ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ವೈಟ್‌ಫೀಲ್ಡ್ ವಿಭಾಗದ 15 ಪೊಲೀಸರಿಗೆ ಕೊರೋನಾ ಪಾಸಿಟಿವ್

ಬಂಧಿತ ಆರೋಪಿಗಳಿಂದ ‌ಪೊಲೀಸರಿಗೆ ಸೋಂಕು ಹರಡಿದೆ ಎಂಬ ವದಂತಿ ಸುಳ್ಳು ಎಂದು ಡಿಸಿಪಿ ಅನುಚೇತ್‌ ಮಂಗಳವಾರ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ಬಂಧಿತ ಆರೋಪಿಗಳಿಂದ ‌ಪೊಲೀಸರಿಗೆ ಸೋಂಕು ಹರಡಿದೆ ಎಂಬ ವದಂತಿ ಸುಳ್ಳು ಎಂದು ಡಿಸಿಪಿ ಅನುಚೇತ್‌ ಮಂಗಳವಾರ ಸ್ಪಷ್ಟಪಡಿಸಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ನಗರದ‌ ವೈಟ್‌ಫೀಲ್ಡ್ ವಿಭಾಗದ ಒಟ್ಟು 15 ಪೊಲೀಸ್‌ ಸಿಬ್ಬಂದಿಯಲ್ಲಿ ಸೋಮವಾರ ಕೊರೋನಾ ಸೋಂಕು ದೃಢಪಟ್ಟಿದ್ದು, ಅದರಲ್ಲಿ 12 ಸಿಬ್ಬಂದಿ ಎಚ್ಎಎಲ್‌ ಠಾಣೆಗೆ ಸೇರಿದ್ದಾರೆ. ಈ ವಿಭಾಗದಲ್ಲಿ ಇಲ್ಲಿಯವರೆಗೆ ಒಟ್ಟು 27 ಪೊಲೀಸ್‌ ಸಿಬ್ಬಂದಿಗಳಲ್ಲಿ ಕೋವಿಡ್‌ 19 ಪತ್ತೆಯಾಗಿದ್ದು, ಐದು ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ ಎಂದರು.

ಎಚ್‌ಎಎಲ್‌ ಠಾಣೆಯಲ್ಲಿ ಓರ್ವ ಪೊಲೀಸ್‌ ಸಿಬ್ಬಂದಿಗೆ ಕಳೆದ ಜೂ. 27ರಂದು ಸೋಂಕು ದೃಢಪಟ್ಟಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ಠಾಣೆಯನ್ನು ಸೀಲ್‌ಡೌನ್‌ ಮಾಡಲಾಗಿದೆ. ನಂತರ ಎಲ್ಲಾ ಪೊಲೀಸ್‌ ಸಿಬ್ಬಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದ್ದು, ಈ ಪೈಕಿ 12 ಮಂದಿಗೆ ಸೋಂಕು ಇರುವುದು ಸೋಮವಾರ ದೃಢಪಟ್ಟಿದೆ ಎಂದು ತಿಳಿಸಿದರು. 

ಇನ್ನು, ಎಚ್‌ಎಎಲ್‌ ಠಾಣೆಯಲ್ಲಿ ಕೊನೆಯದಾಗಿ ಕಳೆದ ತಿಂಗಳ 15ರಂದು ಆರೋಪಿಯೋರ್ವನನ್ನು ಬಂಧಿಸಲಾಗಿತ್ತು. ಈಗಾಗಲೇ ಬಂಧಿತ ಎಲ್ಲಾ ಆರೋಪಿಗಳನ್ನು ಕೋವಿಡ್-19 ತಪಾಸಣೆಗೆ ಒಳಪಡಿಸಲಾಗಿದೆ. ಆದರೆ, ಯಾರೊಬ್ಬರಲ್ಲಿಯೂ ಸೋಂಕು ದೃಢಪಟ್ಟಿಲ್ಲ. ಅಲ್ಲದೇ , ತದನಂತರ ಯಾರೊಬ್ಬರನ್ನು ವಶಕ್ಕೆ ಪಡೆದಿಲ್ಲ. ಆದ್ದರಿಂದ ಬಂಧಿತ ಆರೋಪಿಗಳಿಂದ ‌ಪೊಲೀಸರಿಗೆ ಸೋಂಕು ಹರಡಿದೆ ಎಂಬ ವದಂತಿ ಸುಳ್ಳು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT