ಗೋವಿಂದ ಕಾರಜೋಳ ನೇತೃತ್ವದಲ್ಲಿನ ಸಭೆಯ ಚಿತ್ರ 
ರಾಜ್ಯ

ಬೆಂಗಳೂರು ಸುತ್ತಮುತ್ತ  2095 ಕೋಟಿ ರೂ. ವೆಚ್ಚದ  155 ಕಿ.ಮೀ.ರಸ್ತೆ ನಿರ್ಮಾಣ- ಗೋವಿಂದ ಕಾರಜೋಳ

ಬೆಂಗಳೂರಿನಲ್ಲಿ ವಾಹನಗಳ ದಟ್ಟಣೆಯನ್ನು ಕಡಿಮೆ ಮಾಡಿ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಬೆಂಗಳೂರು ಸುತ್ತಮುತ್ತ 2095 ಕೋಟಿ ರೂ. ವೆಚ್ಚದಲ್ಲಿ 155 ಕಿ.ಮೀ. ಉದ್ದದ 4 ರಸ್ತೆಗಳನ್ನು 10 ಪ್ಯಾಕೇಜ್‍ಗಳಲ್ಲಿ  ನಿರ್ಮಿಸಲಾಗುವುದು ಎಂದು ಉಪಮುಖ್ಯಮಂತ್ರಿ  ಗೋವಿಂದ ಎಂ ಕಾರಜೋಳ ಹೇಳಿದ್ದಾರೆ.

ಬೆಂಗಳೂರು: ಬೆಂಗಳೂರಿನಲ್ಲಿ ವಾಹನಗಳ ದಟ್ಟಣೆಯನ್ನು ಕಡಿಮೆ ಮಾಡಿ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಬೆಂಗಳೂರು ಸುತ್ತಮುತ್ತ 2095 ಕೋಟಿ ರೂ. ವೆಚ್ಚದಲ್ಲಿ 155 ಕಿ.ಮೀ. ಉದ್ದದ 4 ರಸ್ತೆಗಳನ್ನು 10 ಪ್ಯಾಕೇಜ್‍ಗಳಲ್ಲಿ ನಿರ್ಮಿಸಲಾಗುವುದು ಎಂದು ಲೋಕೋಪಯೋಗಿ ಸಚಿವರು ಆಗಿರುವ ಉಪಮುಖ್ಯಮಂತ್ರಿ  ಗೋವಿಂದ ಎಂ ಕಾರಜೋಳ ಹೇಳಿದ್ದಾರೆ.

ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ 132ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆವಹಿಸಿ ಅವರು, ಮಾತನಾಡಿದ ಅವರು, ಬೆಂಗಳೂರಿನಲ್ಲಿ ಟ್ರಾಫಿಕ್ ಕಡಿಮೆ ಮಾಡಲು ಬೆಂಗಳೂರು ಸುತ್ತಮುತ್ತ ಕೈಗೊಳ್ಳುತ್ತಿರುವ ಕಾಮಗಾರಿಗಳನ್ನು ನಿಗಧಿತ ಅವಧಿಯೊಳಗೆ ಗುಣಮಟ್ಟದೊಂದಿಗೆ ಪೂರ್ಣಗೊಳಿಸಬೇಕು. ಹೊರವರ್ತುಲದಲ್ಲಿ ನಿರ್ಮಿಸುತ್ತಿರುವ ರಸ್ತೆಗಳ ಮೂಲಕ ವಾಹನಗಳು ಸಂಚರಿಸಲು ಅನುಕೂಲವಾಗುತ್ತದೆ ಎಂದು ಅವರು ತಿಳಿಸಿದರು.

ಕೆಆರ್ ಡಿಸಿಎಲ್  ಮೂಲಕ ರಾಜ್ಯದಲ್ಲಿ 639 ಕೋಟಿ ರೂ.ವೆಚ್ಚದಲ್ಲಿ  42 ಬೃಹತ್ ಸೇತುವೆಗಳನ್ನು ನಿರ್ಮಿಸಲಾಗುತ್ತಿದ್ದು, ಕಾಮಗಾರಿಯು ಪ್ರಗತಿಯ ಹಂತದಲ್ಲಿದೆ.   869 ಕೋಟಿ ರೂ. ವೆಚ್ಚದಲ್ಲಿ  175 ಕಿರುಸೇತುವೆಗಳನ್ನು ನಿರ್ಮಿಸಲಾಗುತ್ತಿದ್ದು, ಈಗಾಗಲೇ 94 ಕಿರು ಸೇತುವೆಗಳ ನಿರ್ಮಾಣ ಕಾಮಗಾರಿಯು ಪೂರ್ಣಗೊಂಡಿದೆ. 137 ಕೋಟಿ ರೂ. ವೆಚ್ಚದಲ್ಲಿ 20.11 ಕೀ.ಮೀ ಉದ್ದದ ಹೊಸಕೋಟೆ- ಬೂದಿಗೆರೆ ಕ್ರಾಸ್ ರಸ್ತೆ ಬೂದಿಗೆರೆ ರಸ್ತೆಯನ್ನು  ಸಿಂಗಹಳ್ಳಿ, ಮೈಲಹಳ್ಳಿ ಮಾರ್ಗವಾಗಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನನಿಲ್ದಾಣದವರೆಗೆ ನಿರ್ಮಿಸಲಾಗುತ್ತಿದ್ದು, ಈಗಾಗಲೇ  3.5 ಕಿ.ಮೀ. ರಸ್ತೆ ಕಾಮಗಾರಿ ಮತ್ತು 12 ಬಾಕ್ಸ್ ಕಲ್ವರ್ಪ್ ಕಾಮಗಾರಿಯು ಪೂರ್ಣಗೊಂಡಿದೆ ಎಂದು ಹೇಳಿದರು.

