ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರು: ಜಾತಿ-ಮತ-ಬೇಧವಿಲ್ಲದೇ ಕೋರೋನಾದಿಂದ ಸಾವನ್ನಪ್ಪಿದವರಿಗೆ ಗೌರವಯುತ ಅಂತ್ಯ ಸಂಸ್ಕಾರ

ಕೊರೋನಾದಿಂದ  ಸಾವನ್ನಪ್ಪಿದವರ ಶವಗಳ ಸರಿಯಾದ ಅಂತ್ಯ ಸಂಸ್ಕಾರ ನಡೆಯುತ್ತಿಲ್ಲ ಎಂದು ಹಲವು ಕಡೆ ವರದಿಯಾಗುತ್ತಿದ್ದರೇ, ಮೈಸೂರಿನ ಮುಸ್ಲಿಂ ಸಮುದಾಯದ ಗುಂಪೊಂದು ಕೊರೋನಾ ರೋಗಿಗಳಿಗೆ ಗೌರವಯುತ ವಿದಾಯ ಹೇಳುತ್ತಿದ್ದಾರೆ.

ಮೈಸೂರು: ಕೊರೋನಾದಿಂದ  ಸಾವನ್ನಪ್ಪಿದವರ ಶವಗಳ ಸರಿಯಾದ ಅಂತ್ಯ ಸಂಸ್ಕಾರ ನಡೆಯುತ್ತಿಲ್ಲ ಎಂದು ಹಲವು ಕಡೆ ವರದಿಯಾಗುತ್ತಿದ್ದರೇ, ಮೈಸೂರಿನ ಮುಸ್ಲಿಂ ಸಮುದಾಯದ ಗುಂಪೊಂದು ಕೊರೋನಾ ರೋಗಿಗಳಿಗೆ ಗೌರವಯುತ ವಿದಾಯ ಹೇಳುತ್ತಿದ್ದಾರೆ.

ಕೊರೋನಾದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಸ್ಲಿಂ ಸಮುದಾಯದ 20 ಮಂದಿ ಸ್ವಂ ಸೇವಕರ ತಂಡ ಕೊರೋನಾದಿಂದ ಸಾವನ್ನಪ್ಪಿದವರ ದೇಹವವನ್ನು ಅಂತ್ಯಸಂಸ್ಕಾರ ಮಾಡುತ್ತಿದ್ದಾರೆ. ಯಾವುದೇ ಜಾತಿ ಧರ್ಮದ ನೋಡದೆ ಎಲ್ಲಾ ಶವಗಳಿಗೂ ಗೌರವಯುತವಾಗಿ ವಿದಾಯ ಹೇಳುತ್ತಿದ್ದಾರೆ.

ಮಾಜಿ ಮೇಯರ್ ಅಯೂಬ್ ಖಾನ್ ಮತ್ತು ಕಾರ್ಪೋರೇಟರ್ ಆರಿಫ್ ಹುಸೇನ್ ಅವರ ಸಲಹೆಯ ಮೇರೆಗೆ  20 ಮಂದಿಯ ತಂಡ ರಚಿಸಲಾಯಿತು. ಅಧಿಕಾರಿಗಳು ಸಮ್ಮತಿಸಿದ ಮೇಲೆ ಟಿಪ್ಪು ಸರ್ಕಲ್ ನಲ್ಲಿರುವ ಸ್ಮಶಾನದಲ್ಲಿ ಕೊರೋನಾದಿಂದ ಸಾವನ್ನಪ್ಪಿದ ರೋಗಿಗಳ ಅಂತ್ಯ ಸಂಸ್ಕಾರ ನಡೆಸುತ್ತಿದ್ದಾರೆ.

ಕೊರೋನಾ ದಿಂದ ಸಾವನ್ನಪ್ಪಿದವರ ಅಂತ್ಯ ಸಂಸ್ಕಾರ ನಡೆಸಲು ಪ್ರತ್ಯೇಕ ಸ್ಥಳ ಗುರುತಿಸಲಾಗಿದ್ದು, ಶವಗಳನ್ನು ಮೈಸೂರು ಮಹಾನಗರ ಪಾಲಿಕೆ ವ್ಯಾನ್ ನಲ್ಲಿ ಸಾಗಿಸಲಾಗುತ್ತದೆ. ಆ್ಯಂಬುಲೆನ್ಸ್ ಗಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕಾರ್ಪೋರೇಟರ್ ಹಸ್ರತುಲ್ಲಾ ಖಾನ್ ತಿಳಿಸಿದ್ದಾರೆ.

ಡಿ ಗ್ರೂಪ್ ನೌಕರರು ಕೊರೋನಾದಿಂದ ಸಾವನ್ನಪ್ಪಿದವರ ಅಂತ್ಯ ಸಂಸ್ಕಾರದಲ್ಲಿ ನೆರವಾಗಲಿದ್ದಾರೆ, ಕೇವಲ ಇವರು ಮಾತ್ರವಲ್ಲದೇ ಮೈಸೂರಿನ ಹಲವು ಸ್ವಯಂ ಸೇವಾ ತಂಡಗಳು ಇದೇ ರೀತಿ ಕಾರ್ಯ ನಿರ್ವಹಿಸುತ್ತಿವೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಶಿರಾಜ್ ಅಹ್ಮದ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT