ಮಂಗಳೂರು: ಕರ್ತವ್ಯದಲ್ಲಿದ್ದ ಆಶಾ ಕಾರ್ಯಕರ್ತೆ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಗಂಭೀರ ಗಾಯಗೊಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ನಡೆದಿದೆ.
ಜುಲೈ 9 ರ ಗುರುವಾರ ಬಂಟ್ವಾಳದ ಚೆನ್ನೈತೋಡಿ ಎಂಬಲ್ಲಿ ಮಮತಾ ಗಟ್ಟಿ ಎಂಬ ಆಶಾ ಕಾರ್ಯಕರ್ತೆ ಮೇಲೆ ಕಾಂತಪ್ಪ ಪೂಜಾರಿ ಎಂಬ ಆರೋಪಿ ದೊಣ್ಣೆಯಿಂದ ಹಲ್ಲೆ ಮಾಡಿದ್ದಾನೆ,
ಹಲ್ಲೆಗೊಳಗಾದ ಮಮತಾ ಕೈ ಹಾಗೂ ತಲೆಗೆ ಗಂಭೀರ ಗಾಯವಾಗಿದ್ದು ಈ ಸಂಬಂಧ ವಾಮದಪದವು ಸಮುದಾಯದ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಉಮೇಶ್ ಅಡ್ಯಂತಾಯ ದೂರು ದಾಖಲಿಸಿದ್ದಾರೆ.
ವೈದ್ಯಕೀಯ ಅಧಿಕಾರಿ ನೀಡಿದ ದೂರಿನ ಆಧಾರದ ಮೇಲೆ ಪಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