155.69 ಕೋಟಿ ರೂ.ವೆಚ್ಚದಲ್ಲಿ 15.25 ಕಿ.ಮೀ. ಉದ್ದದ  ನೆಲಮಂಗಲ- ಮಧುರೆ ರಸ್ತೆ ಕಾಮಗಾರಿಯು ಪ್ರಗತಿಯಲ್ಲಿದೆ. 169.81 ಕೋಟಿ ರೂ.ವೆಚ್ಚದಲ್ಲಿ 23.99 ಕಿ.ಮೀ ಉದ್ದದ ಮಧುರೆ-ದೇವನಹಳ್ಳಿ ರಸ್ತೆ, 135 ಕೋಟಿ. ರೂ. ವೆಚ್ಚದ 33 ಕಿ.ಮೀ ಉದ್ದದ ಬಿಡದಿ-ಜಿಗಣಿ ರಸ್ತೆ, 129 ಕೋಟಿ ರೂ. ವೆಚ್ಚದ 22 ಕಿ.ಮೀ ಉದ್ದದ ಬನ್ನೇರುಘಟ್ಟ- ಆನೇಕಲ್ ರಸ್ತೆ, 1 ರೈಲ್ವೆ ಮೇಲ್ಸೇತುವೆ  ನಿರ್ಮಾಣ ಕಾಮಗಾರಿ, 1 ಗ್ರೇಡ್ ಸಪರೇಟರ್ ಕಾಮಾಗಾರಿ, 182.23 ಕೋಟಿ ರೂ. ವೆಚ್ಚದ 39 ಕಿ.ಮೀ ಉದ್ದದ  ಆನೇಕಲ್- ಹೊಸಕೋಟೆ ರಸ್ತೆ ನಿರ್ಮಾಣ ಕಾಮಗಾರಿಯು ಪ್ರಗತಿಯಲ್ಲಿದೆ ಎಂದು ಅವರು ತಿಳಿಸಿದರು.

ರಾಜನಕುಂಟೆ, ನಾರಾಯಣಪುರ, ಗೊಲ್ಲಹಳ್ಳಿ ರೈಲ್ವೆ ಕ್ರಾಸಿಂಗ್‍ನಲ್ಲಿ ರೈಲ್ವೆ ಮೇಲ್ಸೇತುವೆ, ಬಸವನಹಳ್ಳಿ ರೈಲ್ವೆ ಕ್ರಾಸಿಂಗ್ ಬಳಿ ರೈಲ್ವೆ ಕೆಳಸೇತುವೆ (ಆರ್ ಯು ಬಿ) ನಿರ್ಮಾಣ ಕಾಮಗಾರಿಯನ್ನು ರೈಲ್ವೆ ಇಲಾಖೆಯ ಸಹಮತಿ ಬಂದ ಕೂಡಲೇ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು.  ವರ್ತೂರು ಗ್ರಾಮದಲ್ಲಿ ಎಲೆವೇಟೆಡ್ ಕಾರಿಡಾರ್ ನಿರ್ಮಾಣ, ಟ್ಯಾಲಿ ಜಂಕ್ಷನ್, ದೊಮ್ಮಸಂದ್ರ ಜಂಕ್ಷನ್ ಮತ್ತು ವರ್ತೂರು ಕೋಡಿ ಜಂಕ್ಷನ್ ಬಳಿ ಗ್ರೇಡ್ ಸಪರೇಟರ್ ಹಾಗೂ ಕಾಡುಗೋಡಿ ಬಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು. ರೈಲ್ವೆ ಇಲಾಖೆಯೊಂದಿಗೆ ಸಂಪರ್ಕದಲ್ಲಿದ್ದು,ತ್ವರಿತವಾಗಿ ಸಹಮತಿ ಪತ್ರ ಪಡೆಯಬೇಕು.ಎಲ್ಲಾ ಕಾಮಗಾರಿಗಳನ್ನು ನಿಗಧಿತ ಅವಧಿಯೊಳಗೆ ಗುಣಮಟ್ಟದೊಂದಿಗೆ ಪೂರ್ಣಗೊಳಿಸಬೇಕು ಎಂದು ಅವರು ಸೂಚಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT