ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ವೈಟ್‌ಫೀಲ್ಡ್ ವಿಭಾಗದ 15 ಪೊಲೀಸರಿಗೆ ಕೊರೋನಾ ಪಾಸಿಟಿವ್

ಬಂಧಿತ ಆರೋಪಿಗಳಿಂದ ‌ಪೊಲೀಸರಿಗೆ ಸೋಂಕು ಹರಡಿದೆ ಎಂಬ ವದಂತಿ ಸುಳ್ಳು ಎಂದು ಡಿಸಿಪಿ ಅನುಚೇತ್‌ ಮಂಗಳವಾರ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ಬಂಧಿತ ಆರೋಪಿಗಳಿಂದ ‌ಪೊಲೀಸರಿಗೆ ಸೋಂಕು ಹರಡಿದೆ ಎಂಬ ವದಂತಿ ಸುಳ್ಳು ಎಂದು ಡಿಸಿಪಿ ಅನುಚೇತ್‌ ಮಂಗಳವಾರ ಸ್ಪಷ್ಟಪಡಿಸಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ನಗರದ‌ ವೈಟ್‌ಫೀಲ್ಡ್ ವಿಭಾಗದ ಒಟ್ಟು 15 ಪೊಲೀಸ್‌ ಸಿಬ್ಬಂದಿಯಲ್ಲಿ ಸೋಮವಾರ ಕೊರೋನಾ ಸೋಂಕು ದೃಢಪಟ್ಟಿದ್ದು, ಅದರಲ್ಲಿ 12 ಸಿಬ್ಬಂದಿ ಎಚ್ಎಎಲ್‌ ಠಾಣೆಗೆ ಸೇರಿದ್ದಾರೆ. ಈ ವಿಭಾಗದಲ್ಲಿ ಇಲ್ಲಿಯವರೆಗೆ ಒಟ್ಟು 27 ಪೊಲೀಸ್‌ ಸಿಬ್ಬಂದಿಗಳಲ್ಲಿ ಕೋವಿಡ್‌ 19 ಪತ್ತೆಯಾಗಿದ್ದು, ಐದು ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ ಎಂದರು.

ಎಚ್‌ಎಎಲ್‌ ಠಾಣೆಯಲ್ಲಿ ಓರ್ವ ಪೊಲೀಸ್‌ ಸಿಬ್ಬಂದಿಗೆ ಕಳೆದ ಜೂ. 27ರಂದು ಸೋಂಕು ದೃಢಪಟ್ಟಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ಠಾಣೆಯನ್ನು ಸೀಲ್‌ಡೌನ್‌ ಮಾಡಲಾಗಿದೆ. ನಂತರ ಎಲ್ಲಾ ಪೊಲೀಸ್‌ ಸಿಬ್ಬಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದ್ದು, ಈ ಪೈಕಿ 12 ಮಂದಿಗೆ ಸೋಂಕು ಇರುವುದು ಸೋಮವಾರ ದೃಢಪಟ್ಟಿದೆ ಎಂದು ತಿಳಿಸಿದರು. 

ಇನ್ನು, ಎಚ್‌ಎಎಲ್‌ ಠಾಣೆಯಲ್ಲಿ ಕೊನೆಯದಾಗಿ ಕಳೆದ ತಿಂಗಳ 15ರಂದು ಆರೋಪಿಯೋರ್ವನನ್ನು ಬಂಧಿಸಲಾಗಿತ್ತು. ಈಗಾಗಲೇ ಬಂಧಿತ ಎಲ್ಲಾ ಆರೋಪಿಗಳನ್ನು ಕೋವಿಡ್-19 ತಪಾಸಣೆಗೆ ಒಳಪಡಿಸಲಾಗಿದೆ. ಆದರೆ, ಯಾರೊಬ್ಬರಲ್ಲಿಯೂ ಸೋಂಕು ದೃಢಪಟ್ಟಿಲ್ಲ. ಅಲ್ಲದೇ , ತದನಂತರ ಯಾರೊಬ್ಬರನ್ನು ವಶಕ್ಕೆ ಪಡೆದಿಲ್ಲ. ಆದ್ದರಿಂದ ಬಂಧಿತ ಆರೋಪಿಗಳಿಂದ ‌ಪೊಲೀಸರಿಗೆ ಸೋಂಕು ಹರಡಿದೆ ಎಂಬ ವದಂತಿ ಸುಳ್ಳು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT