ಸಾಂದರ್ಭಿಕ ಚಿತ್ರ 
ರಾಜ್ಯ

ಕೋವಿಡ್-19 ವಿರುದ್ಧ ಕರ್ನಾಟಕ ಬಿಜೆಪಿ ಮಾಡಿರುವ ಕೆಲಸಗಳೇನು? ಇಂದು ಪರಾಮರ್ಶೆ ನಡೆಸಲಿದ್ದಾರೆ ಪಿಎಂ ಮೋದಿ

ಕರ್ನಾಟಕ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಜೊತೆ ಕೆಲಸ ಮಾಡಿ ವೈರಾಣು ತಡೆಗಟ್ಟಲು ಕೇಂದ್ರ ಬಿಜೆಪಿ ಮುಂದೆ ಬಂದಿದೆ.

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಜೊತೆ ಕೆಲಸ ಮಾಡಿ ವೈರಾಣು ತಡೆಗಟ್ಟಲು ಕೇಂದ್ರ ಬಿಜೆಪಿ ಮುಂದೆ ಬಂದಿದೆ.

ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಕರ್ನಾಟಕದಲ್ಲಿನ ಕೋವಿಡ್-19 ಪರಿಸ್ಥಿತಿ ಬಗ್ಗೆ 90 ನಿಮಿಷಗಳ ಕಾಲ ವಿಡಿಯೊ ಕಾನ್ಫರೆನ್ಸ್ ಮೂಲಕ ರಾಜ್ಯದ ಬಿಜೆಪಿ ಮುಖಂಡರ ಜೊತೆ ಸಂವಾದ ನಡೆಸಲಿದ್ದಾರೆ.

ರಾಜ್ಯದ ಬಿಜೆಪಿ ಘಟಕ ಇದುವರೆಗೆ ಮಾಡಿರುವ ಕೆಲಸಗಳು, ಲಾಕ್ ಡೌನ್ ಸಮಯದಲ್ಲಿ ಪಕ್ಷ ಜನರಿಗೆ ಹೇಗೆ ಸಹಾಯ ಮಾಡಿದೆ ಎಂಬುದರ ಬಗ್ಗೆ ಪ್ರಧಾನಿ ವಿವರ ಕೇಳಲಿದ್ದಾರೆ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಮತ್ತು ಪ್ರಧಾನ ಕಾರ್ಯದರ್ಶಿ ಎನ್ ರವಿ ಕುಮಾರ್ ತಿಳಿಸಿದ್ದಾರೆ.

ಕೋವಿಡ್-19 ಬಗ್ಗೆ ಪಕ್ಷದ ಘಟಕ ರಾಜ್ಯದಲ್ಲಿ ಯಾವ ರೀತಿ ಜನರಿಗೆ ಅರಿವು ಮೂಡಿಸಿದೆ, ಮಾಸ್ಕ್ ಮತ್ತು ಔಷಧಿಗಳನ್ನು ಹೇಗೆ ವಿತರಣೆ ಮಾಡಿದೆ ಎಂದು ಮಾಹಿತಿ ಪಡೆದುಕೊಳ್ಳಲಿದ್ದಾರೆ ಎಂದು ರವಿ ಕುಮಾರ್ ತಿಳಿಸಿದರು. ಸಿಎಂ ಬಿ ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಉಪ ಮುಖ್ಯಮಂತ್ರಿಗಳು, ಕೇಂದ್ರದ ಸಚಿವರುಗಳು ಮತ್ತು ಪಕ್ಷದ ಹಿರಿಯ ನಾಯಕರು ಇಂದು ಸಂಜೆ ಪ್ರಧಾನಿಗಳ ಜೊತೆ ಸಂವಾದದಲ್ಲಿ ಭಾಗವಹಿಸಲಿದ್ದಾರೆ.

ಬಿಜೆಪಿ ರಾಜ್ಯ ಘಟಕ 49 ಲಕ್ಷ ರೇಶನ್ ಕಿಟ್ ಗಳನ್ನು ವಿತರಿಸಿದ್ದು, 1.50 ಕೋಟಿಗೂ ಅಧಿಕ ಫುಡ್ ಪ್ಯಾಕೆಟ್ ಗಳು, 1 ಕೋಟಿಗೂ ಅಧಿಕ ಮಾಸ್ಕ್, ಮೆಡಿಸಿನ್ ಗಳನ್ನು ವಿತರಿಸಿದೆ, ವಲಸೆ ಕಾರ್ಮಿಕರಿಗೆ ಸಹಾಯ ಮಾಡಿದೆ. ಕೇಂದ್ರದ ಅಭಿಯಾನಗಳನ್ನು ಮುಂದೆ ತೆಗೆದುಕೊಂಡು ಹೋಗಲು ಬಿಜೆಪಿ ಪಕ್ಷ ಮತ್ತು ಸರ್ಕಾರ ಸಮನ್ವಯದಿಂದ ಕೆಲಸ ಮಾಡುತ್ತಿದೆ ಎಂದು ರವಿ ಕುಮಾರ್ ಹೇಳಿದರು.

ಬಿಜೆಪಿ ಪಕ್ಷ ರಾಜ್ಯದಲ್ಲಿ ಕೋವಿಡ್-19 ವಿರುದ್ಧ ಮಾಡುತ್ತಿರುವ ಕೆಲಸಗಳ ಬಗ್ಗೆ ಇಂದಿನ ವಿಡಿಯೊ ಕಾನ್ಫರೆನ್ಸ್ ಸಂವಾದದಲ್ಲಿ ಚರ್ಚೆ ಮಾಡುವುದಿದ್ದರೂ ಕೂಡ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೋವಿಡ್-19 ಪ್ರಕರಣಗಳ ಬಗ್ಗೆ ಕೂಡ ಇಂದಿನ ಸಂವಾದದಲ್ಲಿ ಪ್ರಧಾನಿಯವರೊಂದಿಗೆ ಚರ್ಚೆ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

Street Dog attack: ಬೀದಿ ನಾಯಿ ಸಮಸ್ಯೆಗೆ ಉಪಾಯ ಕಂಡುಕೊಂಡ ಗದಗ ಜನತೆ, ಕಾಟದಿಂದ ಮುಕ್ತಿಗೆ ಬಣ್ಣ ನೀರಿನ ಪ್ರಯೋಗ..!

ನಮ್ಮವರು ಬೇರೆ ಧರ್ಮದವರ ಪ್ರಾರ್ಥನೆ ಸ್ಥಳಗಳಿಗೆ ಹೋಗುವುದಿಲ್ಲವೇ? ಯದುವೀರ್ ಬಿಜೆಪಿ ಜೊತೆ ಸೇರಿ ಇತಿಹಾಸ ಮರೆತಿದ್ದಾರೆ: DKS

ಕಸದ ರಾಶಿಯಲ್ಲಿ ಮನುಷ್ಯನ ತಲೆ ಬುರುಡೆ, ಮೂಳೆಗಳು ಪತ್ತೆ: ಆತಂಕದಲ್ಲಿ ಜನತೆ

SCROLL FOR NEXT