ಎಚ್.ಕೆ ಪಾಟೀಲ್ 
ರಾಜ್ಯ

ಕೊರೋನಾ ನಿರ್ವಹಣೆಯಲ್ಲಿ ಲೋಪ: ಎಚ್.ಕೆ ಪಾಟೀಲ್ ರಿಂದ ಅಧಿಕಾರಿಗಳಿಗೆ ತರಾಟೆ

ಕೊರೋನಾ ನಿರ್ಹಹಣೆ ತೀರಾ ಕಳಪೆಯಾಗಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕ ಎಚ್ ಕೆ ಪಾಟೀಲ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಬೆಂಗಳೂರು: ಕೊರೋನಾ ನಿರ್ಹಹಣೆ ತೀರಾ ಕಳಪೆಯಾಗಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕ ಎಚ್ ಕೆ ಪಾಟೀಲ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ವಿಧಾನಸಭೆಯಲ್ಲಿ ನಡೆದ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು ‘ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಕೊರೊನಾ ಪರೀಕ್ಷೆ, ಸೋಂಕಿತರಿಗೆ ಚಿಕಿತ್ಸೆ ಮತ್ತು ಸೋಂಕಿತರ ಪತ್ತೆ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ. 25 ಸಾವಿರ ಜನರ ಪರೀಕ್ಷಾ ವರದಿ ಬಾಕಿ ಇದೆ ಎಂದರೆ ಏನರ್ಥ’ ಎಂದು ಸಮಿತಿ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಭ್ರಷ್ಟಚಾರ ಆಗಿದೆ ಎಂಬ ವಿಚಾರ ಗಮನಕ್ಕೆ ಬಂದಿದೆ ಎಂದು ಸಾರ್ವಜನಿಕ‌ ಲೆಕ್ಕಪತ್ರ ಸಮಿತಿ ಅಧ್ಯಕ್ಷ ಎಚ್.ಕೆ ಪಾಟೀಲ್ ಹೇಳಿದ್ದಾರೆ. ಕೊರೊನಾ ಪರೀಕ್ಷೆಗಳ ಫಲಿತಾಂಶ ಬಾಕಿ ಇವೆ. ಚಿಕಿತ್ಸೆಗೆ ಹಾಸಿಗೆಗಳ ಕೊರತೆ ಇದೆ. ಈಗ ಹಾಸಿಗೆಗಳ ಅರೇಂಜ್ಮೆಂಟ್ ಮಾಡಲು ಹೊರಟಿದೆ ಸರ್ಕಾರ. ಆಸ್ಪತ್ರೆಗಳಲ್ಲೇ ಯಾಕೆ ಬೆಡ್ ಗಳ ವ್ಯವಸ್ಥೆ ಮಾಡ್ತಿಲ್ಲ ಸರ್ಕಾರ? ಕೊರೊನಾ ನಿರ್ವಹಣೆಯಲ್ಲಿ ಲೋಪ ಆಗಿದೆ'' ಎಂದು ಎಚ್ ಕೆ ಪಾಟೀಲ್ ಆರೋಪ ಮಾಡಿದ್ದಾರೆ.

''ಕೊವಿಡ್ ನಿಯಂತ್ರಣಕ್ಕೆ ಏನು ವ್ಯವಸ್ಥೆ ಮಾಡಬೇಕು, ಅದರಲ್ಲಿ ಸರ್ಕಾರದಿಂದ ಲೋಪ ಆಗಿದೆ. 15,000 ಕೊವಿಡ್ ಪರೀಕ್ಷಾ ರಿಸಲ್ಟ್ ಬರಲು ಬಾಕಿ ಇದೆ ಎಂದು ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ. ಪರೀಕ್ಷಾ ವರದಿಯನ್ನು ನೀಡಲು ವಾರಗಟ್ಟೆಲೆ ತೆಗೆದುಕೊಳ್ಳಲಾಗಿದೆ. ಮೃತಪಟ್ಟವರ ಕೊವಿಡ್ ಟೆಸ್ಟಿಂಗ್ ವರದಿ ಬರದೆ ವಾರಗಟ್ಟೆಲೆ ಶವಾಗಾರದಲ್ಲಿ ಇಟ್ಟುಕೊಳ್ಳಲಾಗಿದೆ. ಅದು ಅತ್ಯಂತ ಆತಂಕಕಾರಿ ವಿಚಾರವಾಗಿದೆ'' ಎಂದು ವಾಗ್ದಾಳಿ ನಡೆಸಿದ್ದಾರೆ.

ಕೊವಿಡ್ ನಿಂದ ಮೃತಪಟ್ಟವರನ್ನು ಜಾನುವಾರು ತರ ನೋಡಲಾಗುತ್ತಿದೆ. ಬಳ್ಳಾರಿಯಲ್ಲಿ ಮೃತರ ಶವಗಳನ್ನು ಕಸದ ರೀತಿ ಕನಿಷ್ಟ ಗೌರವ ನೀಡದೆ ಬಿಸಾಡಲಾಗಿದೆ. ಇದು ಅತ್ಯಂತ ಖಂಡನೀಯ‌ ವಿಚಾರವಾಗಿದೆ. ಸತ್ತವರನ್ನು ಹೂಳಲು ಜಾಗ ಸಿಗುತ್ತಿಲ್ಲ. ಆ ರೀತಿ ಮಾಡಬಾರದು'' ಎಂದು ಖಂಡಿಸಿದ್ದಾರೆ.

ಇನ್ನೂ ಕೊರೋನಾ ರೋಗಿಗಳಿಗೆ ಶೌಚಾಲಯದ ಬಗ್ಗೆ ಸಮಿತಿ ಪ್ರಶ್ನಿಸಿತು. ಈ ವೇಳೆ ಉತ್ತರಿಸಿದ ಆರೋಗ್ಯ ಇಲಾಖೆ ಅಧಿಕಾರಿಗಳು ಪ್ರತಿ ರೋಗಿಗೆ ಒಂದು ಶೌಚಾಲಯ ನೀಡಿದ್ದೇವೆ ಎಂದು ಹೇಳಿದರು, ಇದಕ್ಕೆ ಪ್ರತಿಕ್ರಿಯಿಸಿದ ಸಮಿತಿ ಸದಸ್ಯರು ನಿಮ್ಮ ಮನೆಯಲ್ಲಿ ಶೌಚಾಲಯ ವ್ಯವಸ್ಥೆ ಹೇಗಿದೆ ಎಂದು ಪ್ರಶ್ನಿಸಿದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT