ಸಂಗ್ರಹ ಚಿತ್ರ 
ರಾಜ್ಯ

ಬಿಬಿಎಂಪಿ ಸದಸ್ಯನ ಸಂಬಂಧಿಯ ಬರ್ಬರ ಹತ್ಯೆ: ದುಷ್ಕರ್ಮಿಗಳಿಗಾಗಿ ಪೊಲೀಸರಿಂದ ತೀವ್ರ ಹುಡುಕಾಟ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸದಸ್ಯರೊಬ್ಬರ ಸಂಬಂಧಿಯೊಬ್ಬರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಗುರುವಾರ ರಾತ್ರಿ ಕಗ್ಗಲಿಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸದಸ್ಯರೊಬ್ಬರ ಸಂಬಂಧಿಯೊಬ್ಬರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಗುರುವಾರ ರಾತ್ರಿ ಕಗ್ಗಲಿಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 

ವಿನೋದ್ (32) ಹತ್ಯೆಯಾದ ವ್ಯಕ್ತಿಯೆಂದು ಗುರ್ತಿಸಲಾಗುತ್ತಿದೆ. ವ್ಯವಹಾರ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗುತ್ತಿದೆ. 

ಹತ್ಯೆಯಾದ ವಿನೋದ್ ನಿನ್ನೆ ತಾತಗುಣಿ ಸಮೀಪವಿರುವ ಅಕ್ಕನ ಮನೆಗೆ ಕಾರಿನಲ್ಲಿ ಹೋಗುತ್ತಿದ್ದ ವೇಳೆ ಚೌಡೇಶ್ವರಿ ಬಸ್ ನಿಲ್ದಾಣದ ಬಳಿ ರಾತ್ರಿ 8.30ರ ಸುಮಾರಿಗೆ ಬೈಕ್ ನಲ್ಲಿ ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ಏಕಾಏಕಿ ಕಾರನ್ನು ಅಡ್ಡಗಟ್ಟಿ ಮಚ್ಚಿನಿಂದ ತಲೆ ಹಾಗೂ ಇತರೆ ಭಾಗಗಳಿಗೆ ಬಲವಾಗಿ ಹೊಡೆದು ನಡು ರಸ್ತೆಯಲ್ಲೇ ಭೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. 

ವಿನೋದ್ ಅವರು ರಿಯಲ್ ಎಸ್ಟೇಟ್ ಜೊತೆಗೆ ಇಟ್ಟಿಗೆ ಹಾಗೂ ಜಲ್ಲಿ ಕ್ರಷರ್ ವ್ಯವಹಾರ ನಡೆಸುತ್ತಿದ್ದರು. ವೃತ್ತಿವೈಷಮ್ಯದಿಂದಲೇ ಹತ್ಯೆ ನಡೆದಿರಬಹುದು ಎಂದು ಶಂಕಿಸಲಾಗುತ್ತಿದೆ. ಕೆಲ ದಿನಗಳ ಹಿಂದಷ್ಟೇ ವಿನೋದ್ ಐಷಾರಾಮಿ ಮನೆಯೊಂದರನ್ನು ಕಟ್ಟಿದ್ದು, ಈ ಸಂಬಂಧ ಕೆಲ ವ್ಯಕ್ತಿಗಳೊಂದಿಗೆ ಮಾತಿನ ಚಕಮಕಿ ಕೂಡ ನಡೆದಿತ್ತು ಎಂದು ಹೇಳಲಾಗುತ್ತಿದೆ. 

ಹತ್ಯೆ ಸಂಬಂಧ ಇದೀಗ ವಿಶೇಷ ತಂಡವೊಂದನ್ನು ರಚಿಸಲಾಗುತ್ತಿದ್ದು, ಪೊಲೀಸರು ಎಲ್ಲಾ ಆಯಾಮದಲ್ಲಿಯೂ ತನಿಖೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT