ಕೆಎಲ್ ಇ 
ರಾಜ್ಯ

ಕೆಎಲ್ ಇ ತಾಂತ್ರಿಕ ವಿವಿಯ ವಿದ್ಯಾರ್ಥಿಗಳಿಂದ ಆನ್ ಲೈನ್ ಪರೀಕ್ಷೆ ವಿರುದ್ಧ ಆಂದೋಲನ

ಕೆಎಲ್ ಇ ತಾಂತ್ರಿಕ ವಿಶ್ವವಿದ್ಯಾಲಯ ಇಂಜಿನಿಯರಿಂಗ್ ಪದವಿ(ಬಿಇ)ಯ ವಾರ್ಷಿಕ ಪರೀಕ್ಷೆಯನ್ನು ಆನ್ ಲೈನ್ ಮೂಲಕ ನಡೆಸಲು ನಿರ್ಧರಿಸಿದ್ದು, ಇದಕ್ಕೆ ವಿದ್ಯಾರ್ಥಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಆನ್ ಲೈನ್ ಪರೀಕ್ಷೆ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಆಂದೋಲನ ಆರಂಭಿಸಿದ್ದಾರೆ.

ಹುಬ್ಬಳ್ಳಿ: ಕೆಎಲ್ ಇ ತಾಂತ್ರಿಕ ವಿಶ್ವವಿದ್ಯಾಲಯ ಇಂಜಿನಿಯರಿಂಗ್ ಪದವಿ(ಬಿಇ)ಯ ವಾರ್ಷಿಕ ಪರೀಕ್ಷೆಯನ್ನು ಆನ್ ಲೈನ್ ಮೂಲಕ ನಡೆಸಲು ನಿರ್ಧರಿಸಿದ್ದು, ಇದಕ್ಕೆ ವಿದ್ಯಾರ್ಥಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಆನ್ ಲೈನ್ ಪರೀಕ್ಷೆ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಆಂದೋಲನ ಆರಂಭಿಸಿದ್ದಾರೆ.

ಕೊರೋನಾ ವೈರಸ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಇಂಜಿನಿಯರಿಂಗ ವಾರ್ಷಿಕ ಪರೀಕ್ಷೆ ನಡೆಸಿಲ್ಲ. ಹೀಗಾಗಿ ಸ್ವಾಯತ್ತ ವಿವಿಯಾಗಿರುವ ಕೆಎಲ್ ಇ ಜುಲೈ 21ರಿಂದ ಆನ್ ಲೈನ್ ಪರೀಕ್ಷೆ ನಡೆಸಲು ನಿರ್ಧರಿಸಿದೆ. ಅಲ್ಲದೆ ಲ್ಯಾಪ್ ಟಾಪ್ ನೊಂದಿಗೆ ಪರೀಕ್ಷೆ ಬರೆಯಲು ಸಿದ್ಧವಾಗಿರಿ ಎಂದು ವಿದ್ಯಾರ್ಥಿಗಳಿಗೆ ಸೂಚಿಸಿದೆ. ಒಂದು ವೇಳೆ ಲ್ಯಾಪ್ ಟಾಪ್ ಗೆ ಇಂಟರ್ ನೆಟ್ ಸಂಪರ್ಕ ಕಡಿತವಾದರೆ ಅದಕ್ಕೆ ಪರ್ಯಾಯವಾಗಿ ಸ್ಮಾರ್ಟ್‌ಫೋನ್ ಅನ್ನು ಇಟ್ಟುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಸೂಚಿಸಿದೆ.

ಆನ್ ಲೈನ್ ಪರೀಕ್ಷೆಯನ್ನು ಹಲವು ವಿದ್ಯಾರ್ಥಿಗಳು ವಿರೋಧಿಸಿದ್ದು, ಟ್ವೀಟರ್ ನಲ್ಲಿ #unjustifiedKLETUexams ಎಂಬ ಹ್ಯಾಷ್ ಟ್ಯಾಗ್ ನೊಂದಿಗೆ ಆಂದೋಲನ ಆರಂಭಿಸಿದ್ದಾರೆ ಮತ್ತು ವಿವಿ ಆನ್ ಲೈನ್ ಪರೀಕ್ಷೆ ನಡೆಸುವ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಒತ್ತಾಯಿಸಿದ್ದಾರೆ.

ಕೆಲವು ವಿದ್ಯಾರ್ಥಿಗಳು ಬಡ ಕುಟುಂಬದಿಂದ ಬಂದವರಾಗಿದ್ದು, ಅವರ ಬಳಿ ಲ್ಯಾಪ್ ಟಾಪ್ ಇರುವುದಿಲ್ಲ. ಇನ್ನು ಕೆಲವರ ಬಳಿ ಸ್ಮಾರ್ಟ್ ಫೋನ್ ಸಹ ಇರುವುದಿಲ್ಲ. ಲಾಕ್ ಡೌನ್ ವೇಳೆ ತಮ್ಮ ಪೋಷಕರ ಸ್ಮಾರ್ಟ್ ಫೋನ್ ಪಡೆದು ಆನ್ ಲೈನ್ ತರಗತಿಗಳಲ್ಲಿ ಭಾಗವಹಿಸಿದ್ದಾರೆ. ಪರೀಕ್ಷೆಗೂ ಮುಂಚೆ ಕನಿಷ್ಠ ಒಂದು ತಿಂಗಳಾದರೂ ನಮಗೆ ಆಫ್ ಲೈನ್ ತರಗತಿಗಳ ಅಗತ್ಯ ಇದೆ ಎಂದು ಕೆಲವು ವಿದ್ಯಾರ್ಥಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

Street Dog attack: ಬೀದಿ ನಾಯಿ ಸಮಸ್ಯೆಗೆ ಉಪಾಯ ಕಂಡುಕೊಂಡ ಗದಗ ಜನತೆ, ಕಾಟದಿಂದ ಮುಕ್ತಿಗೆ ಬಣ್ಣ ನೀರಿನ ಪ್ರಯೋಗ..!

ನಮ್ಮವರು ಬೇರೆ ಧರ್ಮದವರ ಪ್ರಾರ್ಥನೆ ಸ್ಥಳಗಳಿಗೆ ಹೋಗುವುದಿಲ್ಲವೇ? ಯದುವೀರ್ ಬಿಜೆಪಿ ಜೊತೆ ಸೇರಿ ಇತಿಹಾಸ ಮರೆತಿದ್ದಾರೆ: DKS

SCROLL FOR NEXT