ಡಾ.ಸುಧಾಕರ್ 
ರಾಜ್ಯ

'ದೇಹವೆಂಬ ಗುಡಿಗೆ ವೈದ್ಯರೇ ದೇವರು': ವೈದ್ಯರ ದಿನಾಚರಣೆ ನಿಮಿತ್ತ ಸಚಿವ ಡಾ. ಸುಧಾಕರ್ ಹಾರೈಕೆ

ದೇಹವೆಂಬ ಗುಡಿಗೆ ವೈದ್ಯರೇ ದೇವರು ಎಂದು ಹೇಳುವ ಮೂಲಕ ವೈದ್ಯರ ದಿನಾಚರಣೆ ನಿಮಿತ್ತ ಸಚಿವ ಡಾ.ಕೆ ಸುಧಾಕರ್ ಸಮಸ್ತ ವೈದ್ಯರಿಗೆ ಶುಭ ಕೋರಿದ್ದಾರೆ.

ಬೆಂಗಳುರು: ದೇಹವೆಂಬ ಗುಡಿಗೆ ವೈದ್ಯರೇ ದೇವರು ಎಂದು ಹೇಳುವ ಮೂಲಕ ವೈದ್ಯರ ದಿನಾಚರಣೆ ನಿಮಿತ್ತ ಸಚಿವ ಡಾ.ಕೆ ಸುಧಾಕರ್ ಸಮಸ್ತ ವೈದ್ಯರಿಗೆ ಶುಭ ಕೋರಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ದೇಹವೆಂಬ ಗುಡಿಗೆ ವೈದ್ಯರೇ ದೇವರು" ಎನ್ನಲಾಗುತ್ತದೆ. ಪ್ರಸ್ತುತ ಈ ಸಾಂಕ್ರಾಮಿಕದ ಸಮಯದಲ್ಲಿ ನಮ್ಮ ವೈದ್ಯರುಗಳ ಅಪಾರ ಪರಿಶ್ರಮ, ಸೇವೆ, ನಿಷ್ಟೆಗಳನ್ನು ನಾವು ಕಾಣುತ್ತಿದ್ದೇವೆ. ರೋಗಿಗಳಿಗೆ ಚಿಕಿತ್ಸೆ ನೀಡಲು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟವರು ಇವರು! ಈ ವೈದ್ಯರ ದಿನದಂದು ಎಲ್ಲ ವೈದ್ಯರಿಗೆ ಒಂದು ಹೃತ್ಪೂರ್ವಕ ಧನ್ಯವಾದ ಹೇಳೋಣ ಎಂದು ಟ್ವೀಟ್ ಮಾಡಿದ್ದಾರೆ.

ಕೆ ಸುಧಾಕರ್ ಅವರು, ಇತ್ತೀಚೆಗಷ್ಟೇ ಹೋಮ್ ಕ್ವಾರಂಟೈನ್ ಮುಕ್ತಾಯಗೊಳಿಸಿ ಕರ್ತವ್ಯಕ್ಕೆ ವಾಪಸ್ ಆಗಿದ್ದಾರೆ. ಸುಧಾಕರ್ ಅವರ ಕುಟುಂಬಸ್ಥರಿಗೆ ಕೊರೋನಾ ಸೋಂಕು ಕಂಡುಬಂದಿತ್ತು. ಹೀಗಾಗಿ ಸುಧಾಕರ್ ಅವರು ಸ್ವಯಂ ನಿರ್ಬಂಧಕ್ಕೊಳಗಾಗಿದ್ದರು. ಸತತ ಐದು ದಿನಗಳ ಬಳಿಕ ಮತ್ತೆ ಕೋವಿಡ್-19 ಟೆಸ್ಟ್ ಒಳಗಾಗಿದ್ದ ಅವರ 2 ವರದಿಗಳು ನೆಗೆಟಿವ್ ಬಂದಿತ್ತು. ಹೀಗಾಗಿ ಸುಧಾಕರ್ ಅವರು ಮತ್ತೆ ಕರ್ತವ್ಯಕ್ಕೆ ವಾಪಸ್ ಆಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT