ಕರ್ನಾಟಕ ಹೈ ಕೋರ್ಟ್ 
ರಾಜ್ಯ

ಅವಧಿ ಮುಗಿದ ಗ್ರಾಮ ಪಂಚಾಯತ್ ಗಳಿಗೆ ಆಡಳಿತಾಧಿಕಾರಿ ನೇಮಕ ಆದೇಶ ಎತ್ತಿ ಹಿಡಿದ ಹೈಕೋರ್ಟ್

ರಾಜ್ಯದಲ್ಲಿ ಚುನಾಯಿತ ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸುವ ಸರ್ಕಾರದ ನಿರ್ಧಾರವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

ಬೆಂಗಳೂರು: ರಾಜ್ಯದಲ್ಲಿ ಚುನಾಯಿತ ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸುವ ಸರ್ಕಾರದ ನಿರ್ಧಾರವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

ಐದು ವರ್ಷಗಳ ಅವಧಿ ಪೂರೈಸಿರುವ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಿರುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಚಳ್ಳಕೆರೆ ತಾಲ್ಲೂಕು ಸೋಮಗುದ್ದಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ.ಎಲ್.ಸತೀಶ್ ಬಾಬು ಸೇರಿದಂತೆ ಒಟ್ಟು 16 ಜನ ಅರ್ಜಿ ಸಲ್ಲಿಸಿದ್ದರು. 

ಆದರೆ ಈ ಅರ್ಜಿಯ ಮನವಿಯನ್ನು ಪರಿಗಣಿಸಲು ನಿರಾಕರಿಸಿರುವ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆಯ ಕಲಂ 8ರ ಅನುಸಾರ ಹಲವು ಪಂಚಾಯಿತಿಗಳ ಅವಧಿ‌ ಈಗಾಗಲೇ ಮುಗಿದಿದೆ. ಕಾಯ್ದೆ ಅನುಸಾರ ಒಂದು ಬಾರಿ ಆಡಳಿತಾಧಿಕಾರಿ ನೇಮಕವಾದರೆ ಅವರು ಚುನಾಯಿತ ಪ್ರತಿನಿಧಿಗಳಿಗೆ ಸಮಾನ ಎಂದು ಸ್ಪಷ್ಟನೆ ನೀಡಿದೆ. ಅಂತೆಯೇ ಪಂಚಾಯಿತಿಗೆ ಚುನಾಯಿತರಾದವರ ಅವಧಿ 5 ವರ್ಷಗಳ ಅವಧಿ ಮುಗಿದ ನಂತರವೂ ಅವರನ್ನು ಮುಂದುವರಿಸುವಂತೆ ಆದೇಶ ನೀಡಲು ಸಾಧರ್ಯವಿಲ್ಲ. ಇದಕ್ಕೆ ಸಂವಿಧಾನದ 243-ಇ ವಿಧಿಯಡಿ ಅವಕಾಶವಿಲ್ಲ ಎಂದು ನ್ಯಾಯಪೀಠ ತೀರ್ಪಿನಲ್ಲಿ ತಿಳಿಸಿದೆ. 

ಕೋವಿಡ್-19 ಇರುವ ಕಾರಣ ಜನಸಾಮಾನ್ಯರ ಆಶೋತ್ತರಗಳಿಗೆ ಸ್ಪಂದಿಸಲು ಆಡಳಿತಾಧಿಕಾರಿಗಳಿಗೆ ಸಾಧ್ಯವಾಗುವುದಿಲ್ಲ. ಹಾಗಾಗಿ ಮುಂದಿನ ಚುನಾಯಿತ ಪ್ರತಿನಿಧಿಗಳ ಆಯ್ಕೆ ಆಗುವತನಕ ಪ್ರಸ್ತುತ ಸದಸ್ಯರನ್ನೇ ಮುಂದುವರಿಸಬೇಕು ಎಂಬ ಅರ್ಜಿದಾರರ ವಾದವನ್ನು ಪರಿಗಣಿಸಲು ನ್ಯಾಯಪೀಠ ನಿರಾಕರಿಸಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ-1993ರ ಪ್ರಕರಣ 41 ಮತ್ತು 42ರಂತೆ ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸಲು ಕ್ರಮ ಕೈಗೊಳ್ಳುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸೂಚನೆ ನೀಡಿತ್ತು. 

ರಾಜ್ಯದ ಬಹುತೇಕ ಗ್ರಾಮ ಪಂಚಾಯಿತಿಗಳ 5 ವರ್ಷದ ಅವಧಿ 2020ರ ಜೂನ್ ನಿಂದ ಪ್ರಾರಂಭವಾಗಿ ವಿವಿಧ ದಿನಾಂಕಗಳಂದು ಪೂರ್ಣಗೊಳ್ಳಲಿದೆ. ಕೋವಿಡ್ ಹಿನ್ನೆಲೆಯಲ್ಲಿ ಗ್ರಾಮ‌ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆಗಳು ನಡೆಯದಿಲ್ಲ. ಈ ಹಿನ್ನೆಲೆಯಲ್ಲಿ ಅವಧಿ ಮುಗಿದ ಪಂಚಾಯ್ತಿಗಳಿಗೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 8(l)(ಬಿ) (ii) ಅಡಿಯಲ್ಲಿ ಕಲಂ 321ರ ಅನುಸಾರ ಆಡಳಿತಾಧಿಕಾರಿಗಳನ್ನು ನೇಮಿಸಲು ಸರ್ಕಾರ ನಿರ್ಧರಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ನೀರು ಹಂಚಿಕೆ: ತಮಿಳುನಾಡು ಅರ್ಜಿಯನ್ನು ಸುಪ್ರೀಂನಲ್ಲಿ ಪ್ರಶ್ನಿಸಲು ಅಧಿಕಾರಿಗಳಿಗೆ ಸಚಿವ ರಾಮಲಿಂಗಾ ರೆಡ್ಡಿ ನಿರ್ದೇಶನ

ಹೈಕೋರ್ಟ್‌ನಿಂದ ಜೀವಾವಧಿ ಶಿಕ್ಷೆಗೆ ತಡೆ: ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅನರ್ಹತೆ ರದ್ದು!

ಸಂಪುಟ ವಿಸ್ತರಣೆಯಲ್ಲಿ ಬಿಗ್ ಟ್ವಿಸ್ಟ್: ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 19 ಶಾಸಕರು; ಕೊನೆ ಕ್ಷಣದಲ್ಲಿ ಒಬ್ಬರಿಗೆ ಕೊಕ್!

ಭಾವೋದ್ವೇಗಕ್ಕೆ ಒಳಗಾಗಿ ರಾಜೀನಾಮೆ ನೀಡಬೇಡಿ: ಪಕ್ಷ ನಿಮ್ಮ ಸೇವೆ ಮರೆಯಲ್ಲ; ಅಸಮಾಧಾನಿತ ಶಾಸಕರಿಗೆ ಬಿ.ಕೆ ಹರಿಪ್ರಸಾದ್ ಮನವಿ

ಕಾಂಗ್ರೆಸ್‌ ಲೆಟರ್‌ಹೆಡ್‌ನಲ್ಲಿ ಸ್ಪೀಕರ್‌ ಹೆಸರು; ಮತ್ತೊಂದು ಕೆಟ್ಟ ಸಂಪ್ರದಾಯಕ್ಕೆ ನಾಂದಿ: ಸುರೇಶ್‌ ಕುಮಾರ್‌ ಕಿಡಿ