ಯಡಿಯೂರಪ್ಪ 
ರಾಜ್ಯ

ಕೊರೋನಾ ವಿರುದ್ಧ ಹೋರಾಟ: ಕೇಂದ್ರ ತಂಡದಿಂದ ಸಿಎಂ ಭೇಟಿ

ರಾಜಧಾನಿ ಬೆಂಗಳೂರಿನಲ್ಲಿ ನಿಯಂತ್ರಣ ಮೀರಿ ಹಬ್ಬುತ್ತಿರುವ ಕೊರೊನಾ ವಿರುದ್ಧ ಹೋರಾಡಲು ಕರ್ನಾಟಕ ಸರ್ಕಾರ ಯಾವ ಕ್ರಮಗಳನ್ನು ಕೈಗೊಂಡಿದೆ ಎಂಬುದರ ಬಗ್ಗೆ ಮಾಹಿತಿ ಪಡೆಯಲು ಕೇಂದ್ರ ಸರ್ಕಾರದ ತಂಡವೊಂದು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಲಿದೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಿಯಂತ್ರಣ ಮೀರಿ ಹಬ್ಬುತ್ತಿರುವ ಕೊರೊನಾ ವಿರುದ್ಧ ಹೋರಾಡಲು ಕರ್ನಾಟಕ ಸರ್ಕಾರ ಯಾವ ಕ್ರಮಗಳನ್ನು ಕೈಗೊಂಡಿದೆ ಎಂಬುದರ ಬಗ್ಗೆ ಮಾಹಿತಿ ಪಡೆಯಲು ಕೇಂದ್ರ ಸರ್ಕಾರದ ತಂಡವೊಂದು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಲಿದೆ.

ಕೇಂದ್ರ ಆರೋಗ್ಯ ಇಲಾಖೆಯ ಉನ್ನಾತಾಧಿಕಾರಿಗಳ ತಂಡ ಮಂಗಳವಾರ ಬೆಳಗ್ಗೆ ಹಠಾತ್‌ ರಾಜ್ಯಕ್ಕೆ ಭೇಟಿ ನೀಡುತ್ತಿರುವುದು ಈಗ ಕುತೂಹಲಕ್ಕೆ ಕಾರಣವಾಗಿದೆ. ಬೆಂಗಳೂರಿಗೆ ಆಗಮಿಸಲಿರುವ ಕೇಂದ್ರ ಆರೋಗ್ಯ ಇಲಾಖೆ ತಂಡವು ಮಧ್ಯಾಹ್ನ 12 ಗಂಟೆಗೆ ಸಿಎಂ ಯಡಿಯೂರಪ್ಪ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಲಿದೆ.

ಕೊರೊನಾ ಸಂಬಂಧಿತ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಂದ್ರ ಸರಕಾರದ ಕಣ್ಣು ಕೆಂಪಗಾಗಿಸಿದೆ. ಈ ಸಂಬಂಧ ಬಳಿಕ ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳ ಜತೆಗೆ ಚರ್ಚೆ ನಡೆಸಲಿದೆ. ಈ ವೇಳೆ ಖರೀದಿ ಹಗರಣದ ಆರೋಪಗಳ ಬಗ್ಗೆಯೂ ಪರಿಶೀಲನೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಕೋವಿಡ್‌ ಪಾಸಿಟಿವ್‌ ಸಂಖ್ಯೆ ಹೆಚ್ಚುತ್ತಿದೆ. ದೆಹಲಿ, ಮುಂಬಯಿ ಬಳಿಕ ಬೆಂಗಳೂರಿನಲ್ಲೂ ಪ್ರಕರಣ ಹೆಚ್ಚುತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರು ಪ್ರಮುಖ ವಾಣಿಜ್ಯ ಕೇಂದ್ರವಾಗಿದೆ. ಇದರಿಂದ ಆರ್ಥಿಕವಾಗಿ ಹೊಡೆತ ಬೀಳುವ ಅಪಾಯವಿದೆ. ಬೆಂಗಳೂರು ಕೂಡಾ ಅಪಾಯದ ಪಟ್ಟಿಗೆ ಸೇರದಂತೆ ತಡೆಯುವ ಬಗ್ಗೆಯೂ ಕೇಂದ್ರ ತಂಡವು ರಾಜ್ಯ ಸರಕಾರದ ಜತೆ ಚರ್ಚಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT