ಸಾಂದರ್ಭಿಕ ಚಿತ್ರ 
ರಾಜ್ಯ

ಮಹದೇಶ್ವರ ಬೆಟ್ಟ ನೌಕರನ ಕೊಲೆ ಪ್ರಕರಣ: ಪತ್ನಿಯ ಹಳೇ ಪ್ರೇಮ ಪುರಾಣವೇ ಕಾರಣ!

ಜೂ.25 ರಂದು ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ಕೊಲೆಯಾಗಿದ್ದ ಪ್ರಾಧಿಕಾರದ ನೌಕರನ ಕೊಲೆ ಪ್ರಕರಣಕ್ಕೆ ಪತ್ನಿಯ ಹಳೇ ಪ್ರೇಮಕಥೆಯೇ ಕಾರಣ ಎಂದು ತಿಳಿದುಬಂದಿದೆ.

ಚಾಮರಾಜನಗರ: ಜೂ.25 ರಂದು ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ಕೊಲೆಯಾಗಿದ್ದ ಪ್ರಾಧಿಕಾರದ ನೌಕರನ ಕೊಲೆ ಪ್ರಕರಣಕ್ಕೆ ಪತ್ನಿಯ ಹಳೇ ಪ್ರೇಮಕಥೆಯೇ ಕಾರಣ ಎಂದು ತಿಳಿದುಬಂದಿದೆ.

ಈ ಕುರಿತು ಪತ್ರಿಕೆಗೆ ಪೊಲೀಸ್ ಮೂಲಗಳು ಮಾಹಿತಿ ನೀಡಿದ್ದು, ಮೃತ ಮಹಾದೇವ ಪ್ರಸಾದ್​ನ ಪತ್ನಿ ಅನಿತಾ ಎಂಬಾಕೆ ಮದುವೆಗೆ ಮುನ್ನ ಗುಂಡ್ಲುಪೇಟೆ ತಾಲೂಕಿನ ಬೇಗೂರಿನ ಯುವಕನೋರ್ವನೊಂದಿಗೆ ಇರಿಸಿಕೊಂಡಿದ್ದ ಪ್ರೇಮವನ್ನು ಮುಂದುವರೆಸಿದ್ದು ಪತಿಯ ಸಾವಿಗೆ ಕಾರಣವಾಗಿದೆ.

ಏನಿದು ಪ್ರಕರಣ:
ಶ್ರೀಕ್ಷೇತ್ರ ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾವೇರಿ ಪಂಪ್ ಹೌಸ್​ನಲ್ಲಿ ಆಪರೇಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಮಹಾದೇವಪ್ರಸಾದ್ ನಂಜನಗೂಡು ತಾಲೂಕಿನ ತೆಳ್ಳೂರು ಗ್ರಾಮದ ಅನಿತಾ ಎಂಬಾಕೆಯನ್ನು ವಿವಾಹ ಮಾಡಿಕೊಂಡಿದ್ದರು. ಆದರೆ, ಅನಿತಾ ಅದಾಗಲೇ ಗುಂಡ್ಲುಪೇಟೆ ತಾಲೂಕಿನ ಬೇಗೂರಿನ ಬಸವಣ್ಣ ಎಂಬಾತನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ.

ವಿವಾಹದ ಬಳಿಕವೂ ಮುಂದುವರೆದಿದ್ದ ಇವರ ಪ್ರೇಮಪುರಾಣ ಪತಿ ಮಹಾದೇವಪ್ರಸಾದ್​ಗೆ ತಿಳಿದಿದ್ದರಿಂದ ಕಸಿವಿಸಿಗೊಂಡ ಅನಿತಾ ಪತಿಯನ್ನು ಹತ್ಯೆ ಮಾಡಿ ಬಸವಣ್ಣನೊಂದಿಗೆ ಜೀವನ ಸಾಗಿಸಲು ನಿಶ್ಚಯಿಸಿದ್ದಳು. ಪತಿಯನ್ನು ತನ್ನೂರಿಗೆ ಬರುವಂತೆ ಹೇಳಿ ಮಹದೇಶ್ವರ ಬೆಟ್ಟದ ತಾಳಬೆಟ್ಟದಲ್ಲಿ ಪ್ರಿಯಕರನಿಂದ ಕೊಲೆ ಮಾಡಿಸಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕೊಲೆ ಮಾಡಿದ ಪ್ರಿಯಕರ ಬಸವಣ್ಣನಿಗೆ ಶರತ್ ಎಂಬಾತನೂ, ಸಾಥ್ ನೀಡಿರುವುದಾಗಿ ತಿಳಿದುಬಂದಿದೆ.  ಅನಿತಾಳನ್ನು ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿದ್ದು ತನಿಖೆ ಕೈಗೊಂಡಿದ್ದಾರೆ. ಉಳಿದ ಆರೋಪಿಗಳಿಗೆ ಬಲೆ ಬೀಸಿದ್ದಾರೆ.

ವರದಿ: ಗುಳಿಪುರ ನಂದೀಶ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT