ಸೋಮಶೇಖರ್ 
ರಾಜ್ಯ

ಮೈಸೂರಿನಲ್ಲಿ ಸಂಜೆ 6 ಗಂಟೆ ನಂತರ ಸಂಪೂರ್ಣ ಬಂದ್‌: ಸಚಿವ ಸೋಮಶೇಖರ್

ಮಾಸ್ಕ್ ಹಾಕದೇ ಹೊರಬರುವವರಿಗೆ ದಂಡ ಹಾಗೂ ಸಂಜೆ 6 ಗಂಟೆ ನಂತರ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ವಿಧಿಸುತ್ತಿದ್ದೇವೆ ಎಂದು ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ಮೈಸೂರು: ಮಾಸ್ಕ್ ಹಾಕದೇ ಹೊರಬರುವವರಿಗೆ ದಂಡ ಹಾಗೂ ಸಂಜೆ 6 ಗಂಟೆ ನಂತರ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ವಿಧಿಸುತ್ತಿದ್ದೇವೆ ಎಂದು ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ನೂತನ ಜಿಲ್ಲಾ ಕಚೇರಿಗಳ ಸಂಕೀರ್ಣದಲ್ಲಿ ಜಿಲ್ಲಾಧಿಕಾರಿಗಳು, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೊರೋನಾ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನಿಯಂತ್ರಣಕ್ಕೆ ತರಲು ಸಾರ್ವಜನಿಕರ ಸಹಕಾರ ಹಾಗೂ ಜವಾಬ್ದಾರಿ ಸಹ ದೊಡ್ಡದು. ಈ ಹಿನ್ನೆಲೆಯಲ್ಲಿ ಇನ್ನು ಮಾಸ್ಕ್ ಹಾಕದೇ ಹೊರ ಬರುವುದು ಕಂಡರೆ ಪೊಲೀಸರು ದಂಡಹಾಕಲಿದ್ದಾರೆ ಎಂದು ಹೇಳಿದ್ದಾರೆ.

ನಗರ ಪ್ರದೇಶಗಳಲ್ಲಿ ಮಾಸ್ಕ್ ಹಾಕದವರಿಗೆ 200 ರೂಪಾಯಿ ಹಾಗೂ ಗ್ರಾಮಾಂತರದಲ್ಲಿ 100 ರೂಪಾಯಿ ದಂಡ ವಿಧಿಸಲಾಗುತ್ತದೆ ಎಂದು ತಿಳಿಸಿದರು. ಜೊತೆಗೆ ಸಾಮಾಜಿಕ ಅಂತರವನ್ನೂ ಕಾಯ್ದುಕೊಳ್ಳಬೇಕು. ಈಗ ಬಾಯಿ ಮಾತಿನಲ್ಲಿ ಹೇಳಲಾಗುತ್ತದೆ. ಆಗಲೂ ಜನತೆ ಎಚ್ಚೆತ್ತುಕೊಳ್ಳದೆ ಗುಂಪು ಗುಂಪಾಗಿ ಕಾಣಿಸಿಕೊಂಡರೆ ದಂಡ ವಿಧಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಐಎಲ್ಐ ಮತ್ತು ಸ್ಯಾರಿ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಅಂಗಡಿ-ಮುಂಗಟ್ಟುಗಳನ್ನು ಸಂಜೆ 6 ಗಂಟೆ ನಂತರ ಸದ್ಯದ ಮಟ್ಟಿಗೆ ಬಂದ್ ಮಾಡುವ ತೀರ್ಮಾನಕ್ಕೆ ಬರಲಾಗಿದೆ. ಶುಕ್ರವಾರದಿಂದ ಮೈಸೂರು ಜಿಲ್ಲೆಯಲ್ಲಿ ಈ ಆದೇಶ ಅನುಷ್ಠಾನಕ್ಕೆ ಬರಲಿದೆ ಎಂದು ಹೇಳಿದ್ದಾರೆ.

ಎಪಿಎಂಸಿಯಲ್ಲಿ ವ್ಯವಹಾರ ಮಾಡುವವರಿಗೆ ಹಾಗೂ ತರಕಾರಿ ಮಾರಾಟ ಮಾಡುವವರಿಗೆ ಕಡ್ಡಾಯವಾಗಿ ಸ್ಕ್ರೀನಿಂಗ್ ಮಾಡಿಸಲಾಗುತ್ತದೆ. ಕಾರಣ ಅಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಒಂದೆಡೆ ಸೇರುವುದರಿಂದ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಪೊಲೀಸ್ ಇಲಾಖೆಯಲ್ಲಿ 55 ವರ್ಷ ಮೇಲ್ಪಟ್ಟವರ ಮೇಲೆ ಅದರಲ್ಲೂ ಅವರ ಆರೋಗ್ಯದ ಸ್ಥಿತಿ ನೋಡಿಕೊಂಡು ಹೆಚ್ಚಿನ ಆದ್ಯತೆ ಮಾಡಿ ಅವರನ್ನು ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆಗೊಳಪಡಿಸುವ ತೀರ್ಮಾನಕ್ಕೆ ಬರಲಾಗಿದೆ ಎಂದು ಸಚಿವರು ತಿಳಿಸಿದರು. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Video: 'ಕಾಂತಾರ' ಕೆಂಗಣ್ಣಿಗೆ ಗುರಿ, ಬಾಲಿವುಡ್​ನಿಂದ ಬ್ಯಾನ್; ಚಾಮುಂಡೇಶ್ವರಿಗೆ ತಲೆಬಾಗಿ ಕ್ಷಮೆಯಾಚಿಸಿದ ರಣವೀರ್ ಸಿಂಗ್!

IPL 2026: RCB vs GT ನಡುವಿನ ಕ್ವಾಲಿಫೈಯರ್ ಪಂದ್ಯಕ್ಕೆ ಮಳೆ ಆತಂಕ, ರಿಸರ್ವ್ ಡೇ ಕೂಡ ಇಲ್ಲ.. ಪಂದ್ಯ ರದ್ದಾದರೆ ಯಾರು ಫೈನಲ್ ಗೆ?

ಚೀನಾ ಏಕಪಕ್ಷೀಯ ನೀತಿಗೆ ಬ್ರೇಕ್‌: Quad ಸಭೆ ನಡುವೆ ಮಹತ್ವದ ಖನಿಜ ಒಪ್ಪಂದಕ್ಕೆ ಭಾರತ-ಅಮೆರಿಕಾ ಸಹಿ..!

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು Quad ಮಹತ್ವದ ತೀರ್ಮಾನ; ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

SCROLL FOR NEXT