ಪರಿಶೀಲನೆ ನಡೆಸುತ್ತಿರುವ ಪೊಲೀಸರು 
ರಾಜ್ಯ

ಬಾಗಲಕೋಟೆ: ನೀರಿಗೆ ವಿಷ ಬೆರೆಸಿ ಮಕ್ಕಳಿಗೆ ಕುಡಿಸಿದ ತಾಯಿ, ಮೂವರು ಮಕ್ಕಳ ಸಾವು, ತಾಯಿ ಸ್ಥಿತಿ ಗಂಭೀರ

ಕಳೆದ ಎರಡು ವರ್ಷಗಳ ಹಿಂದೆ ಪತಿಯನ್ನು ಕಳೆದುಕೊಂಡು ಖಿನ್ನತೆಗೆ ಒಳಗಾಗಿದ್ದ ಮಹಿಳೆಯೊಬ್ಬರು ತನ್ನ ಮೂವರು ಮಕ್ಕಳಿಗೆ ಕುಡಿಯುವ ನೀರಿನಲ್ಲಿ ವಿಷ ಬೆರೆಸಿ ಕುಡಿಸಿದ್ದು, ತಾನು ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದಲ್ಲಿ ನಡೆದಿದೆ

ಬಾಗಲಕೋಟೆ: ಕಳೆದ ಎರಡು ವರ್ಷಗಳ ಹಿಂದೆ ಪತಿಯನ್ನು ಕಳೆದುಕೊಂಡು ಖಿನ್ನತೆಗೆ ಒಳಗಾಗಿದ್ದ ಮಹಿಳೆಯೊಬ್ಬರು ತನ್ನ ಮೂವರು ಮಕ್ಕಳಿಗೆ ಕುಡಿಯುವ ನೀರಿನಲ್ಲಿ ವಿಷ ಬೆರೆಸಿ ಕುಡಿಸಿದ್ದು, ತಾನು ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದಲ್ಲಿ ನಡೆದಿದೆ. ಮಕ್ಕಳು ಮೃತಪಟ್ಟಿದ್ದು, ತಾಯಿ ಸ್ಥಿತಿ ಗಂಭೀರವಾಗಿದೆ.

ಭಾಗ್ಯಶ್ರೀ ಚಿಕ್ಕಯ್ಯ ಮಠದ(೩೨)  ಆತ್ಮಹತ್ಯೆಗೆ ಯತ್ನಿಸಿರುವ ಮಹಿಳೆ. ಶಿವಾನಿ(೧೨), ಶಿವಶಂಕರ (೧೦), ಶಿವಶ್ರೀ (೯) ಮೃತಪಟ್ಟಿರುವ ಮಕ್ಕಳು. ಭಾಗ್ಯಶ್ರೀ  ಬೆಳಗ್ಗೆ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವರು ಮನೆಗೆ ವಾಪಸ್ ಬಾರದ ಹಿನ್ನೆಲೆಯಲ್ಲಿ ಮನೆಯವರು ಅವರಿಗಾಗಿ ಹುಡುಕಾಟ ನಡೆಸಿದ್ದಾರೆ. 

ಆ ವೇಳೆ ಭಾಗ್ಯಶ್ರೀ ದೇವಸ್ಥಾನದ ಮಾರ್ಗದಲ್ಲಿ ಅಸ್ವಸ್ಥಳಾಗಿ ಬಳಲುತ್ತಿರುವುದು ಕಂಡು ಬಂದರೆ, ಮಕ್ಕಳು ಸ್ಥಳದಲ್ಲೇ ಮೃತಪಟ್ಟಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವರದಿ: ವಿಠ್ಠಲ ಅರ್ ಬಲಕುಂದಿ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT