ವೈದ್ಯರ ತಂಡ 
ರಾಜ್ಯ

ಕೊರೋನಾ ಸೋಂಕಿತ ಗರ್ಭಿಣಿಗೆ ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರ ಚಿಕಿತ್ಸೆ

ಕೊರೋನಾ ಸೋಂಕಿತ ಗರ್ಭಿಣಿಗೆ ಮಂಡ್ಯದ ಜಿಲ್ಲಾಸ್ಪತ್ರೆಯಲ್ಲಿ  ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆಯನ್ನು ನಡೆಸಲಾಗಿದೆ.ಡಾ. ಯೋಗೇಂದ್ರ ಕುಮಾರ್ ನೇತೃತ್ವದ ವೈದ್ಯರ ತಂಡ ಕೊರೋನಾ ವೈರಸ್ ಸೋಂಕಿತ ಮಳವಳ್ಳಿಮೂಲದ ಗರ್ಭಿಣಿ ಮಹಿಳೆಗೆ ಶಸ್ತ್ರಚಿಕಿತ್ಸೆಯನ್ನು ನಡೆಸಿ ಯಶಸ್ವಿಯಾಗಿ ಮಗುವನ್ನು ಹೊರತೆಗೆಯಲಾಗಿದೆ. 

ಮಂಡ್ಯ: ಕೊರೋನಾ ಸೋಂಕಿತ ಗರ್ಭಿಣಿಗೆ ಮಂಡ್ಯದ ಜಿಲ್ಲಾಸ್ಪತ್ರೆಯಲ್ಲಿ  ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆಯನ್ನು ನಡೆಸಲಾಗಿದೆ.
ಡಾ.ಯೋಗೇಂದ್ರ ಕುಮಾರ್ ನೇತೃತ್ವದ ವೈದ್ಯರ ತಂಡ ಕೊರೋನಾ ವೈರಸ್ ಸೋಂಕಿತ ಮಳವಳ್ಳಿ ಮೂಲದ ಗರ್ಭಿಣಿಗೆ  ಶಸ್ತ್ರಚಿಕಿತ್ಸೆಯನ್ನು ನಡೆಸಿ ಯಶಸ್ವಿಯಾಗಿ ಮಗುವನ್ನು ಹೊರತೆಗೆಯಲಾಗಿದೆ.

 ಈಗ ಮಗುವಿನ ಆರೋಗ್ಯ ಚೆನ್ನಾಗಿದೆ. ಇನ್ನೆರಡು ದಿನದಲ್ಲಿ ಮಗುವಿಗೆ ಕೂಡ ಕೋವಿಡ್ ಪರೀಕ್ಷೆ ನಡೆಸಲಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.ಈಗಾಗಲೇ ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಸುಮಾರು ೪೦೦ಕ್ಕೂ ಅಧಿಕ ಕೋವಿಡ್ ಸೋಂಕಿತರಿದ್ದು, ಅದರಲ್ಲಿ ಗರ್ಭಿಣಿ ಮಹಿಳೆಗೆ ಸೋಂಕು ತಗುಲಿರುವುದು ಮೊದಲ ಪ್ರಕರಣವಾಗಿತ್ತು. 

ಇದರಿಂದ ವೈದ್ಯರಲ್ಲಿ ಸಹಜವಾಗಿ ಆತಂಕ ಮೂಡಿತ್ತು. ಆದರೆ ಇದೀಗ ಇದೀಗ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಗಿದ್ದು, ವೈದ್ಯರ ಕಾರ್ಯಕ್ಕೆ ವ್ಯಾಪಕವಾಗಿ ಮೆಚ್ಚುಗೆ ವ್ಯಕ್ತವಾಗಿದೆ.ಶಸ್ತ್ರ ಚಿಕಿತ್ಸೆ ಯಶ್ವಸಿ ಬಳಿಕ ವೈದ್ಯರು ಮತ್ತು ಮಗುವಿನ ಕುಟುಂಬಸ್ಥರ ಮುಖದಲ್ಲಿ ಮಂದಹಾಸ ಮೂಡಿತ್ತು.

ವರದಿ: ನಾಗಯ್ಯ
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT