ಬಿ ಎಸ್ ಯಡಿಯೂರಪ್ಪ 
ರಾಜ್ಯ

ಪತ್ರಕರ್ತರಿಗೆ ಕೋವಿಡ್ ವಿಮಾ ಪರಿಹಾರ: ಸಿಎಂ ಭರವಸೆ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮತ್ತು ಸಂಪಾದಕರ ಗಿಲ್ಡ್ ನ ಹರಿಪ್ರಕಾಶ್ ಕೋಣೆಮನೆ ನೇತೃತ್ವದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಪತ್ರಕರ್ತರನ್ನು ಕೋವಿಡ್-19 ವಿಮಾ ಪ್ಯಾಕೇಜ್ ನಲ್ಲಿ ಸೇರಿಸುವಂತೆ ಮನವಿ ಮಾಡಿದ್ದಾರೆ.

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮತ್ತು ಸಂಪಾದಕರ ಗಿಲ್ಡ್ ನ ಹರಿಪ್ರಕಾಶ್ ಕೋಣೆಮನೆ ನೇತೃತ್ವದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಪತ್ರಕರ್ತರನ್ನು ಕೋವಿಡ್-19 ವಿಮಾ ಪ್ಯಾಕೇಜ್ ನಲ್ಲಿ ಸೇರಿಸುವಂತೆ ಮನವಿ ಮಾಡಿದ್ದಾರೆ.

ಅಸ್ಸಾಂ ಸರ್ಕಾರ ಪತ್ರಕರ್ತರಿಗೆ 50 ಲಕ್ಷ ರೂಪಾಯಿ ಕೋವಿಡ್ ವಿಮೆ ಘೋಷಣೆ ಮಾಡಿರುವುದು ಸೇರಿದಂತೆ ಹರಿಯಾಣ, ದೆಹಲಿ, ಕೇರಳ ಸರ್ಕಾರ ತೆಗೆದುಕೊಂಡಿರುವ ತೀರ್ಮಾನಗಳನ್ನು ಸಿಎಂ ಗಮನಕ್ಕೆ ತಂದಾಗ ಅದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿ, ಈ ನಿಟ್ಟಿನಲ್ಲಿ ಪತ್ರಕರ್ತರಿಗೂ ಕೋವಿಡ್ ಸಂದರ್ಭದಲ್ಲಿ ವಿಮೆ ಪರಿಹಾರ ಜಾರಿಗೆ ತರುವಂತೆ ಸಿಎಂ ಸೂಚಿಸಿದ್ದಾರೆ.

5 ಲಕ್ಷ ರೂ ಪರಿಹಾರ:ಇತ್ತೀಚೆಗೆ ಮೃತಪಟ್ಟ ವಿಜಯ‌ ಕರ್ನಾಟಕ ಪತ್ರಿಕೆಯ ಪತ್ರಕರ್ತ ಗೌರಿಪುರ ಚಂದ್ರು (ಜಿ.ಪಿ.ಚಂದ್ರಶೇಖರ) ಮತ್ತು ಬೇಲೂರು ಪ್ರಜಾವಾಣಿ ವರದಿಗಾರ ಬಿ.ಎಂ.ರವೀಶ್ ಅವರ ಕುಟುಂಬಕ್ಕೆ ಇದೇ ಸಂದರ್ಭದಲ್ಲಿ ತಲಾ 5 ಲಕ್ಷ ರೂ ಪರಿಹಾರವನ್ನು ಸಿಎಂ ಮಂಜೂರು ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT