ತಂದೆ ಕಳೆದುಕೊಂಡ ದುಃಖದಲ್ಲಿ ಅನುಷಾ 
ರಾಜ್ಯ

ಅತ್ತ ತಂದೆ ಸಾವು, ಇತ್ತ ಎಸ್ಎಸ್ಎಲ್ ಸಿ ಪರೀಕ್ಷೆ; ಕಣ್ಣೀರಿನ ನಡುವೆ ಪರೀಕ್ಷೆ ಬರೆದ ದಿಟ್ಟೆ!

ಕೊರೋನಾ ಸಾಂಕ್ರಾಮಿಕ ಜನತೆಯನ್ನು ಇನ್ನಿಲ್ಲದಂತೆ ಕಾಡುತ್ತಿದ್ದು, ತನ್ನ ತಂದೆ ಮೃತಪಟ್ಟಿದ್ದರೂ ವಿದ್ಯಾರ್ಥಿನಿಯೊಬ್ಬಳು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆದ ಗದಗದಲ್ಲಿ ವರದಿಯಾಗಿದೆ.

ಗದಗ: ಕೊರೋನಾ ಸಾಂಕ್ರಾಮಿಕ ಜನತೆಯನ್ನು ಇನ್ನಿಲ್ಲದಂತೆ ಕಾಡುತ್ತಿದ್ದು, ತನ್ನ ತಂದೆ ಮೃತಪಟ್ಟಿದ್ದರೂ ವಿದ್ಯಾರ್ಥಿನಿಯೊಬ್ಬಳು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆದ ಗದಗದಲ್ಲಿ ವರದಿಯಾಗಿದೆ.

ಅನುಷಾ ಭಜಂತ್ರಿ ಎಂಬ ವಿದ್ಯಾರ್ಥಿನಿ ಇಂದು ಪರೀಕ್ಷೆಗೆ ಹಾಜರಾಗಿದ್ದು, ನಿನ್ನೆ ಅವರ ತಂದೆ ಸುರೇಶ್ ಕಿಡ್ನಿ ಸಮಸ್ಯೆಯಿಂದಾಗಿ ಸಾವನ್ನಪ್ಪಿದ್ದಾರೆ. ಇಂದು ಅನುಷಾ ಅವರ ತಂದೆಯ ಅಂತ್ಯ ಸಂಸ್ಕಾರ ನಡೆಯಲಿದ್ದು, ಇದರ ನಡುವೆಯೇ ಅನುಷಾ ಎಸ್ಎಸ್ಎಲ್ ಸಿ ಪರೀಕ್ಷೆ ಬರೆದಿದ್ದಾರೆ.

ವೃತ್ತಿಯಲ್ಲಿ ಶಿಕ್ಷಕರಾಗಿದ್ದ ಸುರೇಶ್ ಅವರು ತಮ್ಮ ಮಗಳ ಓದಿನ ಕುರಿತು ಸಾಕಷ್ಟು ಕನಸು ಕಂಡಿದ್ದರಂತೆ. ಇದೇ ಕಾರಣಕ್ಕೆ ಅನುಷಾ ಇಂದು ತಪ್ಪದೇ ಪರೀಕ್ಷೆಗೆ ಹಾಜರಾಗಿದ್ದಾರೆ. ನಗರದ ರೆಡ್ಡಿ ಕಾಲೇಜ್‍ನಲ್ಲಿನ ಪರೀಕ್ಷಾ ಕೇಂದ್ರದಲ್ಲಿ ಅನುಷಾ ಪರೀಕ್ಷೆ ಬರೆದಿದ್ದಾರೆ.

ನೀನು ಪರೀಕ್ಷೆ ಬರೆದು ಬರುವವರೆಗೂ ಅಂತ್ಯಸಂಸ್ಕಾರ ನಡೆಸಲ್ಲ ಎಂದು ಕುಟುಂಬಸ್ಥರು ಅಭಯ ನೀಡಿದ ನಂತರ ಅನುಷಾ ಪರೀಕ್ಷೆ ಬರೆಯಲು ತೆರಳಿದ್ದಾಳೆ. ಈ ವೇಳೆ ಅನುಷಾ ಓದುತ್ತಿರುವ ತೋಂಟದಾರ್ಯ ಶಾಲೆಯ ಸಿಬ್ಬಂದಿ ಹಾಗೂ ಗದಗ ಶಹರ ಬಿಇಒ ಕೆಳದಿಮಠ ಅನುಷಾಗೆ ಮಾನಸಿಕ ಸ್ಥೈರ್ಯ ತುಂಬಿ ಪರೀಕ್ಷಾ ಕೊಠಡಿಗೆ ಕಳಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅನುಷಾ ಸಂಬಂಧಿ ಮೌನೇಷ್ ಭಜಂತ್ರಿ ಅವರು, ಸಪ್ಲಿಮೆಂಟರಿಯಲ್ಲಿ ಪರೀಕ್ಷೆ ಬರೆಯಬಹುದು ಎಂದು ಹಲವರು ಸಲಹೆ ನೀಡಿದ್ದರೂ, ಆಕೆ ನಾನು ಬರುವವರೆಗೂ ತಂದೆಯ ಅಂತ್ಯಕ್ರಿಯೆ ನಡೆಸಬಾರದು ಎಂದು ಹೇಳಿ ಪರೀಕ್ಷೆಗೆ ತೆರಳಿದ್ದಾಳೆ. ಆಕೆಯ ಮಾತಿನಂತೆ ಪರೀಕ್ಷೆ ಮುಗಿಸಿ ಬರುವವರೆಗೂ ಅಂತ್ಯಕ್ರಿಯೆಯ ವಿಧಿವಿಧಾನಗಳನ್ನು ಸ್ಥಗಿತ ಮಾಡಲಾಗಿದೆ. ಆಕೆ ಬಂದ ಬಳಿಕವೇ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT