಸಿ ಮೃತರ ಕುಟುಂಬದವರಿಗೆ ನೀಡಬೇಕು. ಅದರ ವಿತರಣೆಯಲ್ಲಿನ ವಿಳಂಬ ತಪ್ಪಿಸಲು ಜಿಲ್ಲಾಧಿಕಾರಿಗಳನ್ನು ಸಕ್ಷಮ ಪ್ರಾಧಿಕಾರವನ್ನಾಗಿ ನೇಮಕ ಮಾಡಬೇಕು ಎಂದು ನ್ಯಾಯಪೀಠ ಆದೇಶಿಸಿದೆ.