ಸಾಂದರ್ಭಿಕ ಚಿತ್ರ 
ರಾಜ್ಯ

ಜ್ಞಾನಭಾರತಿ ವಿವಿ ಅಗ್ನಿ ಶಾಮಕ ಠಾಣೆ ಐದು ಸಿಬ್ಬಂದಿಗೆ ಕೊರೋನಾ ಸೋಂಕು

ಜ್ಞಾನಭಾರತಿ ವಿಶ್ವ ವಿದ್ಯಾನಿಲಯದ ಅಗ್ನಿಶಾಮಕ ಠಾಣೆಯ ಐವರು ಸಿಬ್ಬಂದಿಗೆ ಕೊರೋನಾ ಸೋಂಕು ದೃಢವಾಗಿದ್ದು ಠಾಣೆಯನ್ನು ಸ್ಯಾನಿಟೈಸ್ ಮಾಡಲಾಗಿದೆ,

ಬೆಂಗಳೂರು: ಜ್ಞಾನಭಾರತಿ ವಿಶ್ವ ವಿದ್ಯಾನಿಲಯದ ಅಗ್ನಿಶಾಮಕ ಠಾಣೆಯ ಐವರು ಸಿಬ್ಬಂದಿಗೆ ಕೊರೋನಾ ಸೋಂಕು ದೃಢವಾಗಿದ್ದು ಠಾಣೆಯನ್ನು ಸ್ಯಾನಿಟೈಸ್ ಮಾಡಲಾಗಿದೆ,

ಏತನ್ಮಧ್ಯೆ, ಜ್ಞಾನ ಭಾರತಿಯ ಎಲ್ಲ ವಿಭಾಗಗಳು ಮತ್ತು ವಿಭಾಗಗಳ ಬೋಧಕೇತರ ಸಿಬ್ಬಂದಿಗೆ ಜುಲೈ 6-10 ರಿಂದ ಮನೆಯಿಂದ ಕೆಲಸ ಮಾಡುವಂತೆ ವಿಶ್ವವಿದ್ಯಾಲಯದ ಉಪಕುಲಪತಿ ಕೆ ಆರ್ ವೇಣುಗೋಪಾಲ್ ನಿರ್ದೇಶನ ನೀಡಿದ್ದಾರೆ.

ಜುಲೈ 11 ಮತ್ತು 12 ರಂದು ಸಾರ್ವಜನಿಕ ರಜಾದಿನಗಳಿರುವುದರಿಂದ ಜುಲೈ 13 ರಂದು ಅವರು ಕ್ಯಾಂಪಸ್‌ಗೆ ಮರಳಲಿದ್ದಾರೆ.  ಇನ್ನು ಸರ್ಕಾರದ ನಿರ್ದೇಶನದಂತೆ ಬೋಧಕೇತರ ಸಿಬ್ಬಂದಿಗೆ  ಜುಲೈ 15ರವರೆಗೆ ರಜೆ ಘೋಷಿಸಲಾಗಿದೆ.

ಬೋಧಕೇತರ ಸಿಬ್ಬಂದಿಗೂ ಸುತ್ತೋಲೆ ಹೊರಡಿಸಿ ರಜೆ ನೀಡಲಾಗಿದೆ ಎಂದು ವೇಣುಗೋಪಾಲ್ ತಿಳಿಸಿದ್ದಾರೆ. ಜೊತೆಗೆ ಜುಲೈ 15ರವರೆಗೂ ವಿವಿ ಬಂದ್ ಆಗಲಿದೆ.

ಏತನ್ಮಧ್ಯೆ, ಉನ್ನತ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಶನಿವಾರ ಆದೇಶ ಹೊರಡಿಸಿದ್ದು, ವಿಶ್ವವಿದ್ಯಾಲಯಗಳು / ಕಾಲೇಜುಗಳ ಮುಖ್ಯಸ್ಥರು ತಮ್ಮ ಬೋಧಕೇತರ ಸಿಬ್ಬಂದಿಯನ್ನು ಅವಶ್ಯಕತೆಗಳಿಗೆ ಅನುಗುಣವಾಗಿ ಕಚೇರಿಯಿಂದ ಕೆಲಸ ಮಾಡುವಂತೆ ಕೇಳಬಹುದು ಎಂದು ಸುತ್ತೋಲೆ ಹೊರಡಿಸಿದ್ದಾರೆ.

ಕೋವಿಡ್ ಆರೈಕೆ ಕೇಂದ್ರಗಳನ್ನು ಸ್ಥಾಪಿಸಲು ಕ್ಯಾಂಪಸ್‌ನಲ್ಲಿರುವ ಎರಡು ಹಾಸ್ಟೆಲ್‌ಗಳನ್ನು ಗುರುತಿಸಲಾಗಿದೆ. ಆದರೆ ಕ್ಯಾಂಪಸ್ ಆವರಣದಲ್ಲಿ 200 ಹಾಸಿಗೆಗಳ ಸೌಲಭ್ಯವನ್ನು ಹೊಂದಿರುವ ಬಗ್ಗೆ ವೇಣುಗೋಪಾಲ್ ಆತಂಕ ವ್ಯಕ್ತಪಡಿಸಿದ್ದಾರೆ.

ನಾಲ್ಕು ವಿದ್ಯಾರ್ಥಿಗಳಿಗೆ ನೀಡಿದ್ದ ಒಂದು ಕೊಠಡಿಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಹಿನ್ನೆಲೆಯಲ್ಲಿ ಒಂದು ಕೊಠಡಿಗೆ ಒಂದು ರೋಗಿ ನೀಡಲಾಗಿದೆ, ದೆಹಲಿ ಮಾದರಿಯಂತೆ ಸರ್ಕಾರ 1 ಸಾವಿರ ಬೆಡ್ ವ್ಯವಸ್ಥೆ ಮಾಡಬೇಕು ಎಂದು ಎಂದು ಅವರು ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!