ಸಾಂದರ್ಭಿಕ ಚಿತ್ರ 
ರಾಜ್ಯ

ಬಿಸಿಯೂಟ ತಯಾರಕರ ಸಂಬಳ ವಿಳಂಬವಾದ್ದಲ್ಲಿ ಅಧಿಕಾರಿಗಳ ಸಂಬಳವೂ ವಿಳಂಬ- ಶಿಕ್ಷಣ ಇಲಾಖೆ 

ಬಿಸಿಯೂಟ ತಯಾರಕರ ಸಂಬಳವನ್ನು ಸರಿಯಾದ ವೇಳೆಗೆ ನೀಡದ ಅಧಿಕಾರಿಗಳ ಸಂಬಳವನ್ನು ವಿಳಂಬ ಮಾಡಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ.

ಬೆಂಗಳೂರು: ಬಿಸಿಯೂಟ ತಯಾರಕರ ಸಂಬಳವನ್ನು ಸರಿಯಾದ ವೇಳೆಗೆ ನೀಡದ ಅಧಿಕಾರಿಗಳ ಸಂಬಳವನ್ನು ವಿಳಂಬ ಮಾಡಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ.

ಜನವರಿ 21ರಂದು ರಾಜ್ಯದ ವಿವಿಧೆಡೆಯಿಂದ ಬಂದಿದ್ದ   ಬಿಸಿಯೂಟ ತಯಾರಕರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದರು. ಅದೇ ದಿನ ಅವರ ಕೆಲವೊಂದು ಬೇಡಿಕೆಗಳ ಕುರಿತಂತೆ ಸರ್ಕಾರ ಆದೇಶ ಹೊರಡಿಸಿದೆ.

ಪ್ರತಿ ತಿಂಗಳು 5ನೇ ತಾರೀಖಿಗೂ ಮುಂಚೆ ಸಂಬಳ ನೀಡಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಒಂದು ವೇಳೆ ವಿಳಂಬವಾದ್ದಲ್ಲಿ ಸಹಾಯಕ ನಿರ್ದೇಶಕರ ಸಂಬಳವನ್ನು ಮೊದಲಿಗೆ ವಿಳಂಬ ಮಾಡಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಕೆಜಿ ಜಗದೀಶ್ ಆದೇಶ ಹೊರಡಿಸಿದ್ದಾರೆ

ಬಿಸಿಯೂಟ ತಯಾರಕರ ಕೆಲವೊಂದು ಕುಂದುಕೊರತೆಗಳನ್ನು ಬಗೆಹರಿಸುವ ಸಂಬಂಧ ಶಿಕ್ಷಣ ಅಧಿಕಾರಿಗಳು, ಉಪ ನಿರ್ದೇಶಕರು ಹಾಗೂ ಬಿಇಓಗಳಿಗೆ ಕೆಲವೊಂದು ಆದೇಶಗಳನ್ನು ನೀಡಲಾಗಿದೆ. 

ಆದಾಗ್ಯೂ, ಬಿಸಿಯೂಟ ತಯಾರಕರ ಪ್ರಮುಖ ಬೇಡಿಕೆಯಾಗಿದ್ದ ಸಂಬಳದ ಹೆಚ್ಚಳದ ಬಗ್ಗೆ ಏನನ್ನೂ ಉಲ್ಲೇಖಿಸಿಲ್ಲ. 40 ಕ್ಕಿಂತಲೂ ಕಡಿಮೆ ವಯಸ್ಸಿನ ಕೆಲಸಗಾರರು ಪ್ರಧಾನ ಮಂತ್ರಿ ಶ್ರಮ ಯೋಗಿ ಮನ್ ಧನ್ ಪಿಂಚಣಿ ಯೋಜನೆಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪರಿಶಿಷ್ಟ ಜಾತಿ, ಪಂಗಡದ ಕೆಲಸಗಾರರು ಕೆಲಸ ತೊರೆಯುವ ಬಗ್ಗೆ  ನಿಜವಾದ ಕಾರಣಗಳನ್ನು ತಿಳಿಯಬೇಕು, ಒಂದು ವೇಳೆ ಅವರು ಸ್ವಯಂ ಪ್ರೇರಿತರಾಗಿ ಕೆಲಸ ತೊರೆದರೆ ಅದೇ ಸಮುದಾಯದ ಬೇರೊಬ್ಬರನ್ನು ನೇಮಕ ಮಾಡಿಕೊಳ್ಳಬೇಕು ಎಂದು ಉಪ ನಿರ್ದೇಶಕರಿಗೆ ಆಯುಕ್ತ ಜಗದೀಶ್ ನಿರ್ದೇಶಿಸಿದ್ದಾರೆ. 

ಒಂದು ವೇಳೆ ದಾರ್ಜನ್ಯ ನಡೆದಿದ್ದಲ್ಲಿ ಆರೋಪಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಒಂದು ವೇಳೆ ಆರೋಪಿ ಸರ್ಕಾರಿ ನೌಕರನಾದಲ್ಲಿ ಕೇಂದ್ರ ನಾಗರಿಕ ಸೇವಾ ನಿಯಮಗಳ ಪ್ರಕರಣ ಶಿಸ್ತು ಕ್ರಮ ಜರುಗಿಸಬೇಕೆಂದು ತಿಳಿಸಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಕ್ಕಳ ಸಾವಿಗೆ ಪ್ರತೀಕಾರ: ಇಸ್ರೇಲ್-ಅಮೆರಿಕ, ಗಲ್ಫ್ ದೇಶಗಳ ಮೇಲೆ ದಾಳಿ ನಿಲ್ಲಲ್ಲ; ಇರಾನ್ ಹೊಸ ಸರ್ವೋಚ್ಛ ನಾಯಕ ವಾರ್ನಿಂಗ್!

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ನಮ್ಮ ಶಕ್ತಿ ಇರಾನ್ ನಿರ್ನಾಮಕ್ಕೆ ಮೀಸಲು, ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್ ಗಳಿಗೆ ಬೆಂಗಾವಲು ನೀಡಲ್ಲ: ಅಮೆರಿಕ

ಮಾರ್ಚ್ 16 ರಂದು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

SCROLL FOR NEXT