ಸಾಂದರ್ಭಿಕ ಚಿತ್ರ 
ರಾಜ್ಯ

ಕ್ವಾರಂಟೈನ್ ನಿಯಮ ಉಲ್ಲಂಘನೆ: ಮೂವರ ವಿರುದ್ಧ ದೂರು

ರಾಜ್ಯದಲ್ಲಿ ದಿನದಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚು ಜನರನ್ನು ವಕ್ಕರಿಸಿರುತ್ತಿದ್ದು, ಜನ ಬೆಚ್ಚಿ ಬಿದ್ದಿದ್ದಾರೆ. ಈ ನಡುವೆ ಕ್ವಾರಂಟೈನ್ ನಲ್ಲಿ ಇರಬೇಕಾದವರು ಸರ್ಕಾರದ ನಿಯಮ ಗಾಳಿಗೆ ತೂರಿ ಹೊರಗಡೆ ಅಡ್ಡಾಡುತ್ತಿರುವುದು ಅಧಿಕಾರಿಗಳಿಗೆ ಮತ್ತೊಂದು ತಲೆನೋವಾಗಿ ಪರಿಣಮಿಸಿದೆ.

ಬೆಂಗಳೂರು:  ರಾಜ್ಯದಲ್ಲಿ ದಿನದಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚು ಜನರನ್ನು ವಕ್ಕರಿಸಿರುತ್ತಿದ್ದು, ಜನ ಬೆಚ್ಚಿ ಬಿದ್ದಿದ್ದಾರೆ. ಈ ನಡುವೆ ಕ್ವಾರಂಟೈನ್ ನಲ್ಲಿ ಇರಬೇಕಾದವರು ಸರ್ಕಾರದ ನಿಯಮ ಗಾಳಿಗೆ ತೂರಿ ಹೊರಗಡೆ ಅಡ್ಡಾಡುತ್ತಿರುವುದು ಅಧಿಕಾರಿಗಳಿಗೆ ಮತ್ತೊಂದು ತಲೆನೋವಾಗಿ ಪರಿಣಮಿಸಿದೆ.

ನಗರದಲ್ಲಿ ಕ್ವಾರಂಟೈನ್​ ನಿಯಮ ಉಲ್ಲಂಘಿಸಿದ ಮೂವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಗಾರೆಬಾವಿಪಾಳ್ಯದ ಕೃಷ್ಣ, ಹೊಸಪಾಳ್ಯ ನಿವಾಸಿ ಚಕ್ರಧರ್, ಕೂಡ್ಲುಗೇಟ್ ನೋವೆಲ್ ಟೆಕ್ ಪಾರ್ಕ್ ನ ಗೌತಮ್​ಗೆ ಕ್ವಾರಂಟೈನ್​ಗೆ ಒಳಗಾಗಲು​ ಬಿಬಿಎಂಪಿ ಅಧಿಕಾರಿಗಳು ಸೂಚಿಸಿದ್ದರು. ಆದರೂ, ಈ ಮೂವರು ಅಧಿಕಾರಿಗಳ ಸೂಚನೆ ಲೆಕ್ಕಿಸದೇ ಮನೆಯಿಂದ ಹೊರಗಡೆ ಹೋಗಿದ್ದರು. ಇದನ್ನು ಗಮನಿಸಿ ತಕ್ಷಣ ಸ್ಥಳೀಯರು ಬಿಬಿಎಂಪಿ ಅಧಿಕಾರಿಗಳ ಗಮನಕ್ಕೆ ತಂದಿದ್ದರು.

ಈ ಮೂವರ ಕುಟುಂಬಸ್ಥರಿಗೆ ಸೋಂಕು ತಗುಲಿರುವ ಕಾರಣ ಹೋಂ ಕ್ವಾರಂಟೈನ್​ನಲ್ಲಿರುವಂತೆ ಸೂಚಿಸಲಾಗಿತ್ತು. ಆದರೆ, ಇವರು ನಿಯಮ ಉಲ್ಲಂಘಿಸಿ ಮನೆಯಿಂದ ಹೊರ ಹೋಗಿದ್ದು, ಈ ಬಗ್ಗೆ ಸ್ಥಳೀಯರು ಬಿಬಿಎಂಪಿ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ಹಿನ್ನೆಲೆ ಬಿಬಿಎಂಪಿ ಅಧಿಕಾರಿಗಳು ಕ್ವಾರಂಟೈನ್​​ನಲ್ಲಿ​ ಇದ್ದ ವ್ಯಕ್ತಿಗಳ ಮನೆಗೆ ಭೇಟಿ ನೀಡಿ ಪರಿಶೀಲನೆ‌ ಮಾಡಿದಾಗ ಮೂವರು ಹೊರ ಹೋಗಿರುವುದು ಗೊತ್ತಾಗಿದೆ‌. ಬಿಬಿಎಂಪಿ ಅಧಿಕಾರಿಗಳ ದೂರಿನ ಮೇರೆಗೆ ಸರ್ಕಾರಿ ಆದೇಶ ಉಲ್ಲಂಘನೆಯಡಿ ಎಫ್ಐಆರ್ ದಾಖಲು‌ ಮಾಡಿ ತನಿಖೆ ಮುಂದುವರಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT