ಸಾಂದರ್ಭಿಕ ಚಿತ್ರ 
ರಾಜ್ಯ

ಮಹದೇಶ್ವರ ಬೆಟ್ಟ ನೌಕರನ ಕೊಲೆ ಪ್ರಕರಣ: ಪತ್ನಿಯ ಹಳೇ ಪ್ರೇಮ ಪುರಾಣವೇ ಕಾರಣ!

ಜೂ.25 ರಂದು ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ಕೊಲೆಯಾಗಿದ್ದ ಪ್ರಾಧಿಕಾರದ ನೌಕರನ ಕೊಲೆ ಪ್ರಕರಣಕ್ಕೆ ಪತ್ನಿಯ ಹಳೇ ಪ್ರೇಮಕಥೆಯೇ ಕಾರಣ ಎಂದು ತಿಳಿದುಬಂದಿದೆ.

ಚಾಮರಾಜನಗರ: ಜೂ.25 ರಂದು ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ಕೊಲೆಯಾಗಿದ್ದ ಪ್ರಾಧಿಕಾರದ ನೌಕರನ ಕೊಲೆ ಪ್ರಕರಣಕ್ಕೆ ಪತ್ನಿಯ ಹಳೇ ಪ್ರೇಮಕಥೆಯೇ ಕಾರಣ ಎಂದು ತಿಳಿದುಬಂದಿದೆ.

ಈ ಕುರಿತು ಪತ್ರಿಕೆಗೆ ಪೊಲೀಸ್ ಮೂಲಗಳು ಮಾಹಿತಿ ನೀಡಿದ್ದು, ಮೃತ ಮಹಾದೇವ ಪ್ರಸಾದ್​ನ ಪತ್ನಿ ಅನಿತಾ ಎಂಬಾಕೆ ಮದುವೆಗೆ ಮುನ್ನ ಗುಂಡ್ಲುಪೇಟೆ ತಾಲೂಕಿನ ಬೇಗೂರಿನ ಯುವಕನೋರ್ವನೊಂದಿಗೆ ಇರಿಸಿಕೊಂಡಿದ್ದ ಪ್ರೇಮವನ್ನು ಮುಂದುವರೆಸಿದ್ದು ಪತಿಯ ಸಾವಿಗೆ ಕಾರಣವಾಗಿದೆ.

ಏನಿದು ಪ್ರಕರಣ:
ಶ್ರೀಕ್ಷೇತ್ರ ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾವೇರಿ ಪಂಪ್ ಹೌಸ್​ನಲ್ಲಿ ಆಪರೇಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಮಹಾದೇವಪ್ರಸಾದ್ ನಂಜನಗೂಡು ತಾಲೂಕಿನ ತೆಳ್ಳೂರು ಗ್ರಾಮದ ಅನಿತಾ ಎಂಬಾಕೆಯನ್ನು ವಿವಾಹ ಮಾಡಿಕೊಂಡಿದ್ದರು. ಆದರೆ, ಅನಿತಾ ಅದಾಗಲೇ ಗುಂಡ್ಲುಪೇಟೆ ತಾಲೂಕಿನ ಬೇಗೂರಿನ ಬಸವಣ್ಣ ಎಂಬಾತನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ.

ವಿವಾಹದ ಬಳಿಕವೂ ಮುಂದುವರೆದಿದ್ದ ಇವರ ಪ್ರೇಮಪುರಾಣ ಪತಿ ಮಹಾದೇವಪ್ರಸಾದ್​ಗೆ ತಿಳಿದಿದ್ದರಿಂದ ಕಸಿವಿಸಿಗೊಂಡ ಅನಿತಾ ಪತಿಯನ್ನು ಹತ್ಯೆ ಮಾಡಿ ಬಸವಣ್ಣನೊಂದಿಗೆ ಜೀವನ ಸಾಗಿಸಲು ನಿಶ್ಚಯಿಸಿದ್ದಳು. ಪತಿಯನ್ನು ತನ್ನೂರಿಗೆ ಬರುವಂತೆ ಹೇಳಿ ಮಹದೇಶ್ವರ ಬೆಟ್ಟದ ತಾಳಬೆಟ್ಟದಲ್ಲಿ ಪ್ರಿಯಕರನಿಂದ ಕೊಲೆ ಮಾಡಿಸಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕೊಲೆ ಮಾಡಿದ ಪ್ರಿಯಕರ ಬಸವಣ್ಣನಿಗೆ ಶರತ್ ಎಂಬಾತನೂ, ಸಾಥ್ ನೀಡಿರುವುದಾಗಿ ತಿಳಿದುಬಂದಿದೆ.  ಅನಿತಾಳನ್ನು ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿದ್ದು ತನಿಖೆ ಕೈಗೊಂಡಿದ್ದಾರೆ. ಉಳಿದ ಆರೋಪಿಗಳಿಗೆ ಬಲೆ ಬೀಸಿದ್ದಾರೆ.

ವರದಿ: ಗುಳಿಪುರ ನಂದೀಶ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

SCROLL FOR NEXT