ರಾಜ್ಯ

ಗುಂಡ್ಲುಪೇಟೆ: ಕ್ಷುಲ್ಲಕ ಕಾರಣಕ್ಕೆ ಪ್ರಾರಂಭವಾದ ಜಗಳ ಕೊಲೆಯಲ್ಲಿ ಅಂತ್ಯ. 

ಜಮೀನಿಗೆ ಪೈಪ್ ನೀಡಿದ ವಿಚಾರವಾಗಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ತಾಲೂಕಿನ ಶಿವಪುರ ಗ್ರಾಮದಲ್ಲಿ ನಡೆದಿದೆ.

ಗುಂಡ್ಲುಪೇಟೆ: ಜಮೀನಿಗೆ ಪೈಪ್ ನೀಡಿದ ವಿಚಾರವಾಗಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ತಾಲೂಕಿನ ಶಿವಪುರ ಗ್ರಾಮದಲ್ಲಿ ನಡೆದಿದೆ.

ಇದೇ ಗ್ರಾಮದ ಮಾದೇಶ ಕೊಲೆಗೀಡಾಗಿರುವ ವ್ಯಕ್ತಿ. ಈತನನ್ನು ರಾಜು ಎಂಬಾತ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ. 

ಮಾದೇಶನಿಗೆ ಬೆಳೆಗೆ ನೀರು ಹಾಯಿಸಲು ಸ್ಪ್ರಿಂಕ್ಲರ್ ಪೈಪ್​​ಗಳನ್ನು ರಾಜು ನೀಡಿದ್ದ, ತಿಂಗಳು ಕಳೆದರೂ ಮಾದೇಶ ವಾಪಸ್ ನೀಡಿರಲಿಲ್ಲ. ಈ ವಿಚಾರವಾಗಿ ಇಬ್ಬರ ನಡುವೆ ಗಲಾಟೆಯಾಗಿದೆ. ಕುಪಿತಗೊಂಡ ರಾಜು ತನ್ನಲ್ಲಿದ್ದ ಮಚ್ಚಿನಿಂದ ಹೊಡೆದು ಮಾದೇಶನನ್ನು ಕೊಲೆ ಮಾಡಿದ್ದಾನೆ.ಮಂಗಳವಾರ ಮಧ್ಯ ರಾತ್ರಿಯೇ ಕೊಲೆಯಾಗಿದೆ. ಬೆಳಗ್ಗೆ 10ರ ಸಮಯದಲ್ಲಿ ರಾಜು ಪೊಲೀಸ್​ ಠಾಣೆಗೆ ಬಂದು ಶರಣಾದಾಗ ವಿಷಯ ಬೆಳಕಿಗೆ ಬಂದಿದೆ. 

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ವರದಿ: ಗುಳಿಪುರ ನಂದೀಶ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT