ಯಡಿಯೂರಪ್ಪ 
ರಾಜ್ಯ

ಕೋವಿಡ್ ವಿರುದ್ಧ ದಣಿವರಿಯದೆ ಹೋರಾಡುತ್ತಿರುವ ಎಲ್ಲ ವೈದ್ಯರಿಗೆ ನಮನ: ಸಿಎಂ ಯಡಿಯೂರಪ್ಪ

ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ದೇಶದಾದ್ಯಂತ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕೊರೋನಾ ವಿರುದ್ಧ ದಣಿವರಿಯದೆ ಹೋರಾಡುತ್ತಿರುವ ಎಲ್ಲಾ ವೈದ್ಯರಿಗೆ ನಮನ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಹೇಳಿದ್ದಾರೆ. 

ಬೆಂಗಳೂರು: ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ದೇಶದಾದ್ಯಂತ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕೊರೋನಾ ವಿರುದ್ಧ ದಣಿವರಿಯದೆ ಹೋರಾಡುತ್ತಿರುವ ಎಲ್ಲಾ ವೈದ್ಯರಿಗೆ ನಮನ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಹೇಳಿದ್ದಾರೆ. 

ಪ್ರಸಕ್ತ ಸನ್ನಿವೇಶದಲ್ಲಿ ವೈದ್ಯರ ಸೇವೆ ಅತ್ಯಂತ ಮಹತ್ವಪೂರ್ಣ ಮತ್ತು ಅವಶ್ಯಕ. ನಾಡಿನ ಜನತೆಯ ಆರೋಗ್ಯ ರಕ್ಷಣೆಗೆ ವೈದ್ಯರು ಹಗಲಿರುಳು ತಮ್ಮ ಪ್ರಾಣದ ಹಂಗು ತೊರೆದು ಶ್ರಮಿಸುತ್ತಿದ್ದಾರೆ. ಕೋವಿಡ್-19 ಸಮಸ್ಯೆಯ ಸಂದರ್ಭದಲ್ಲಿ ಮಾತ್ರವೇ ಅಲ್ಲದೇ ವರ್ಷಪೂರ್ತಿ ಜನರ ಸ್ವಾಸ್ಥ್ಯಕ್ಕಾಗಿ ತಮ್ಮ ಸೇವೆಯನ್ನು ಮುಡಿಪಾಗಿಟ್ಟ ವೈದ್ಯ ಸಮುದಾಯದ ಕೊಡುಗೆಯನ್ನು ನಾನು ಈ ಸಂಕಷ್ಟದ ಸಮಯದಲ್ಲಿ ಕೃತಜ್ಞತೆಯಿಂದ ಸ್ಮರಿಸುತ್ತೇನೆ. ಕೋವಿಡ್-19ನ್ನು ಎದುರಿಸಿ ಜನತೆಗೆ ಭರವಸೆ ಮೂಡಿಸುವ ನಿಟ್ಟಿನಲ್ಲಿ ವೈದ್ಯರು ಯಶಸ್ಸು ಸಾಧಿಸುತ್ತಾರೆನ್ನುವ ವಿಶ್ವಾಸ ನನಗಿದೆ ಎಂದು ಹೇಳಿದ್ದಾರೆ. 

ಎಲ್ಲಾ ವೈದ್ಯರಿಗೆ ರಾಷ್ಟ್ರೀಯ ವೈದ್ಯರ ದಿನದ ಹಾರ್ದಿಕ ಶುಭಕಾಮನೆಗಳು, ಅನಾರೋಗ್ಯ ಉಂಟಾದಾಗ ಚಿಕಿತ್ಸೆ ನೀಡುವ ವೈದ್ಯರನ್ನು ದೇವರಂತೆ ಕಾಣುತ್ತೇವೆ. ವೈದ್ಯರ ಕರ್ತವ್ಯನಿಷ್ಠೆ. ಪರಿಶ್ರಮ ಮತ್ತು ಸೇವೆಗಳನ್ನು ಸಮಾಜ ಸದಾ ಆದರಿಸುತ್ತದೆ. ಈ ಕೋವಿಡ್ ವಿರುದ್ಧ ದಣಿವರಿಯದೆ ಹೋರಾಡುತ್ತಿರುವ ಎಲ್ಲಾ ವೈದ್ಯರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸೋಣ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT