ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರು: ಜಾತಿ-ಮತ-ಬೇಧವಿಲ್ಲದೇ ಕೋರೋನಾದಿಂದ ಸಾವನ್ನಪ್ಪಿದವರಿಗೆ ಗೌರವಯುತ ಅಂತ್ಯ ಸಂಸ್ಕಾರ

ಕೊರೋನಾದಿಂದ  ಸಾವನ್ನಪ್ಪಿದವರ ಶವಗಳ ಸರಿಯಾದ ಅಂತ್ಯ ಸಂಸ್ಕಾರ ನಡೆಯುತ್ತಿಲ್ಲ ಎಂದು ಹಲವು ಕಡೆ ವರದಿಯಾಗುತ್ತಿದ್ದರೇ, ಮೈಸೂರಿನ ಮುಸ್ಲಿಂ ಸಮುದಾಯದ ಗುಂಪೊಂದು ಕೊರೋನಾ ರೋಗಿಗಳಿಗೆ ಗೌರವಯುತ ವಿದಾಯ ಹೇಳುತ್ತಿದ್ದಾರೆ.

ಮೈಸೂರು: ಕೊರೋನಾದಿಂದ  ಸಾವನ್ನಪ್ಪಿದವರ ಶವಗಳ ಸರಿಯಾದ ಅಂತ್ಯ ಸಂಸ್ಕಾರ ನಡೆಯುತ್ತಿಲ್ಲ ಎಂದು ಹಲವು ಕಡೆ ವರದಿಯಾಗುತ್ತಿದ್ದರೇ, ಮೈಸೂರಿನ ಮುಸ್ಲಿಂ ಸಮುದಾಯದ ಗುಂಪೊಂದು ಕೊರೋನಾ ರೋಗಿಗಳಿಗೆ ಗೌರವಯುತ ವಿದಾಯ ಹೇಳುತ್ತಿದ್ದಾರೆ.

ಕೊರೋನಾದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಸ್ಲಿಂ ಸಮುದಾಯದ 20 ಮಂದಿ ಸ್ವಂ ಸೇವಕರ ತಂಡ ಕೊರೋನಾದಿಂದ ಸಾವನ್ನಪ್ಪಿದವರ ದೇಹವವನ್ನು ಅಂತ್ಯಸಂಸ್ಕಾರ ಮಾಡುತ್ತಿದ್ದಾರೆ. ಯಾವುದೇ ಜಾತಿ ಧರ್ಮದ ನೋಡದೆ ಎಲ್ಲಾ ಶವಗಳಿಗೂ ಗೌರವಯುತವಾಗಿ ವಿದಾಯ ಹೇಳುತ್ತಿದ್ದಾರೆ.

ಮಾಜಿ ಮೇಯರ್ ಅಯೂಬ್ ಖಾನ್ ಮತ್ತು ಕಾರ್ಪೋರೇಟರ್ ಆರಿಫ್ ಹುಸೇನ್ ಅವರ ಸಲಹೆಯ ಮೇರೆಗೆ  20 ಮಂದಿಯ ತಂಡ ರಚಿಸಲಾಯಿತು. ಅಧಿಕಾರಿಗಳು ಸಮ್ಮತಿಸಿದ ಮೇಲೆ ಟಿಪ್ಪು ಸರ್ಕಲ್ ನಲ್ಲಿರುವ ಸ್ಮಶಾನದಲ್ಲಿ ಕೊರೋನಾದಿಂದ ಸಾವನ್ನಪ್ಪಿದ ರೋಗಿಗಳ ಅಂತ್ಯ ಸಂಸ್ಕಾರ ನಡೆಸುತ್ತಿದ್ದಾರೆ.

ಕೊರೋನಾ ದಿಂದ ಸಾವನ್ನಪ್ಪಿದವರ ಅಂತ್ಯ ಸಂಸ್ಕಾರ ನಡೆಸಲು ಪ್ರತ್ಯೇಕ ಸ್ಥಳ ಗುರುತಿಸಲಾಗಿದ್ದು, ಶವಗಳನ್ನು ಮೈಸೂರು ಮಹಾನಗರ ಪಾಲಿಕೆ ವ್ಯಾನ್ ನಲ್ಲಿ ಸಾಗಿಸಲಾಗುತ್ತದೆ. ಆ್ಯಂಬುಲೆನ್ಸ್ ಗಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕಾರ್ಪೋರೇಟರ್ ಹಸ್ರತುಲ್ಲಾ ಖಾನ್ ತಿಳಿಸಿದ್ದಾರೆ.

ಡಿ ಗ್ರೂಪ್ ನೌಕರರು ಕೊರೋನಾದಿಂದ ಸಾವನ್ನಪ್ಪಿದವರ ಅಂತ್ಯ ಸಂಸ್ಕಾರದಲ್ಲಿ ನೆರವಾಗಲಿದ್ದಾರೆ, ಕೇವಲ ಇವರು ಮಾತ್ರವಲ್ಲದೇ ಮೈಸೂರಿನ ಹಲವು ಸ್ವಯಂ ಸೇವಾ ತಂಡಗಳು ಇದೇ ರೀತಿ ಕಾರ್ಯ ನಿರ್ವಹಿಸುತ್ತಿವೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಶಿರಾಜ್ ಅಹ್ಮದ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT