ಸಂಗ್ರಹ ಚಿತ್ರ 
ರಾಜ್ಯ

ಕೊರೊನಾ ಭೀತಿ: ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ಸೀಲ್ ಡೌನ್

ಕೋವಿಡ್-19 ವಿರುದ್ಧ ಸಮರ ಸಾರುವ ಮೂಲಕ‌ ಕರ್ತವ್ಯ ನಿರತ ಸಿಲಿಕಾನ್ ಸಿಟಿ ಪೊಲೀಸರಿಗೆ ಕೊರೊನಾ ವೈರಸ್ ಬೆಂಬಿಡದೇ ಕಾಡುತ್ತಿದೆ.

ಬೆಂಗಳೂರು: ಕೋವಿಡ್-19 ವಿರುದ್ಧ ಸಮರ ಸಾರುವ ಮೂಲಕ‌ ಕರ್ತವ್ಯ ನಿರತ ಸಿಲಿಕಾನ್ ಸಿಟಿ ಪೊಲೀಸರಿಗೆ ಕೊರೊನಾ ವೈರಸ್ ಬೆಂಬಿಡದೇ ಕಾಡುತ್ತಿದೆ.

ನಗರದ ಪಶ್ಚಿಮ ವಿಭಾಗದ ಮತ್ತೊಂದು ಪೊಲೀಸ್ ಠಾಣೆಗೆ ಕೊರೊನಾ ವಕ್ಕರಿಸಿದ್ದು, ಇಂದು ಸೀಲ್​ಡೌನ್ ಆಗಲಿದೆ.

ಕೊರೊನಾ ಭೀತಿಯಿಂದ ಇಂದು ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆ ಸೀಲ್‌ಡೌನ್ ಗೆ ಒಳಗಾಗಲಿದೆ.

ಇತ್ತೀಚೆಗೆ ಕೊಲೆ ಪ್ರಕರಣವನ್ನು ಭೇದಿಸಿದ ಪೊಲೀಸರು 9 ಆರೋಪಿಗಳನ್ನು ಬಂಧಿಸಿದ್ದರು. ನಂತರ ಎಲ್ಲಾ ಆರೋಪಿಗಳನ್ನು ಕೋವಿಡ್-19 ಪರೀಕ್ಷೆ ಒಳಪಡಿಸಲಾಗಿತ್ತು. ಇದೀಗ ಈ ಪೈಕಿ ಮೂವರು ಆರೋಪಿಗಳಿಗೆ ಕೊರೊನಾ ಸೋಂಕು ಇರುವುದು ವೈದ್ಯಕೀಯ ಪರೀಕ್ಷೆ ಯಿಂದ ದೃಢಪಟ್ಟಿದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಆರೋಪಿಗಳ ಸಂಪರ್ಕದಲ್ಲಿದ್ದ ಪೊಲೀಸರಿಗೆ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. 

ಈಗಾಗಲೇ ಸಿಲಿಕಾನ್ ಸಿಟಿಯ ಪಶ್ಚಿಮ ವಿಭಾಗದಲ್ಲಿ ಡಿಸಿಪಿ ಕಚೇರಿ, ಚಿಕ್ಕಪೇಟೆ ಎಸಿಪಿ ಕಚೇರಿ, ಉಪ್ಪಾರಪೇಟೆ, ಜೆ.ಜೆ.ನಗರ, ಕಾಮಾಕ್ಷಿಪಾಳ್ಯ, ಕೆ.ಪಿ.ಅಗ್ರಹಾರ, ಕೆಂಗೇರಿ, ಸಿಟಿ ಮಾರ್ಕೆಟ್, ಕಲಾಸಿಪಾಳ್ಯ, ಚಾಮರಾಜಪೇಟೆ ಠಾಣೆ ಸೇರಿ 10 ಠಾಣೆಗಳು ಈಗಾಗಲೇ ಸೀಲ್‌ಡೌನ್ ಆಗಿವೆ. 

ಇಂದು ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆ‌ಯನ್ನು ಸೀಲ್‌ಡೌನ್ ಮಾಡಲಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT