ಭಾಸ್ಕರ್ ರಾವ್ 
ರಾಜ್ಯ

'ಓಮ್ನಿಯಲ್ಲಿ 15 ಶಾಲಾ  ಮಕ್ಕಳು: ಒಂದು ವೇಳೆ ಅಪಘಾತ ಸಂಭವಿಸಿದರೆ ಯಾರು ಹೊಣೆ'?

ಪೊಲೀಸ್ ಕಮೀಷನರ್ ಬಾಸ್ಕರ್ ರಾವ್, ಶಾಲಾ ವಾಹನವೊಂದರ ಫೋಟೋ ಹಾಕಿ ಶಾಲೆ ಆಡಳಿತ ಮಂಡಳಿ ಮತ್ತು ಪೋಷಕರನ್ನು ಪ್ರಶ್ನಿಸಿದ್ದಾರೆ.

ಬೆಂಗಳೂರು: ಪೊಲೀಸ್ ಕಮೀಷನರ್ ಬಾಸ್ಕರ್ ರಾವ್, ಶಾಲಾ ವಾಹನವೊಂದರ ಫೋಟೋ ಹಾಕಿ ಶಾಲೆ ಆಡಳಿತ ಮಂಡಳಿ ಮತ್ತು ಪೋಷಕರನ್ನು ಪ್ರಶ್ನಿಸಿದ್ದಾರೆ.

ಹದಿನೈದು ಮಕ್ಕಳನ್ನು ಕರೆದೊಯ್ಯುತ್ತಿರುವ ಓಮ್ನಿ ಕಾರೊಂದರ ಫೋಟೊವನ್ನು ಟ್ವಿಟರ್‌ನಲ್ಲಿ ಅಪ್‌ಲೋಡ್‌ ಮಾಡುವ ಮೂಲಕ ಪೊಲೀಸ್‌ ಕಮಿಷನರ್‌ ಭಾಸ್ಕರ್‌ ರಾವ್, ಶಾಲಾ ಆಡಳಿತ ಮಂಡಳಿ ಮತ್ತು ಪೋಷಕರಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

‘4+1 ಜನರ ಸಾಮರ್ಥ್ಯದ ಓಮ್ನಿಯಲ್ಲಿ 15 ಮಕ್ಕಳು ಪ್ರಯಾಣಿಸುತ್ತಿದ್ದಾರೆ. ಈ ವಾಹನವನ್ನು ಪೊಲೀಸು ತಡೆದರೆ ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿ ಆಕ್ರೋಶ ವ್ಯಕ್ತಪಡಿಸುತ್ತದೆ. ಈ ವಾಹನದಲ್ಲಿರುವ ಸಿಲಿಂಡರ್ ಮೇಲೆ ಮಕ್ಕಳು ಕುಳಿತಿದ್ದಾರೆ. 

ಸಾಮರ್ಥ್ಯಕ್ಕಿಂತ ಹೆಚ್ಚು ಜನರನ್ನು ಕೊಂಡೊಯ್ಯುವ ವಾಹನಗಳು ಅಪಘಾತಕ್ಕೊಳಗಾಗುವ ಸಾಧ್ಯತೆಗಳಿರುತ್ತವೆ. ಒಂದು ವೇಳೆ ಅಪಘಾತ ಸಂಭವಿಸಿದರೆ ಯಾರು ಹೊಣೆ’ ಎಂದು ಕಮಿಷನರ್‌ ಟ್ವೀಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಅಗತ್ಯಕ್ಕಿಂತ ಹೆಚ್ಚಿನ ಮಕ್ಕಳನ್ನು  ಕರೆದೊಯ್ಯುವ ವಾಹನವನ್ನು ಆರ್‌ಟಿಒ ಮತ್ತು ಟ್ರಾಫಿಕ್ ಪೊಲೀಸರುತಡೆದು ಅವುಗಳನ್ನು ವಶಪಡಿಸಿಕೊಳ್ಳಬೇಕು. ಕೋರ್ಟ್ ದಂಡ ವಿಧಿಸಬೇಕು,  ಇಲ್ಲಿ  ಪೊಲೀಸ್ ಕಮಿಷನರ್ ಶಾಲೆಗಳು ಮತ್ತು ಮಕ್ಕಳ ಪೋಷಕರೇ ನೈತಿಕ ಜವಾಬ್ದಾರಿ ಹೊರಬೇಕು ಎಂದು ಹೇಳಿದ್ದಾರೆ, ಸುಪ್ರಿಂಕೋರ್ಟ್ ಕೂಡ  ವಾಹನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನನು ತುಂಬಬಾರದು ಇದು ಶಾಲೆಯ ಜವಾಬ್ದಾರೆ ಎಂದು ಆದೇಶಿಸಿದೆ, ಆದರೆ ಇದನ್ನು ಯಾರು ಅನುಸರಿಸುತ್ತಿಲ್ಲ ಎಂದು ಸಂಚಾರ ವಿಭಾಗದ ಹೆಚ್ಚುವರಿ ಕಮಿಷನರ್ ರವಿಕಾಂತೇಗೌಡ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT