ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ವ್ಯಾಪ್ತಿಗೆ ರಚಿಸಲಾಗಿದ್ದ ತಜ್ಞರ ವಿಶೇಷ ಸಮಿತಿಯನ್ನು ಕೇವಲ ಬಿಬಿಎಂಪಿ ವ್ಯಾಪ್ತಿಗೆ ಸೀಮಿತಗೊಳಿಸಿದ ಸರ್ಕಾರದ ಕ್ರಮದ ವಿರುದ್ಧ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ವಿಶೇಷ ಸಮಿತಿಯನ್ನು ಬಿಬಿಎಂಪಿ ವ್ಯಾಪ್ತಿಗೆ ಸೀಮಿತಗೊಳಿಸುವ ಕುರಿತು 2020ರ ಜ.16ರಂದು ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಈ ಅಧಿಸೂಚನೆಗೆ ನ್ಯಾಯಪೀಠ ಆಕ್ಷೇಪ ವ್ಯಕ್ತಪಡಿಸಿದೆ.
ಹೈಕೋರ್ಟ್ ಅನುಮತಿ ಇಲ್ಲದೆಯೇ ತಜ್ಞರ ಸಮಿತಿಯನ್ನು ಬೆಂಗಳೂರು ನಗರಕ್ಕೆ ಸೀಮಿತಗೊಳಿಸಿ ಸರ್ಕಾರ ಹೇಗೆ ನೋಟಿಫಿಕೇಷನ್ ಹೊರಡಿಸಿದೆ. ಈ ಕುರಿತು ವಿವರಣೆ ಸರ್ಕಾರ ವಿವರಣೆ ನೀಡಬೇಕೆಂದು ಹೇಳಿದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿದೆ.