ರಾಜ್ಯ

ಮಂಗಳೂರು ಗುಡ್ಡ ಕುಸಿತ ದುರಂತ: ಮಣ್ಣಿನಡಿ ಸಿಲುಕಿದ್ದ ಬಾಲಕ-ಬಾಲಕಿ ದುರ್ಮರಣ!

Vishwanath S

ಮಂಗಳೂರು: ಮಂಗಳೂರಿನ ಹೊರವಲಯದಲ್ಲಿರುವ ಗುರುಪುರದ ಬಂಗ್ಲೆಗುಡ್ಡ ಕುಸಿತ ದುರಂತದಲ್ಲಿ ಓರ್ವ ಬಾಲಕ, ಬಾಲಕಿ ದುರ್ಮರಣ ಹೊಂದಿದ್ದಾರೆ.

ಮಧ್ಯಾಹ್ನ 1 ಗಂಟೆ ಸುಮಾರಿಗೆ 30 ಅಡಿ ಕೆಳಕ್ಕೆ ಗುಡ್ಡ ಕುಸಿದಿತ್ತು. ಈ ವೇಳೆಯಲ್ಲಿ ಅಲ್ಲಿ ನಾಲ್ಕು ಮನೆಗಳು ನೆಲಸಮಗೊಂಡಿದ್ದವು. ಈ ವೇಳೆ ದೊಡ್ಡವರು ಮನೆಯಿಂದ ಹೊರ ಓಡಿ ಬಂದಿದ್ದರು. ಆದರೆ 16 ವರ್ಷದ ಸಫ್ವಾನ್ ಹಾಗೂ 10 ವರ್ಷದ ಸಹಲಾ ಬಾಲಕರಿಬ್ಬರು ಸಿಲುಕಿದ್ದರು. 

ಈ ವೇಳೆ ಪೊಲೀಸರು ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದರು. ನಿರಂತರವಾಗಿ 4 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಬಳಿಕ ಇಬ್ಬರ ದೇಹ ಪತ್ತೆಯಾಗಿತ್ತು. ಆದರೆ ಅದಾಗಲೇ ಅವರಿಬ್ಬರೂ ಮೃತಪಟ್ಟಿದ್ದಾರೆ. 

SCROLL FOR NEXT