ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದಲ್ಲಿ ಕೊರೋನಾ ಸೋಂಕಿತರೊಂದಿಗೆ ಸಂಪರ್ಕ ಹೊಂದಿದ್ದವರ ಪತ್ತೆಹಚ್ಚಲು ಬಿಬಿಎಂಪಿ, ವಾರ್ ರೂಮ್ ಹರಸಾಹಸ!

ರಾಜ್ಯದಲ್ಲಿ ಪ್ರತೀನಿತ್ಯ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಸೋಂಕಿತರೊಂದಿಗೆ ಸಂಪರ್ಕ ಹೊಂದಿದ್ದವರ ಪತ್ತೆಹಚ್ಚಲು ಬಿಬಿಎಂಪಿ ಅಧಿಕಾರಿಗಳು, ವಾರ್ ರೂಂ ಹರಸಾಹಸ ಪಡುತ್ತಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ರಾಜ್ಯದಲ್ಲಿ ಪ್ರತೀನಿತ್ಯ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಸೋಂಕಿತರೊಂದಿಗೆ ಸಂಪರ್ಕ ಹೊಂದಿದ್ದವರ ಪತ್ತೆಹಚ್ಚಲು ಬಿಬಿಎಂಪಿ ಅಧಿಕಾರಿಗಳು, ವಾರ್ ರೂಂ ಹರಸಾಹಸ ಪಡುತ್ತಿದೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ಕೋವಿಡ್ ಅಂಕಿಅಂಶಗಳ ವಿಶ್ಲೇಷಣೆಯ ಪ್ರಕಾರ, ಕಳೆದ 5 ದಿನಗಳಲ್ಲಿ ಶೇಕಡಾ 80 ಕ್ಕಿಂತ ಹೆಚ್ಚು ಪಾಸಿಟಿವ್ ಪ್ರಕರಣಗಳೊಂದಿನ ಸಂಪರ್ಕಿತರ ಪತ್ತೆಹಚ್ಚುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಹೇಳಲಾಗುತ್ತಿದೆ. ಆದರೆ, ಈ ಹೇಳಿಕೆಯನ್ನು ಬಿಬಿಎಂಪಿ ಅಧಿಕಾರಿಗಳು ತಳ್ಳಿಹಾಕುತ್ತಿದ್ದಾರೆ. 

ಇದು ಸುಳ್ಳು. ಯಾವುದೇ ಸಮಯದಲ್ಲಿ ಯಾವುದೇ ಸಂದರ್ಭದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಿಬ್ಬಂದಿಗಳು ಕೂಡಲೇ ಸ್ಥಳಕ್ಕೆ ತೆರಳಿ ಸೋಂಕಿತರೊಂದಿಗೆ ಸಂಪರ್ಕ ಹೊಂದಿದ್ದವರ ಕುರಿತು ಮಾಹಿತಿ ಸಂಗ್ರಹಿಸುತ್ತಾರೆ. ಹೆಚ್ಚೆಚ್ಚು ಪ್ರಕರಣಗಳು ಬೆಳಕಿಗೆ ಬರುತ್ತಿದ್ದಂತೆಯೇ ಹೆಚ್ಚೆಚ್ಚು ಮಾಹಿತಿಗಳು ಸಂಗ್ರಹವಾಗುತ್ತಿವೆ. ಹೀಗಾಗಿ ಎಲ್ಲವನ್ನೂ ವೆಬ್'ಸೈಟ್ ಗಳಲ್ಲಿ ಅಪ್ಲೋಡ್ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸೋಂಕಿತರೊಂದಿಗೆ ಸಂಪರ್ಕಿತರನ್ನು ಪತ್ತೆಹಚ್ಚುವ ಕಾರ್ಯ ಪ್ರಗತಿಯಲ್ಲಿದೆ ಎಂದೇ ಭಾಸವಾಗುತ್ತೆದ ಎಂದು ಬಿಬಿಎಂಪಿ ಆಯುಕ್ತ ಬಿ.ಹೆಚ್.ಅನಿಲ್ ಕುಮಾರ್ ಅವರು ಹೇಳಿದ್ದಾರೆ. 

ಇನ್ನು ಬಿಬಿಎಪಿ ಹಿರಿಯ ಅಧಿಕಾರಿಗಳು ಹಾಗೂ ಕೋವಿಡ್ ವಾರ್ ರೂಮ್ ನಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಗಳು ಸೋಂಕಿತರೊಂದಿಗೆ ಸಂಪರ್ಕ ಹೊಂದಿದ್ದವರನ್ನು ಪತ್ತೆ ಹಚ್ಚುವ ಕಾರ್ಯ ಪ್ರಗತಿಯಲ್ಲಿದೆ ಎಂದು ಒಪ್ಪಿಕೊಂಡಿದ್ದಾರೆ. 

ಕಳೆದ 5 ದಿನಗಳಿಂದ ನಗರದಲ್ಲಿ 700-1250 ಪ್ರಕರಣಗಳು ಪ್ರತೀನಿತ್ಯ ಬೆಳಕಿಗೆ ಬರುತ್ತಿವೆ. ಪ್ರತೀನಿತ್ಯ ಆರೋಗ್ಯಾಧಿಕಾರಿಗಳು 5.000 ಸ್ವ್ಯಾಬ್ ಮಾದರಿಗಳನ್ನು ಸಂಗ್ರಹಿಸುತ್ತಿದ್ದಾರೆ. 

ಬಿಬಿಎಂಪಿ ಮತ್ತು ಆರೋಗ್ಯ ಇಲಾಖೆ ಕಂದಾಯ ಇನ್ಸ್ ಪೆಕ್ಟರ್ ಗಳನ್ನೊಳಗೊಂಡಂತೆ 200 ತಂಡಗಳನ್ನು ರಚಿಸುತ್ತಿದ್ದು, ಈ ತಂಡಗಳು ವಾರ್ಡ್ ಮಟ್ಟದಲ್ಲಿ ಸಂಪರ್ಕಗಳನ್ನು ಪತ್ತೆ ಹಚ್ಚುವ ಕಾರ್ಯ ಮಾಡುತ್ತಿದೆ ಎಂದು ತಿಳಿದುಬಂದಿದೆ. 

ಫೀಲ್ಡ್ ವರ್ಕರ್ಸ್ ಗಳಿಗೆ ವಾರಗಳ ಕಾಲ ತರಬೇತಿ ನೀಡಲಾಗುತ್ತಿದ್ದು, ಮಾಹಿತಿಯನ್ನು ಹೇಗೆ ಸಂಗ್ರಹಿಸಬೇಕು ಎಂಬುದರ ಬಗ್ಗೆ ತರಬೇತಿ ನೀಡಲಾಗುತ್ತಿದೆ. 5,000 ಪ್ರಕರಣಗಳಲ್ಲಿ 2,500 ಸಂಪರ್ಕಗಳನ್ನು ಪತ್ತೆ ಹಚ್ಚಲಾಗಿದೆ. ಮತ್ತಷ್ಟು ಸಂಪರ್ಕಿತರ ಪತ್ತೆಹಚ್ಚುವ ಅಗತ್ಯವಿದೆ. ಆದರೆ, ಸಂಪರ್ಕಿತರ ಪತ್ತೆಹಚ್ಚುವುದು ಕಠಿಣ ಕೆಲಸವಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್​ಗೆ 61 ರನ್ ಗಳ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ್ದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT