ಮೃತದೇಹವನ್ನು ನೆಲದಲ್ಲಿ ಎಳೆದೊಯ್ಯುತ್ತಿರುವ ಸಿಬ್ಬಂದಿಗಳು 
ರಾಜ್ಯ

ಕೊರೋನಾ ಎಫೆಕ್ಟ್: ರಾಜ್ಯದಲ್ಲಿ ಮುಂದುವರೆದ ಅಮಾನವೀಯ ಅಂತ್ಯಸಂಸ್ಕಾರ, ಶವವನ್ನು ನೆಲದಲ್ಲಿ ದರದರನೆ ಎಳೆದೊಯ್ದ ಸಿಬ್ಬಂದಿ!

ಕೊರೋನಾ ವೈರಸ್ ವ್ಯಾಪಕವಾದ ಹಿನ್ನೆಲೆಯಲ್ಲಿ ಬಲಿಯಾದವರ ಮೃತದೇಹಗಳನ್ನು ವಿದೇಶಗಳಲ್ಲಿ ಬೇಕಾಬಿಟ್ಟು ಹೇಯವಾಗಿ ಸಂಸ್ಕಾರ ಮಾಡಿದ ಘಟನೆಗಳು ಬೇಕಾದಷ್ಟು ನಡೆದಿವೆ. ಆದರೆ, ಅಂತಹದ್ದೇ ಅಮಾನವೀಯ ಘಟನೆಗಳು ಕರ್ನಾಟಕದಲ್ಲೂ ಬೆಳಕಿಗೆ ಬರುತ್ತಿದ್ದು, ನಾಗರೀಕರು ಬೆಚ್ಚಿ ಬೀಳುವಂತೆ ಮಾಡುತ್ತಿದೆ.

ಯಾದಗಿರಿ: ಕೊರೋನಾ ವೈರಸ್ ವ್ಯಾಪಕವಾದ ಹಿನ್ನೆಲೆಯಲ್ಲಿ ಬಲಿಯಾದವರ ಮೃತದೇಹಗಳನ್ನು ವಿದೇಶಗಳಲ್ಲಿ ಬೇಕಾಬಿಟ್ಟು ಹೇಯವಾಗಿ ಸಂಸ್ಕಾರ ಮಾಡಿದ ಘಟನೆಗಳು ಬೇಕಾದಷ್ಟು ನಡೆದಿವೆ. ಆದರೆ, ಅಂತಹದ್ದೇ ಅಮಾನವೀಯ ಘಟನೆಗಳು ಕರ್ನಾಟಕದಲ್ಲೂ ಬೆಳಕಿಗೆ ಬರುತ್ತಿದ್ದು, ನಾಗರೀಕರು ಬೆಚ್ಚಿ ಬೀಳುವಂತೆ ಮಾಡುತ್ತಿದೆ. 

ಬಳ್ಳಾರಿಯ ಹೊರವಲಯದಲ್ಲಿ ತೋಡಿದ್ದ ಗುಂಡಿಗೆ ಕೋರೋನಾ ಮೃತರ 8 ಶವಗಳನ್ನು ಎಸೆದ ರೀತಿಯಲ್ಲಿಯೇ ಶವಗಳನ್ನು ನೆಲದಲ್ಲಿ ಎಳೆದುಕೊಂಡು ಬಂದು ಹಾಕಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. 

ರಾಯಚೂರು ಜಿಲ್ಲೆಯ ಸಿರವಾರದಲ್ಲಿ ಭಾನುವಾರ ಮಗಳ ಮದುವೆ ಮುಗಿಸಿದ ಬಳಿಕ ಸೋಮವಾರ ರಾಯಚೂರಿ ರಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟ ಕೊರೋನಾ ಸೋಂಕಿತನ ಶವವನ್ನು ಯಾದಗಿರಿ ಜಿಲ್ಲೆಯ ಹೋನಗೆರಾ ತಾಲೂಕಿನ ವ್ಯಕ್ತಿಯ ಮೃತದೇಹವನ್ನು ಮಂಗಳವಾರ ಜಮೀನೊಂದರಲ್ಲಿ ಅಂತ್ಯಸಂಸ್ಕಾರ ಮಾಡಿದ ರೀತಿ ಚರ್ಚೆಗೆ ಗ್ರಾಸವಾಗಿದೆ. 

ಆ್ಯಂಬುಲೆನ್ಸ್ ನಿಂದ ಕೆಳಗಿಳಿಸಲ್ಪಟ್ಟ ಶವವನ್ನು ಪಿಪಿಇ ಕಿಟ್ ಧರಿಸಿದ್ದ ಇಲಾಖೆಯ ಸಿಬ್ಬಂದಿ ಗುಂಡಿಯವರೆಗೆ ನೆಲದಲ್ಲೇ ಎಳೆದುಕೊಂಡು ಸುರಿದಿದ್ದಾರೆ. ಅಂತ್ಯಸಂಸ್ಕಾರದ ವೇಳೆ, ಮೃತನ ಕಿರಿಯ ಸಹೋದರನನ್ನು ಹೊರತುಪಡಿಸಿದರೆ, ಉಳಿದ ಸಂಬಂಧಿಕರು ಯಾರೂ ಉಪಸ್ಥಿತರಿರಲಿಲ್ಲ. ಆದರೆ, ಪಶುಗಳಿಗಿಂತಲೂ ಕೀಳಾಗಿ ಮೃತಪಟ್ಟ ಸೋಂಕಿತನ ಅಂತ್ಯಕ್ರಿಯೆ ನಡೆಸಿದ ಪರಿ ಇಲ್ಲಿನ ಜನರನ್ನು ಆತಂಕಕ್ಕೀಡಾಗುವಂತೆ ಮಾಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?