ತಡೆಗೋಡೆ ನಿರ್ಮಿಸುತ್ತಿರುವ ಗ್ರಾಮಸ್ಥರು 
ರಾಜ್ಯ

ಮೈಸೂರು: ಹೊರಗಿನ ಸ್ಥಳಗಳಿಗೆ ನೌಕರಿಗೆ ಹೋಗದಂತೆ ನಿವಾಸಿಗಳನ್ನು ತಡೆಯಲು ಗ್ರಾಮಸ್ಥರಿಂದ ತಡೆ ಗೋಡೆ!

ಗ್ರಾಮಗಳು ಸೇರಿದಂತೆ ದೇಶಾದ್ಯಂತ ಕೊರೋನಾ ಪ್ರಕರಣಗಳು ಮಿತಿಮೀರಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆ ಗ್ರಾಮಸ್ಥರು ತಮ್ಮ ಊರುಗಳಿಂದ ಹೊರ ಪ್ರದೇಶಗಳಿಗೆ ಕೆಲಸಕ್ಕೆ ತೆರಳುವುದನ್ನು ತಪ್ಪಿಸಲು ಗ್ರಾಮದ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿದ್ದಾರೆ.

ಮೈಸೂರು: ಗ್ರಾಮಗಳು ಸೇರಿದಂತೆ ದೇಶಾದ್ಯಂತ ಕೊರೋನಾ ಪ್ರಕರಣಗಳು ಮಿತಿಮೀರಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆ ಗ್ರಾಮಸ್ಥರು ತಮ್ಮ ಊರುಗಳಿಂದ ಹೊರ ಪ್ರದೇಶಗಳಿಗೆ ಕೆಲಸಕ್ಕೆ ತೆರಳುವುದನ್ನು ತಪ್ಪಿಸಲು ಗ್ರಾಮದ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿದ್ದಾರೆ.

ತಮ್ಮ ಗ್ರಾಮಗಳಿಂದ ಬೇರೆ ಪಟ್ಟಣ ಮತ್ತು ನಗರಗಳಿಗೆ ಕೆಲಸಕ್ಕಾಗಿ  ಹೋಗುವುದು ಮತ್ತು ಹೊರಗಿನಿಂದ ಬರುವುದನ್ನು ನಿಷೇಧಿಸಲಾಗಿದೆ. ವೈಕೆ ಮೊಳೆ, ಅಮಚವಾಡಿ, ಬಸವಾಪುರ, ಸಿದ್ದರಾಯನಪುರ ಸೇರಿದಂತೆ ಹಲವು ಗ್ರಾಮಗಳಿಂದ ಕೃಷಿ ಸಂಬಂಧಿತ ಕೆಲಸಗಳಿಗೆ ಹೋಗದಂತೆ ನಿಷೇಧ ಹೇರಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿ ಹೊರಹೋದರೆ 5 ಸಾವಿರ ರು ದಂಡ ವಿಧಿಸಲಾಗುತ್ತದೆ.

ಇದರ ಜೊತಗೆ ಹೆಚ್ಚಿನ ಸಂಖ್ಯೆಯಲ್ಲಿ ಜನ  ಸೇರುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ನಿಯಮ ಉಲ್ಲಂಘಿಸಿದವರಿಗೂ ದಂಡ ವಿಧಿಸಲಾಗುತ್ತದೆ. ಹಣ್ಣು ತರಕಾರಿಗಳನ್ನು ಅನ್ ಲೋಡ್ ಕೆಲಸಗಳನ್ನು ಮಾಡದಂತೆ ನಿಯಮ ಜಾರಿ ಮಾಡಲಾಗಿದೆ. ಪಕ್ಕದ ಗ್ರಾಮಗಳಿಂದ ಕಾರ್ಮಿಕರು ತಮ್ಮ ಊರುಗಳಿಗೆ ಬಂದು ಕೆಲಸ ಮಾಡುವುದನ್ನು ನಿಷೇಧಿಸಲಾಗಿದೆ. 

ನೂರಾರು ಜನರು ವಾಪಸ್ ತಮ್ಮ ಊರುಗಳಿಗೆ ಮರಳಿದ್ದಾರೆ, ಮತ್ತು ಕೆಲವರು ತಮ್ಮ ಸ್ವಂತ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿದ್ದಾರೆ ಏಕೆಂದರೆ ಅವರು ಆದೇಶಗಳನ್ನು ಧಿಕ್ಕರಿಸಲು ಬಯಸುವುದಿಲ್ಲ. ಕೊರೋನಾ ಈಗಾಗಲೇ ಹಲವರ ಜೀವನವನ್ನು ಕಿತ್ತು ಕೊಂಡಿದೆ. ಜೊತೆಗೆ ಜೀವಾನಧಾರಕ್ಕೂ ಕುತ್ತು ತಂದಿದೆ ಎಂದು ಸ್ಥಳೀಯರು ಅಭಿಪ್ರಾಯ ಪಟ್ಟಿದ್ದಾರೆ, ಟ್ರಾವೆಲ್ ಹಿಸ್ಟರಿ ಇಲ್ಲದವರಿಗೂ ಕೊರೋನಾ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಗ್ರಾಮದಿಂದ ಹೊರ ಹೋಗುವವರ ಮತ್ತು ಒಳಬರುವವರ ಮೇಲೆ ನಿಗಾ ಇಡುವಂತೆ ಯುವಕರಿಗೆ ಜವಾಬ್ದಾರಿ ವಹಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾದ ರೋಬೋಟ್ ನಾಯಿ ವಿವಾದ: AI Summit expoದಿಂದ ಗಾಲ್ಗೋಟಿಯಾಸ್ ವಿವಿಗೆ ಸ್ಟಾಲ್ ತೆರವುಗೊಳಿಸಲು ಸೂಚನೆ-Video

ಮುಸ್ಲಿಂರಿಗೆ ನೀಡಲಾಗಿದ್ದ ಶೇ.5 ರಷ್ಟು ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ

T20 World Cup 2026: ಸೂಪರ್ 8 ಹಂತದ ಗ್ರೂಪ್ 1ರ ವೇಳಾಪಟ್ಟಿ ಪ್ರಕಟ; ಫೆಬ್ರುವರಿ 22ರಂದು ಭಾರತ- ದಕ್ಷಿಣ ಆಫ್ರಿಕಾ ಮುಖಾಮುಖಿ!

Rajya Sabha polls: ರಾಜ್ಯಸಭೆಯ 37 ಸ್ಥಾನಗಳಿಗೆ ಮಾರ್ಚ್ 16 ರಂದು ಚುನಾವಣೆ

KRS–ಕಬಿನಿಯಲ್ಲಿ 52 ಟಿಎಂಸಿ ಅಡಿ ನೀರಿದ್ದು, ಈ ಬೇಸಿಗೆಯಲ್ಲಿ ಬೆಂಗಳೂರಿಗೆ ನೀರಿನ ಕೊರತೆ ಇಲ್ಲ: BWSSB

SCROLL FOR NEXT